ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಕ್‌ಡೌನ್‌: ಅನಗತ್ಯವಾಗಿ ಸಂಚರಿಸಿದವರಿಗೆ ದಂಡ

Last Updated 10 ಮೇ 2021, 8:02 IST
ಅಕ್ಷರ ಗಾತ್ರ

ದಾವಣಗೆರೆ: ರಾಜ್ಯ ಸರ್ಕಾರ ಘೋಷಿಸಿರುವ 14 ದಿನಗಳ ಲಾಕ್‌ಡೌನ್‌ಇಂದಿನಿಂದ ಆರಂಭವಾಗಿದೆ.ಸೋಮವಾರ ಪೊಲೀಸರು ರಸ್ತೆಗಿಳಿದಿದ್ದು,ಸೂಕ್ತ ದಾಖಲೆಗಳನ್ನು ತೋರಿಸದ ವಾಹನಗಳನ್ನು ವಶಕ್ಕೆ ಪಡೆದುಕೊಂಡರು.

ನಗರದ ಜಯದೇವ ಸರ್ಕಲ್, ಗುಂಡಿ ಸರ್ಕಲ್, ಅಂಬೇಡ್ಕರ್ ವೃತ್ತ, ಗಾಂಧಿ ಸರ್ಕಲ್ ಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿ ಅನಗತ್ಯವಾಗಿ ಸಂಚರಿಸುವವರಿಗೆ ತಡೆಯೊಡ್ಡಿದರು.

ಜಿಲ್ಲಾ ಗಡಿಗಳನ್ನು ಸಂಪರ್ಕಿಸುವ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಲಾಗಿದ್ದು, ಆಂಬುಲೆನ್ಸ್, ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿತ್ತು.

ರಸ್ತೆಗಿಳಿದ ತಹಶೀಲ್ದಾರ್
ದಾವಣಗೆರೆ ತಾಲ್ಲೂಕು ತಹಶಿಲ್ದಾರ್ ಬಿ.ಎನ್. ಗಿರೀಶ್ ಅವರು ರಸ್ತೆಗೆ ಇಳಿದಿದ್ದು, ಅನವಶ್ಯಕವಾಗಿ ಓಡಾಡುತ್ತಿದ್ದವರಿಗೆ ದಂಡ ವಿಧಿಸಿದರು. ನಗರದ ಜಯದೇವ ಸರ್ಕಲ್‌ನಲ್ಲಿ ದಾಖಲೆ ನೀಡದ 15 ವಾಹನಗಳ ಜಪ್ತಿ ಮಾಡಿದರು.ಮೇಯರ್ ಎಸ್.ಟಿ.ವೀರೇಶ್ ಅವರೂ ಇದಕ್ಕೆ ಸಾಥ್ ನೀಡಿದರು.

ತಹಶೀಲ್ದಾರ್ ಬಿಎನ್. ಗಿರೀಶ್ ಮಾತನಾಡಿ, ರಾಜ್ಯ ಸರ್ಕಾರದ ಅದೇಶವನ್ನು ಪಾಲನೆ ಮಾಡಬೇಕು ಇಲ್ಲದಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಬೆಳಿಗ್ಗೆ 10ಗಂಟೆಯವರೆಗೆ ದಿನಸಿ ಖರೀದಿಗೆ ಅವಕಾಶ ನೀಡಿದ್ದು, ಬಳಿಕ ಅಂಗಡಿ ಮಾಲೀಕರು ಸ್ವಯಂಪ್ರೇರಿತವಾಗಿ ಬಾಗಿಲು ಮುಚ್ಚಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT