ಅರಸೀಕೆರೆ, ಪುಣಭಘಟ್ಟ, ತವಡೂರು, ಹೊಸಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗರಿಷ್ಠ ಪ್ರಮಾಣದಲ್ಲಿ ಜೋಳ ಬಿತ್ತನೆ ಮಾಡಿರುವುದರಿಂದ ಅಷ್ಟಾಗಿ ಪಕ್ಷಿಗಳ ಕಾಟವಿಲ್ಲ. ಆದರೆ ಉಚ್ಚಂಗಿದುರ್ಗ, ಹಿರೇಮೆಗಳಗೆರೆ, ಲಕ್ಷ್ಮೀಪುರ, ಅಣಜಿಗೆರೆ ಪಂಚಾಯಿತಿ ವ್ಯಾಪ್ತಿಯ ಅಲ್ಲಲ್ಲಿ ಕನಿಷ್ಠ ಪ್ರಮಾಣದಲ್ಲಿ ಜೋಳ ಬಿತ್ತನೆ ಮಾಡಿದ್ದು, ಪಕ್ಷಿಗಳ ಕಾಟಕ್ಕೆ ರೈತರು ನಲುಗಿ ಹೋಗಿದ್ದಾರೆ.