ಸೋಂಕಿತರಲ್ಲಿ ಆತ್ಮಸ್ಥೈರ್ಯ ತುಂಬಲು ಕೋವಿಡ್ ಕೇಂದ್ರದಲ್ಲಿ ರೇಣುಕಾಚಾರ್ಯ ವಾಸ್ತವ್ಯ

ಹೊನ್ನಾಳಿ: ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಪತ್ನಿ ಸುಮಾ ಅವರೊಂದಿಗೆ ಕೋವಿಡ್ ಕೇಂದ್ರದಲ್ಲಿ ವಾಸ್ತವ್ಯ ಮಾಡುವ ಮೂಲಕ ಸೋಂಕಿತರಲ್ಲಿ ಆತ್ಮಸ್ಥೈರ್ಯ ತುಂಬಿದರು.
ತಾಲ್ಲೂಕಿನ ಅರಬಗಟ್ಟೆ ಕೋವಿಡ್ ಕೇಂದ್ರದಲ್ಲಿ ಗುರುವಾರ ರಾತ್ರಿ ವಾಸ್ತವ್ಯ ಹೂಡಿರುವ ಶಾಸಕರು, ಶನಿವಾರದವರೆಗೂ ಇಲ್ಲಿಯೇ ಇರಲಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೋವಿಡ್ ಕೇಂದ್ರದಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ವಾಸ್ತವ್ಯ ಮಾಡಿದ್ದು, ಇದೊಂದು ವಿಶೇಷ ಅನುಭವವಾಗಿದೆ. ಇಲ್ಲಿ ವಾಸ್ತವ್ಯ ಮಾಡುವುದರಿಂದ ಸೋಂಕಿತರು ಸೇವಿಸುವ ಆಹಾರದ ಗುಣಮಟ್ಟದ ಜೊತೆಗೆ, ಸಿಬ್ಬಂದಿ ಹೇಗೆ ಕೆಲಸ ಮಾಡುತ್ತಾರೆ ಎಂಬುದೂ ತಿಳಿಯಿತು. ಸೋಂಕಿತರಿಗೆ ಮನರಂಜನೆ ನೀಡುವ ಮೂಲಕ ಆತ್ಮಸ್ಥೈರ್ಯ ತುಂಬಲು ಮತ್ತು ಸೋಂಕಿತರ ನೋವು ಕಡಿಮೆ ಮಾಡುವ ಉದ್ದೇಶಕ್ಕಾಗಿ ಸಂಗೀತ ಸಂಜೆ ಹಮ್ಮಿಕೊಳ್ಳಲಾಗಿದೆ’ ಎಂದರು.
ಬೆಳಿಗ್ಗೆ ಯೋಗಾಭ್ಯಾಸ ಮಾಡಿದ ಶಾಸಕರು, ಅಡುಗೆ ಸಿಬ್ಬಂದಿಯೊಂದಿಗೆ ಸೇರಿ ತಿಂಡಿ ತಯಾರಿಸಿದರು. ಸೋಂಕಿತರಿಗೆ ಉಪಾಹಾರ ಬಡಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.