<p><strong>ದಾವಣಗೆರೆ: </strong>ಜಿಲ್ಲೆಯಲ್ಲಿ ಇಬ್ಬರು ಮಹಿಳೆಯರು ಸಹಿತ ಮೂವರಿಗೆ ಸೋಂಕು ಇರುವುದು ಗುರುವಾರ ದೃಢಪಟ್ಟಿದೆ. ಗ್ರಾಮಾಂತರ ಪ್ರದೇಶಗಳಲ್ಲಿಯೂ ಸೋಂಕು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.</p>.<p>ರಾಜಸ್ಥಾನದಿಂದ ಹಿಂತಿರುಗಿರುವ ಆಂಜನೇಯ ಬಡಾವಣೆಯ 25 ವರ್ಷದ ಮಹಿಳೆಯಲ್ಲಿ (ಪಿ.7803) ಸೋಂಕು ಇರುವುದು ಪತ್ತೆಯಾಗಿದೆ.</p>.<p>ದಾವಣಗೆರೆ ತಾಲ್ಲೂಕು ಶ್ಯಾಗಲೆ ಗ್ರಾಮದ 30 ವರ್ಷದ ಯುವಕನಿಗೆ (ಪಿ.7804) ಸೋಂಕು ಇರುವುದು ಖಚಿತವಾಗಿದೆ. ನ್ಯಾಮತಿ ತಾಲ್ಲೂಕಿನ ಬಸವನಹಳ್ಳಿಯ 32 ವರ್ಷದ ಮಹಿಳೆಯಲ್ಲೂ (ಪಿ.7805) ಸೋಂಕು ಕಾಣಿಸಿಕೊಂಡಿದೆ. ಈ ಎರಡೂ ಪ್ರಕರಣಗಳನ್ನು ಶೀತಜ್ವರ (ಐಎಲ್ಐ) ಎಂದು ಗುರುತಿಸಲಾಗಿದೆ. ಯಾರ ಸಂಪರ್ಕದಿಂದ ಕೊರೊನಾ ಬಂದಿದೆ ಎಂಬುದು ಪತ್ತೆಯಾಗಿಲ್ಲ.</p>.<p>ಹೊನ್ನಾಳಿ ತಾಲ್ಲೂಕಿನ ಮಾದೇನಹಳ್ಳಿ, ಚನ್ನಗಿರಿ ತಾಲ್ಲೂಕಿನ ಕೆರೆಬೆಳಚಿ, ಬಸವಾಪಟ್ಟಣ ಹೀಗೆ ಹಿಂದೆಯೂ ಗ್ರಾಮಾಂತರ ಪ್ರದೇಶದ ವ್ಯಕ್ತಿಗಳಲ್ಲಿ ಸೋಂಕು ಕಾಣಿಸಿಕೊಂಡಿತ್ತಾದರೂ ಅವರೆಲ್ಲರೂ ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಬಂದರು, ಕ್ವಾರಂಟೈನ್ನಲ್ಲಿ ಇದ್ದವರು ಆಗಿದ್ದರು. ಆದರೆ ಈ ಬಾರಿ ಶ್ಯಾಗಲೆ ಮತ್ತು ಬಸವನಹಳ್ಳಿಯಲ್ಲಿ ಊರಲ್ಲೇ ಇದ್ದ ಇಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇದುವೇ ಆತಂಕಕ್ಕೆ ಕಾರಣವಾಗಿದೆ.</p>.<p>ಗುರುವಾರ 8 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 233 ಸೋಂಕಿತ ಪ್ರಕರಣಗಳು ದಾಖಲಾಗಿದೆ. ಅದರಲ್ಲಿ 215 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 6 ಮಂದಿ ಮೃತಪಟ್ಟಿದ್ದಾರೆ. ಸಕ್ರಿಯ 12 ಪ್ರಕರಣಗಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಜಿಲ್ಲೆಯಲ್ಲಿ ಇಬ್ಬರು ಮಹಿಳೆಯರು ಸಹಿತ ಮೂವರಿಗೆ ಸೋಂಕು ಇರುವುದು ಗುರುವಾರ ದೃಢಪಟ್ಟಿದೆ. ಗ್ರಾಮಾಂತರ ಪ್ರದೇಶಗಳಲ್ಲಿಯೂ ಸೋಂಕು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.</p>.<p>ರಾಜಸ್ಥಾನದಿಂದ ಹಿಂತಿರುಗಿರುವ ಆಂಜನೇಯ ಬಡಾವಣೆಯ 25 ವರ್ಷದ ಮಹಿಳೆಯಲ್ಲಿ (ಪಿ.7803) ಸೋಂಕು ಇರುವುದು ಪತ್ತೆಯಾಗಿದೆ.</p>.<p>ದಾವಣಗೆರೆ ತಾಲ್ಲೂಕು ಶ್ಯಾಗಲೆ ಗ್ರಾಮದ 30 ವರ್ಷದ ಯುವಕನಿಗೆ (ಪಿ.7804) ಸೋಂಕು ಇರುವುದು ಖಚಿತವಾಗಿದೆ. ನ್ಯಾಮತಿ ತಾಲ್ಲೂಕಿನ ಬಸವನಹಳ್ಳಿಯ 32 ವರ್ಷದ ಮಹಿಳೆಯಲ್ಲೂ (ಪಿ.7805) ಸೋಂಕು ಕಾಣಿಸಿಕೊಂಡಿದೆ. ಈ ಎರಡೂ ಪ್ರಕರಣಗಳನ್ನು ಶೀತಜ್ವರ (ಐಎಲ್ಐ) ಎಂದು ಗುರುತಿಸಲಾಗಿದೆ. ಯಾರ ಸಂಪರ್ಕದಿಂದ ಕೊರೊನಾ ಬಂದಿದೆ ಎಂಬುದು ಪತ್ತೆಯಾಗಿಲ್ಲ.</p>.<p>ಹೊನ್ನಾಳಿ ತಾಲ್ಲೂಕಿನ ಮಾದೇನಹಳ್ಳಿ, ಚನ್ನಗಿರಿ ತಾಲ್ಲೂಕಿನ ಕೆರೆಬೆಳಚಿ, ಬಸವಾಪಟ್ಟಣ ಹೀಗೆ ಹಿಂದೆಯೂ ಗ್ರಾಮಾಂತರ ಪ್ರದೇಶದ ವ್ಯಕ್ತಿಗಳಲ್ಲಿ ಸೋಂಕು ಕಾಣಿಸಿಕೊಂಡಿತ್ತಾದರೂ ಅವರೆಲ್ಲರೂ ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಬಂದರು, ಕ್ವಾರಂಟೈನ್ನಲ್ಲಿ ಇದ್ದವರು ಆಗಿದ್ದರು. ಆದರೆ ಈ ಬಾರಿ ಶ್ಯಾಗಲೆ ಮತ್ತು ಬಸವನಹಳ್ಳಿಯಲ್ಲಿ ಊರಲ್ಲೇ ಇದ್ದ ಇಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇದುವೇ ಆತಂಕಕ್ಕೆ ಕಾರಣವಾಗಿದೆ.</p>.<p>ಗುರುವಾರ 8 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 233 ಸೋಂಕಿತ ಪ್ರಕರಣಗಳು ದಾಖಲಾಗಿದೆ. ಅದರಲ್ಲಿ 215 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 6 ಮಂದಿ ಮೃತಪಟ್ಟಿದ್ದಾರೆ. ಸಕ್ರಿಯ 12 ಪ್ರಕರಣಗಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>