<p><strong>ಹರಪನಹಳ್ಳಿ: </strong>‘ತಾಲ್ಲೂಕಿನ ಬ್ಲಾಕ್ ಕಾಂಗ್ರೆಸ್ ಸಮಿತಿಯಲ್ಲಿ ಗುಂಪುಗಾರಿಕೆ ಹೆಚ್ಚಾಗಿದ್ದು, ಶೀಘ್ರ ಮಾತುಕತೆಯ ಮೂಲಕ ಒಂದುಗೂಡಿಸುವ ಸಲುವಾಗಿ ತಾಲ್ಲೂಕಿನಲ್ಲಿ ಕಾಂಗ್ರೆಸ್ ಸಮನ್ವಯ ಸಮಿತಿ ರಚಿಸಲಾಗುವುದು’ ಎಂದು ಕ್ಷೇತ್ರ ಉಸ್ತುವಾರಿ, ಚುನಾವಣೆ ವೀಕ್ಷಕ ಅಲ್ಲಂ ವೀರಭದ್ರಪ್ಪ ತಿಳಿಸಿದ್ದಾರೆ.</p>.<p>ಪಟ್ಟಣದ ಆರ್ಎಸ್ಎನ್ ಶಾಲೆಯಲ್ಲಿ ಭಾನುವಾರ ಕಾಂಗ್ರೆಸ್ ಬ್ಲಾಕ್ ಸಮಿತಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.</p>.<p>ಪಕ್ಷದ ಗೊಂದಲದ ಬಗ್ಗೆ ಪ್ರಾಥಮಿಕ ಮಾಹಿತಿಯನ್ನು ಹೈಕಮಾಂಡ್ಗೆ ಸಲ್ಲಿಸಲಾಗುವುದು. ಕಾಂಗ್ರೆಸ್ ಬೆಂಬಲಿತರನ್ನು ಗೆಲ್ಲಿಸಲು ಪ್ರತಿ ಗ್ರಾಮ ಪಂಚಾಯಿತಿಗೂ ಚುನಾವಣೆ ವೀಕ್ಷಕರನ್ನು ನೇಮಿಸಲಾಗುವುದು ಎಂದರು.</p>.<p>‘ಗುಂಪುಗಾರಿಕೆಯಿಂದ ಯಾವ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ. ಪಕ್ಷದ ಗೆಲುವಿಗೆ ಶ್ರಮಿಸಿ. ಪ್ರತಿ ಹೋಬಳಿ, ಗ್ರಾಮ ಪಂಚಾಯಿತಿ ಹಂತದ ಮುಖಂಡರು ತಳಮಟ್ಟದಿಂದ ಕಾರ್ಯಕರ್ತರನ್ನು ಒಗ್ಗೂಡಿಸಲು ಪ್ರಯತ್ನಿಸಿ. ಗುಂಪುಗಾರಿಕೆ ಮಾಡಿದರೆ ಶಿಸ್ತು ಕ್ರಮ ಜರುಗಿಸಲು ಹೈಕಮಾಂಡ್ಗೆ ವರದಿ ಸಲ್ಲಿಸುತ್ತೇನೆ’ ಎಂದರು.</p>.<p class="Subhead">ವೀಕ್ಷಕರಿಗೆ ದೂರು: ಮಹಿಳಾ ಘಟಕದ ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಎಂ.ಪಿ. ಲತಾ ಮಲ್ಲಿಕಾರ್ಜುನ, ‘ಪಕ್ಷದ ಕಾರ್ಯಕ್ರಮ, ಸಭೆಯ ಬಗ್ಗೆ ನಮಗೆ ಮಾಹಿತಿ ಕೊಡುವುದಿಲ್ಲ. ಪಕ್ಷಕ್ಕಾಗಿ ದುಡಿಯುತ್ತಿದ್ದೇವೆ ನಮ್ಮ ಕೆಲಸ ಪರಿಗಣಿಸಿ’ ಎಂದರು.</p>.<p>ಮುಖಂಡ ಕಿತ್ತೂರು ಕೊಟ್ರಪ್ಪ, ‘ತಾಲ್ಲೂಕಿನಲ್ಲಿ ಗುಂಪುಗಾರಿಕೆ ಹೆಚ್ಚಾಗಿ ಕಾರ್ಯಕರ್ತರು ಗೊಂದಲದಲ್ಲಿದ್ದಾರೆ. ನಮ್ಮಂತಹ ನಿಷ್ಟಾವಂತ ಕಾರ್ಯಕರ್ತರ ಗತಿಯೇನು’ ಎಂದು ಪ್ರಶ್ನಿಸಿದರು.</p>.<p>ಎಂ.ಪಿ.ವೀಣಾ ಮಹಾಂತೇಶ್, ‘ಬ್ಲಾಕ್ ಕಾಂಗ್ರೆಸ್ ಸಮಿತಿ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿಲ್ಲ’ ಎಂದರು. </p>.<p>ಪುರಸಭೆ ಸದಸ್ಯ ಎಂ.ವಿ. ಅಂಜಿನಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯ ಹುಲಿಕಟ್ಟೆ ಚಂದ್ರಪ್ಪ, ಕಲ್ಲಹಳ್ಳಿ ಗೋಣೆಪ್ಪ ಸೇರಿದಂತೆ ಅನೇಕ ಸದಸ್ಯರು ವೀಕ್ಷಕರಿಗೆ ದೂರು ಸಲ್ಲಿಸಿದರು.</p>.<p>ಅಲ್ಲಂ ವೀರಭದ್ರಪ್ಪ, ‘ನಿಮ್ಮ ದೂರು ಆಲಿಸಿದ್ದು, ಪ್ರಾಥಮಿಕ ಮಾಹಿತಿ ಹೈಕಮಾಂಡ್ಗೆ ಸಲ್ಲಿಸುತ್ತೇನೆ’ ಎಂದರು.</p>.<p>ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ಎಂ. ಶಿವಯೋಗಿ, ಮುಖಂಡರಾದ ವಿಜಯ್ಕುಮಾರ, ಬೇಲೂರು ಅಂಜಪ್ಪ, ಗೌಸ್ ಮೊಯಿನುದ್ದೀನ್, ಎಸ್.ಮಂಜುನಾಥ್, ಶಶಿಧರ ಪೂಜಾರ್, ಎಚ್.ಬಿ.ಪರಶುರಾಮಪ್ಪ, ಎಚ್.ಕೆ.ಹಾಲೇಶ್, ಪೋಮ್ಯನಾಯ್ಕ, ಪ್ರೇಮ್ಕುಮಾರ, ದಾದಾ ಖಲಂದರ್, ಜಂಬಣ್ಣ, ಪಿ.ಶಿವಕುಮಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪನಹಳ್ಳಿ: </strong>‘ತಾಲ್ಲೂಕಿನ ಬ್ಲಾಕ್ ಕಾಂಗ್ರೆಸ್ ಸಮಿತಿಯಲ್ಲಿ ಗುಂಪುಗಾರಿಕೆ ಹೆಚ್ಚಾಗಿದ್ದು, ಶೀಘ್ರ ಮಾತುಕತೆಯ ಮೂಲಕ ಒಂದುಗೂಡಿಸುವ ಸಲುವಾಗಿ ತಾಲ್ಲೂಕಿನಲ್ಲಿ ಕಾಂಗ್ರೆಸ್ ಸಮನ್ವಯ ಸಮಿತಿ ರಚಿಸಲಾಗುವುದು’ ಎಂದು ಕ್ಷೇತ್ರ ಉಸ್ತುವಾರಿ, ಚುನಾವಣೆ ವೀಕ್ಷಕ ಅಲ್ಲಂ ವೀರಭದ್ರಪ್ಪ ತಿಳಿಸಿದ್ದಾರೆ.</p>.<p>ಪಟ್ಟಣದ ಆರ್ಎಸ್ಎನ್ ಶಾಲೆಯಲ್ಲಿ ಭಾನುವಾರ ಕಾಂಗ್ರೆಸ್ ಬ್ಲಾಕ್ ಸಮಿತಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.</p>.<p>ಪಕ್ಷದ ಗೊಂದಲದ ಬಗ್ಗೆ ಪ್ರಾಥಮಿಕ ಮಾಹಿತಿಯನ್ನು ಹೈಕಮಾಂಡ್ಗೆ ಸಲ್ಲಿಸಲಾಗುವುದು. ಕಾಂಗ್ರೆಸ್ ಬೆಂಬಲಿತರನ್ನು ಗೆಲ್ಲಿಸಲು ಪ್ರತಿ ಗ್ರಾಮ ಪಂಚಾಯಿತಿಗೂ ಚುನಾವಣೆ ವೀಕ್ಷಕರನ್ನು ನೇಮಿಸಲಾಗುವುದು ಎಂದರು.</p>.<p>‘ಗುಂಪುಗಾರಿಕೆಯಿಂದ ಯಾವ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ. ಪಕ್ಷದ ಗೆಲುವಿಗೆ ಶ್ರಮಿಸಿ. ಪ್ರತಿ ಹೋಬಳಿ, ಗ್ರಾಮ ಪಂಚಾಯಿತಿ ಹಂತದ ಮುಖಂಡರು ತಳಮಟ್ಟದಿಂದ ಕಾರ್ಯಕರ್ತರನ್ನು ಒಗ್ಗೂಡಿಸಲು ಪ್ರಯತ್ನಿಸಿ. ಗುಂಪುಗಾರಿಕೆ ಮಾಡಿದರೆ ಶಿಸ್ತು ಕ್ರಮ ಜರುಗಿಸಲು ಹೈಕಮಾಂಡ್ಗೆ ವರದಿ ಸಲ್ಲಿಸುತ್ತೇನೆ’ ಎಂದರು.</p>.<p class="Subhead">ವೀಕ್ಷಕರಿಗೆ ದೂರು: ಮಹಿಳಾ ಘಟಕದ ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಎಂ.ಪಿ. ಲತಾ ಮಲ್ಲಿಕಾರ್ಜುನ, ‘ಪಕ್ಷದ ಕಾರ್ಯಕ್ರಮ, ಸಭೆಯ ಬಗ್ಗೆ ನಮಗೆ ಮಾಹಿತಿ ಕೊಡುವುದಿಲ್ಲ. ಪಕ್ಷಕ್ಕಾಗಿ ದುಡಿಯುತ್ತಿದ್ದೇವೆ ನಮ್ಮ ಕೆಲಸ ಪರಿಗಣಿಸಿ’ ಎಂದರು.</p>.<p>ಮುಖಂಡ ಕಿತ್ತೂರು ಕೊಟ್ರಪ್ಪ, ‘ತಾಲ್ಲೂಕಿನಲ್ಲಿ ಗುಂಪುಗಾರಿಕೆ ಹೆಚ್ಚಾಗಿ ಕಾರ್ಯಕರ್ತರು ಗೊಂದಲದಲ್ಲಿದ್ದಾರೆ. ನಮ್ಮಂತಹ ನಿಷ್ಟಾವಂತ ಕಾರ್ಯಕರ್ತರ ಗತಿಯೇನು’ ಎಂದು ಪ್ರಶ್ನಿಸಿದರು.</p>.<p>ಎಂ.ಪಿ.ವೀಣಾ ಮಹಾಂತೇಶ್, ‘ಬ್ಲಾಕ್ ಕಾಂಗ್ರೆಸ್ ಸಮಿತಿ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿಲ್ಲ’ ಎಂದರು. </p>.<p>ಪುರಸಭೆ ಸದಸ್ಯ ಎಂ.ವಿ. ಅಂಜಿನಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯ ಹುಲಿಕಟ್ಟೆ ಚಂದ್ರಪ್ಪ, ಕಲ್ಲಹಳ್ಳಿ ಗೋಣೆಪ್ಪ ಸೇರಿದಂತೆ ಅನೇಕ ಸದಸ್ಯರು ವೀಕ್ಷಕರಿಗೆ ದೂರು ಸಲ್ಲಿಸಿದರು.</p>.<p>ಅಲ್ಲಂ ವೀರಭದ್ರಪ್ಪ, ‘ನಿಮ್ಮ ದೂರು ಆಲಿಸಿದ್ದು, ಪ್ರಾಥಮಿಕ ಮಾಹಿತಿ ಹೈಕಮಾಂಡ್ಗೆ ಸಲ್ಲಿಸುತ್ತೇನೆ’ ಎಂದರು.</p>.<p>ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ಎಂ. ಶಿವಯೋಗಿ, ಮುಖಂಡರಾದ ವಿಜಯ್ಕುಮಾರ, ಬೇಲೂರು ಅಂಜಪ್ಪ, ಗೌಸ್ ಮೊಯಿನುದ್ದೀನ್, ಎಸ್.ಮಂಜುನಾಥ್, ಶಶಿಧರ ಪೂಜಾರ್, ಎಚ್.ಬಿ.ಪರಶುರಾಮಪ್ಪ, ಎಚ್.ಕೆ.ಹಾಲೇಶ್, ಪೋಮ್ಯನಾಯ್ಕ, ಪ್ರೇಮ್ಕುಮಾರ, ದಾದಾ ಖಲಂದರ್, ಜಂಬಣ್ಣ, ಪಿ.ಶಿವಕುಮಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>