<p><strong>ದಾವಣಗೆರೆ:</strong> ಪತ್ನಿ ಹಾಗೂ ನಾದಿನಿಯ ಕೊಲೆ ಮಾಡಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ ಮತ್ತು ₹ 20 ಸಾವಿರ ದಂಡ ವಿಧಿಸಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.</p>.<p>ಕೂಡ್ಲಿಗಿ ತಾಲ್ಲೂಕಿನ ಬೆನಕನಹಳ್ಳಿಯ ಡಿ. ಮಂಜುನಾಥ್ (27) ಶಿಕ್ಷೆಗೆ ಗುರಿಯಾದ ಅಪರಾಧಿ. ಪತ್ನಿ ಗೌರಮ್ಮ ಹಾಗೂ ನಾದಿನಿ ರಾಧಮ್ಮ ಅವರನ್ನು ಅಪರಾಧಿ 2021ರ ಜುಲೈ 29ರಂದು ಕೊಲೆ ಮಾಡಿದ್ದನು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಎಂ.ಎಚ್ ಅಣ್ಣಯ್ಯನವರ್ ಸೋಮವಾರ ಆದೇಶ ನೀಡಿದ್ದಾರೆ.</p>.<p>ಪತಿಯಿಂದ ದೂರವಾಗಿದ್ದ ಗೌರಮ್ಮ, ಸಹೋದರಿ ರಾಧಮ್ಮ ಅವರೊಂದಿಗೆ ಆಂಜನೇಯ ಕಾಟನ್ ಮಿಲ್ನಲ್ಲಿ ಕೆಲಸ ಮಾಡುತ್ತಿದ್ದರು. ಪತ್ನಿಯ ಶೀಲ ಶಂಕಿಸುತ್ತಿದ್ದ ಮಂಜುನಾಥ್, ಆಗಾಗ ದಾವಣಗೆರೆಯ ಮನೆಗೆ ಬಂದು ಪತ್ನಿಯೊಂದಿಗೆ ಗಲಾಟೆ ಮಾಡುತ್ತಿದ್ದನು. ಈ ಗಲಾಟೆ ವಿಕೋಪಕ್ಕೆ ತಿರುಗಿ ಇಬ್ಬರನ್ನು ಕೊಲೆಗೈದು ತಲೆಮರೆಸಿಕೊಂಡಿದ್ದನು.</p>.<p>ಪ್ರಕರಣ ದಾಖಲಿಸಿಕೊಂಡಿದ್ದ ಸಿಪಿಐ ಎಚ್. ಗುರುಬಸವರಾಜ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ವಕೀಲ ಕೆ.ಎಸ್. ಸತೀಶ್ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಪತ್ನಿ ಹಾಗೂ ನಾದಿನಿಯ ಕೊಲೆ ಮಾಡಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ ಮತ್ತು ₹ 20 ಸಾವಿರ ದಂಡ ವಿಧಿಸಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.</p>.<p>ಕೂಡ್ಲಿಗಿ ತಾಲ್ಲೂಕಿನ ಬೆನಕನಹಳ್ಳಿಯ ಡಿ. ಮಂಜುನಾಥ್ (27) ಶಿಕ್ಷೆಗೆ ಗುರಿಯಾದ ಅಪರಾಧಿ. ಪತ್ನಿ ಗೌರಮ್ಮ ಹಾಗೂ ನಾದಿನಿ ರಾಧಮ್ಮ ಅವರನ್ನು ಅಪರಾಧಿ 2021ರ ಜುಲೈ 29ರಂದು ಕೊಲೆ ಮಾಡಿದ್ದನು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಎಂ.ಎಚ್ ಅಣ್ಣಯ್ಯನವರ್ ಸೋಮವಾರ ಆದೇಶ ನೀಡಿದ್ದಾರೆ.</p>.<p>ಪತಿಯಿಂದ ದೂರವಾಗಿದ್ದ ಗೌರಮ್ಮ, ಸಹೋದರಿ ರಾಧಮ್ಮ ಅವರೊಂದಿಗೆ ಆಂಜನೇಯ ಕಾಟನ್ ಮಿಲ್ನಲ್ಲಿ ಕೆಲಸ ಮಾಡುತ್ತಿದ್ದರು. ಪತ್ನಿಯ ಶೀಲ ಶಂಕಿಸುತ್ತಿದ್ದ ಮಂಜುನಾಥ್, ಆಗಾಗ ದಾವಣಗೆರೆಯ ಮನೆಗೆ ಬಂದು ಪತ್ನಿಯೊಂದಿಗೆ ಗಲಾಟೆ ಮಾಡುತ್ತಿದ್ದನು. ಈ ಗಲಾಟೆ ವಿಕೋಪಕ್ಕೆ ತಿರುಗಿ ಇಬ್ಬರನ್ನು ಕೊಲೆಗೈದು ತಲೆಮರೆಸಿಕೊಂಡಿದ್ದನು.</p>.<p>ಪ್ರಕರಣ ದಾಖಲಿಸಿಕೊಂಡಿದ್ದ ಸಿಪಿಐ ಎಚ್. ಗುರುಬಸವರಾಜ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ವಕೀಲ ಕೆ.ಎಸ್. ಸತೀಶ್ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>