<p><strong>ದಾವಣಗೆರೆ:</strong> ದೇಶದ ನೈಸರ್ಗಿಕ ಸಂಪತ್ತನ್ನು ಲೂಟಿ ಹೊಡೆಯುತ್ತಿರುವ ವಿದೇಶಿ ಕಾರ್ಪೊರೇಟ್ ಕಂಪನಿಗಳು ದೇಶ ಬಿಟ್ಟು ತೊಲಗಬೇಕು ಎಂದು ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಮತ್ತು ಕೇಂದ್ರೀಯ ಕಾರ್ಮಿಕ ಸಂಘಗಳ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.</p>.<p>‘ಬ್ರಿಟಿಷರೇ ಭಾರತ ಬಿಟ್ಟು ತೊಲಗಿ’ ಚಳವಳಿಯ ನೆನಪಿಗಾಗಿ ನಗರದ ಜಯದೇವ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಕಾರರು, ಕಾರ್ಪೊರೇಟ್ ಕಂಪನಿಗಳ ವಿರುದ್ಧ ಘೋಷಣೆ ಕೂಗಿದರು. ಅಲ್ಲಿಂದ ಮೆರವಣಿಗೆ ಹೊರಟು ಉಪವಿಭಾಗಾಧಿಕಾರಿ ಕಚೇರಿ ತಲುಪಿ ಮನವಿ ಪತ್ರ ಸಲ್ಲಿಸಿದರು.</p>.<p>‘ಸ್ವಾತಂತ್ರ್ಯ ಹೋರಾಟದಲ್ಲಿ ‘ಬ್ರಿಟಿಷರೇ ಭಾರತ ಬಿಟ್ಟು ತೊಲಗಿ’ ಪ್ರಮುಖ ಚಳವಳಿ. 1942ರಲ್ಲಿ ನಡೆದ ಈ ಹೋರಾಟ ಐತಿಹಾಸಿಕ ಮಹತ್ವ ಪಡೆದುಕೊಂಡಿದೆ. ಸ್ವಾತಂತ್ರ್ಯಾನಂತರದಲ್ಲಿ ಕಾರ್ಪೊರೇಟ್ ಕಂಪನಿಗಳು ಜನರನ್ನು ಶೋಷಣೆ ಮಾಡುತ್ತಿವೆ. ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಕಾರ್ಪೊರೇಟ್ ಕಂಪನಿಗಳ ಪರವಾದ ನೀತಿ ಅನುಷ್ಠಾನಕ್ಕೆ ಬರುತ್ತಿದೆ’ ಎಂದು ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆ ಮುಖಂಡ ಎಚ್.ಜಿ. ಉಮೇಶ್ ಆರೋಪಿಸಿದರು.</p>.<p>‘ಕೃಷಿ ವಲಯ ಪ್ರವೇಶಕ್ಕೆ ಬಹುರಾಷ್ಟ್ರೀಯ ಕಂಪನಿಗಳಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಇದು ದೇಶದ ರೈತರ ಮೇಲೆ ಬಹುದೊಡ್ಡ ಪರಿಣಾಮವನ್ನುಂಟು ಮಾಡಲಿದೆ. ಭಾರತದ ಉತ್ಪನ್ನಗಳಿಗೆ ಅಮೆರಿಕ ಹೆಚ್ಚು ಸುಂಕ ವಿಧಿಸುವ ಬೆದರಿಕೆ ಹಾಕುತ್ತಿದೆ. ಈ ಬೆದರಿಕೆಯನ್ನು ಕೇಂದ್ರ ಸರ್ಕಾರ ಸಮರ್ಥವಾಗಿ ಎದುರಿಸಬೇಕು’ ಎಂದು ಒತ್ತಾಯಿಸಿದರು.</p>.<p>ಮುಖಂಡರಾದ ಸುರೇಶ್ ಎರಗುಂಟೆ, ಮಧು ತೋಗಲೇರೆ, ಈ. ಉಮೇಶ್, ಆವರಗೆರೆ ಚಂದ್ರು, ಆನಂದರಾಜ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ದೇಶದ ನೈಸರ್ಗಿಕ ಸಂಪತ್ತನ್ನು ಲೂಟಿ ಹೊಡೆಯುತ್ತಿರುವ ವಿದೇಶಿ ಕಾರ್ಪೊರೇಟ್ ಕಂಪನಿಗಳು ದೇಶ ಬಿಟ್ಟು ತೊಲಗಬೇಕು ಎಂದು ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಮತ್ತು ಕೇಂದ್ರೀಯ ಕಾರ್ಮಿಕ ಸಂಘಗಳ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.</p>.<p>‘ಬ್ರಿಟಿಷರೇ ಭಾರತ ಬಿಟ್ಟು ತೊಲಗಿ’ ಚಳವಳಿಯ ನೆನಪಿಗಾಗಿ ನಗರದ ಜಯದೇವ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಕಾರರು, ಕಾರ್ಪೊರೇಟ್ ಕಂಪನಿಗಳ ವಿರುದ್ಧ ಘೋಷಣೆ ಕೂಗಿದರು. ಅಲ್ಲಿಂದ ಮೆರವಣಿಗೆ ಹೊರಟು ಉಪವಿಭಾಗಾಧಿಕಾರಿ ಕಚೇರಿ ತಲುಪಿ ಮನವಿ ಪತ್ರ ಸಲ್ಲಿಸಿದರು.</p>.<p>‘ಸ್ವಾತಂತ್ರ್ಯ ಹೋರಾಟದಲ್ಲಿ ‘ಬ್ರಿಟಿಷರೇ ಭಾರತ ಬಿಟ್ಟು ತೊಲಗಿ’ ಪ್ರಮುಖ ಚಳವಳಿ. 1942ರಲ್ಲಿ ನಡೆದ ಈ ಹೋರಾಟ ಐತಿಹಾಸಿಕ ಮಹತ್ವ ಪಡೆದುಕೊಂಡಿದೆ. ಸ್ವಾತಂತ್ರ್ಯಾನಂತರದಲ್ಲಿ ಕಾರ್ಪೊರೇಟ್ ಕಂಪನಿಗಳು ಜನರನ್ನು ಶೋಷಣೆ ಮಾಡುತ್ತಿವೆ. ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಕಾರ್ಪೊರೇಟ್ ಕಂಪನಿಗಳ ಪರವಾದ ನೀತಿ ಅನುಷ್ಠಾನಕ್ಕೆ ಬರುತ್ತಿದೆ’ ಎಂದು ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆ ಮುಖಂಡ ಎಚ್.ಜಿ. ಉಮೇಶ್ ಆರೋಪಿಸಿದರು.</p>.<p>‘ಕೃಷಿ ವಲಯ ಪ್ರವೇಶಕ್ಕೆ ಬಹುರಾಷ್ಟ್ರೀಯ ಕಂಪನಿಗಳಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಇದು ದೇಶದ ರೈತರ ಮೇಲೆ ಬಹುದೊಡ್ಡ ಪರಿಣಾಮವನ್ನುಂಟು ಮಾಡಲಿದೆ. ಭಾರತದ ಉತ್ಪನ್ನಗಳಿಗೆ ಅಮೆರಿಕ ಹೆಚ್ಚು ಸುಂಕ ವಿಧಿಸುವ ಬೆದರಿಕೆ ಹಾಕುತ್ತಿದೆ. ಈ ಬೆದರಿಕೆಯನ್ನು ಕೇಂದ್ರ ಸರ್ಕಾರ ಸಮರ್ಥವಾಗಿ ಎದುರಿಸಬೇಕು’ ಎಂದು ಒತ್ತಾಯಿಸಿದರು.</p>.<p>ಮುಖಂಡರಾದ ಸುರೇಶ್ ಎರಗುಂಟೆ, ಮಧು ತೋಗಲೇರೆ, ಈ. ಉಮೇಶ್, ಆವರಗೆರೆ ಚಂದ್ರು, ಆನಂದರಾಜ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>