‘ಕೋವಿಡ್–19 ಪ್ರಕರಣ ದಿನೇ ದಿನೇ ಜಾಸ್ತಿಯಾಗುತ್ತಿದೆ. ಎಲ್ಲ ಆಸ್ಪತ್ರೆಗಳು ಒಗ್ಗೂಡಿಸಿ ಕೆಲಸ ಮಾಡುತ್ತಿರುವುದರಿಂದ ಮರಣ ಪ್ರಮಾಣ ಕಡಿಮೆಯಾಗಿದೆ. ಹಿಂದೆ ನಗರ ಪ್ರದೇಶದಲ್ಲಿ ಮಾತ್ರ ಕಂಡು ಬರುತ್ತಿದ್ದ ಪ್ರಕರಣ ಈಗ ಎಲ್ಲ ಗ್ರಾಮೀಣ ಪ್ರದೇಶಗಳಲ್ಲಿಯೂ ಪತ್ತೆಯಾಗುತ್ತಿದೆ. ಮಾರ್ಚ್, ಏಪ್ರಿಲ್, ಮೇ ತಿಂಗಳುಗಳಲ್ಲಿ ವಹಿಸಿದ್ದ ಎಚ್ಚರವನ್ನು ಈಗ ವಹಿಸುತ್ತಿಲ್ಲ. ಮಾಸ್ಕ್ ಧರಿಸುತ್ತಿಲ್ಲ. ಅಂತರ ಕಾಪಾಡಿಕೊಳ್ಳುತ್ತಿಲ್ಲ. ಅನಿವಾರ್ಯ ಸಂದರ್ಭದಲ್ಲಿ ಮಾತ್ರ ಹೊರಗೆ ಹೋಗುವ ಬದಲು ಎಲ್ಲ ಸಮಯದಲ್ಲಿ ಹೊರಗೆ ಹೋಗುತ್ತಿದ್ದಾರೆ. ಮತ್ತೆ ಆ ಎಚ್ಚರಿಕೆಗಳನ್ನು ವಹಿಸಬೇಕು. ಪರೀಕ್ಷೆ ಮಾಡುವ ತಂಡಗಳಿಗೆ ಸಹಕಾರ ನೀಡಬೇಕು’ ಎಂದು ಮಹಾಂತೇಶ ಬೀಳಗಿ ಮಂಗಳವಾರ ವಿಡಿಯೊ ಮೂಲಕ ವಿನಂತಿಸಿದ್ದರು.