<p><strong>ದಾವಣಗೆರೆ</strong>: ಲಾಕ್ಡೌನ್ನಿಂದ ಸಂಕಷ್ಟಕ್ಕೆ ಒಳಗಾಗಿ ತಾಲ್ಲೂಕಿನ ಮೆಳ್ಳಕಟ್ಟೆ ಗ್ರಾಮದ ರೈತನಿಗೆ ಚಿತ್ರ ನಟ ಉಪೇಂದ್ರ ನೆರವಾಗಿದ್ದಾರೆ.</p>.<p>ರೈತ ಜಯವರ್ಧನ ಹಾಗೂ ಸಹೋದರ ದೇವರಾಜ್ ಅವರು ಬೆಳೆದಿದ್ದ 25 ಕೆ.ಜಿ.ಯ 10 ಬಾಕ್ಸ್ ಪೇರಲ ಹಣ್ಣನ್ನು ಖರೀದಿಸಿ ಜನರಿಗೆ ಉಚಿತವಾಗಿ ಹಂಚಿದ್ದಾರೆ.</p>.<p>ಜಯವರ್ಧನ ಅವರು 3 ಎಕರೆ ಜಮೀನಿನಲ್ಲಿ ಪೇರಲವನ್ನು ಬೆಳೆದಿದ್ದಾರೆ. ಕಟಾವು ಮಾಡುವ ವೇಳೆಗೆ ಲಾಕ್ಡೌನ್ ಶುರುವಾಯಿತು.</p>.<p>ಹೊರಗಡೆ ಮಾರಾಟ ಮಾಡಲು ಹೋದರೆ ದಲ್ಲಾಳಿಗಳು ಒಂದು ಬಾಕ್ಸ್ಗೆ ₹ 100ಕ್ಕೆ ಕೇಳುತ್ತಿದ್ದರು. ಇದು ಬೆಳೆದಿರುವ ಖರ್ಚಿಗೂ ಸಾಕಾಗುತ್ತಿರಲಿಲ್ಲ.</p>.<p>ರೈತರ ಸಂಕಷ್ಟಕ್ಕೆ ನೆರವಾಗುವ ನಿಟ್ಟಿನಲ್ಲಿ ನಟ ಉಪೇಂದ್ರ ಅವರು ಫೇಸ್ಬುಕ್ ಪೇಜ್ ತೆರೆದಿದ್ದು, ಜಯವರ್ಧನ ಅವರು ತಮ್ಮ ಮೊಬೈಲ್ ನಂಬರ್ ಹಾಕಿ ಅಳಲು ತೋಡಿಕೊಂಡಿದ್ದರು. ಇದನ್ನು ಗಮನಿಸಿದ ಉಪೇಂದ್ರ ಅವರು ರೈತನನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಂಡರು.</p>.<p>ದಾವಣಗೆರೆಯ ಅಭಿಮಾನಿಯೊಬ್ಬರನ್ನು ಕಳುಹಿಸಿ ಒಂದು ಬಾಕ್ಸ್ಗೆ ₹ 300ರಂತೆ 10 ಬಾಕ್ಸ್ ಖರೀದಿಸಿ ₹ 3 ಸಾವಿರ ನೀಡಿದರು.</p>.<p>‘ಲಾಕ್ಡೌನ್ ಇಲ್ಲದಿದ್ದರೆ ಒಂದು ಬಾಕ್ಸ್ಗೆ ₹ 700ರಿಂದ ₹ 800 ದರ ಸಿಗುತ್ತಿತ್ತು. ₹4 ಲಕ್ಷದಿಂದ ₹ 5 ಲಕ್ಷ ವಹಿವಾಟು ನಡೆದು ₹ 2.50 ಲಕ್ಷ ಲಾಭ ಸಿಗುತ್ತಿತ್ತು. ಆದರೆ ಲಾಕ್ಡೌನ್ನಿಂದಾಗಿ ಜಮೀನಿನಲ್ಲಿ ಪೇರಲ ಕೊಳೆತುಹೋಗಿದೆ. ₹2 ಲಕ್ಷ ಖರ್ಚು ಮಾಡಿದ್ದು, ಈ ಹಣವೂ ಸಿಗುತ್ತಿಲ್ಲ‘ ಎಂದು ರೈತ ದೇವರಾಜ್ ಅಳಲು ತೋಡಿಕೊಂಡರು.</p>.<p>‘ಈಗ ಮತ್ತೊಂದು ಬಾರಿಗೆ ಲಾಕ್ಡೌನ್ ಆಗಿದ್ದು, ಇನ್ನೂ 200 ಬಾಕ್ಸ್ ಪೇರಲ ಹಣ್ಣು ಹೊಲದಲ್ಲೇ ಕೊಳೆಯುತ್ತಿದೆ. ನಟ ಉಪೇಂದ್ರ ಅವರು ಒಳ್ಳೆಯ ಉದ್ದೇಶದಿಂದ ಫೇಸ್ಬುಕ್ ಪೇಜ್ ತೆರೆದಿದ್ದಾರೆ. ಇದೇ ರೀತಿ ಜನರು ಸಹಾಯಕ್ಕೆ ಮುಂದೆ ಬರಬೇಕು’ ಎಂದು ದೇವರಾಜ್ ಮನವಿ ಮಾಡುತ್ತಾರೆ.</p>.<p><strong>ದೇವರಾಜ್ ಅವರ ಸಂಪರ್ಕ ಸಂಖ್ಯೆ: </strong>8073176365</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಲಾಕ್ಡೌನ್ನಿಂದ ಸಂಕಷ್ಟಕ್ಕೆ ಒಳಗಾಗಿ ತಾಲ್ಲೂಕಿನ ಮೆಳ್ಳಕಟ್ಟೆ ಗ್ರಾಮದ ರೈತನಿಗೆ ಚಿತ್ರ ನಟ ಉಪೇಂದ್ರ ನೆರವಾಗಿದ್ದಾರೆ.</p>.<p>ರೈತ ಜಯವರ್ಧನ ಹಾಗೂ ಸಹೋದರ ದೇವರಾಜ್ ಅವರು ಬೆಳೆದಿದ್ದ 25 ಕೆ.ಜಿ.ಯ 10 ಬಾಕ್ಸ್ ಪೇರಲ ಹಣ್ಣನ್ನು ಖರೀದಿಸಿ ಜನರಿಗೆ ಉಚಿತವಾಗಿ ಹಂಚಿದ್ದಾರೆ.</p>.<p>ಜಯವರ್ಧನ ಅವರು 3 ಎಕರೆ ಜಮೀನಿನಲ್ಲಿ ಪೇರಲವನ್ನು ಬೆಳೆದಿದ್ದಾರೆ. ಕಟಾವು ಮಾಡುವ ವೇಳೆಗೆ ಲಾಕ್ಡೌನ್ ಶುರುವಾಯಿತು.</p>.<p>ಹೊರಗಡೆ ಮಾರಾಟ ಮಾಡಲು ಹೋದರೆ ದಲ್ಲಾಳಿಗಳು ಒಂದು ಬಾಕ್ಸ್ಗೆ ₹ 100ಕ್ಕೆ ಕೇಳುತ್ತಿದ್ದರು. ಇದು ಬೆಳೆದಿರುವ ಖರ್ಚಿಗೂ ಸಾಕಾಗುತ್ತಿರಲಿಲ್ಲ.</p>.<p>ರೈತರ ಸಂಕಷ್ಟಕ್ಕೆ ನೆರವಾಗುವ ನಿಟ್ಟಿನಲ್ಲಿ ನಟ ಉಪೇಂದ್ರ ಅವರು ಫೇಸ್ಬುಕ್ ಪೇಜ್ ತೆರೆದಿದ್ದು, ಜಯವರ್ಧನ ಅವರು ತಮ್ಮ ಮೊಬೈಲ್ ನಂಬರ್ ಹಾಕಿ ಅಳಲು ತೋಡಿಕೊಂಡಿದ್ದರು. ಇದನ್ನು ಗಮನಿಸಿದ ಉಪೇಂದ್ರ ಅವರು ರೈತನನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಂಡರು.</p>.<p>ದಾವಣಗೆರೆಯ ಅಭಿಮಾನಿಯೊಬ್ಬರನ್ನು ಕಳುಹಿಸಿ ಒಂದು ಬಾಕ್ಸ್ಗೆ ₹ 300ರಂತೆ 10 ಬಾಕ್ಸ್ ಖರೀದಿಸಿ ₹ 3 ಸಾವಿರ ನೀಡಿದರು.</p>.<p>‘ಲಾಕ್ಡೌನ್ ಇಲ್ಲದಿದ್ದರೆ ಒಂದು ಬಾಕ್ಸ್ಗೆ ₹ 700ರಿಂದ ₹ 800 ದರ ಸಿಗುತ್ತಿತ್ತು. ₹4 ಲಕ್ಷದಿಂದ ₹ 5 ಲಕ್ಷ ವಹಿವಾಟು ನಡೆದು ₹ 2.50 ಲಕ್ಷ ಲಾಭ ಸಿಗುತ್ತಿತ್ತು. ಆದರೆ ಲಾಕ್ಡೌನ್ನಿಂದಾಗಿ ಜಮೀನಿನಲ್ಲಿ ಪೇರಲ ಕೊಳೆತುಹೋಗಿದೆ. ₹2 ಲಕ್ಷ ಖರ್ಚು ಮಾಡಿದ್ದು, ಈ ಹಣವೂ ಸಿಗುತ್ತಿಲ್ಲ‘ ಎಂದು ರೈತ ದೇವರಾಜ್ ಅಳಲು ತೋಡಿಕೊಂಡರು.</p>.<p>‘ಈಗ ಮತ್ತೊಂದು ಬಾರಿಗೆ ಲಾಕ್ಡೌನ್ ಆಗಿದ್ದು, ಇನ್ನೂ 200 ಬಾಕ್ಸ್ ಪೇರಲ ಹಣ್ಣು ಹೊಲದಲ್ಲೇ ಕೊಳೆಯುತ್ತಿದೆ. ನಟ ಉಪೇಂದ್ರ ಅವರು ಒಳ್ಳೆಯ ಉದ್ದೇಶದಿಂದ ಫೇಸ್ಬುಕ್ ಪೇಜ್ ತೆರೆದಿದ್ದಾರೆ. ಇದೇ ರೀತಿ ಜನರು ಸಹಾಯಕ್ಕೆ ಮುಂದೆ ಬರಬೇಕು’ ಎಂದು ದೇವರಾಜ್ ಮನವಿ ಮಾಡುತ್ತಾರೆ.</p>.<p><strong>ದೇವರಾಜ್ ಅವರ ಸಂಪರ್ಕ ಸಂಖ್ಯೆ: </strong>8073176365</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>