ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

94 ಜನರಿಗೆ ಕೊರೊನಾ; 57 ಮಂದಿ ಗುಣಮುಖ

Last Updated 30 ಅಕ್ಟೋಬರ್ 2020, 10:42 IST
ಅಕ್ಷರ ಗಾತ್ರ

ದಾವಣಗೆರೆ: ಜಿಲ್ಲೆಯಲ್ಲಿ94 ಜನರಿಗೆಕೊರೊನಾ ಇರುವುದು ಗುರುವಾರ ದೃಢಪಟ್ಟಿದೆ. ವೃದ್ಧರೊಬ್ಬರು ಮೃತಪಟ್ಟಿದ್ದಾರೆ. 57 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

ಕೋವಿಡ್‌ ದೃಢಪಟ್ಟಿದ್ದ ಸಂತೇಬೆನ್ನೂರಿನ 63 ವರ್ಷದ ವೃದ್ಧರೊಬ್ಬರು ಅಧಿಕ ರಕ್ತದೊತ್ತಡದಿಂದ ಚಿಗಟೇರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ದಾವಣಗೆರೆ ತಾಲ್ಲೂಕಿನಲ್ಲಿ 39, ಹರಿಹರ ತಾಲ್ಲೂಕಿನಲ್ಲಿ 21, ಹೊನ್ನಾಳಿ–ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ 15, ಜಗಳೂರು ತಾಲ್ಲೂಕಿನಲ್ಲಿ 7 ಹಾಗೂ ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 11 ಮಂದಿಗೆ ಕೊರೊನಾ ಬಂದಿದೆ. ಇಲ್ಲಿನ ಜಿಗಟೇರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದ ಹೊರ ಜಿಲ್ಲೆಯ ಒಬ್ಬರಿಗೆ ಕೊರೊನಾ ಸೋಂಕು ಇರುವುದು ಖಚಿತವಾಗಿದೆ.

ಜಿಲ್ಲೆಯಲ್ಲಿ ಈವರೆಗೆ 20,672 ಮಂದಿಗೆ ಸೋಂಕು ತಗುಲಿದೆ. 19,622 ಜನ ಗುಣಮುಖರಾಗಿದ್ದಾರೆ. 256 ಮಂದಿ ಮೃತಪಟ್ಟಿದ್ದಾರೆ. 794 ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT