‘ಪ್ರಧಾನಿ ನರೇಂದ್ರ ಮೋದಿ ಅವರು 21 ದಿನಗಳ ಕಾಲ ಮನೆಯಲ್ಲೇ ಉಳಿಯುವಂತೆ ಕರೆ ನೀಡಿದ್ದಾರೆ. ಹೀಗಿದ್ದರೂ ಬಡಾವಣೆಯ ರಸ್ತೆಗಳಲ್ಲಿ ಅನಗತ್ಯವಾಗಿ ಹೊರಗಿನವರು ವಾಹನಗಳಲ್ಲಿ ಸುತ್ತಾಡುತ್ತಿದ್ದರು. ಹೀಗಾಗಿ ಬಡಾವಣೆಯ ನಿವಾಸಿಗಳೂ ಹೊರಗೆ ಹೋಗಬಾರದು ಹಾಗೂ ಹೊರಗಿನವರು ಯಾರೂ ಒಳಗೆ ಬರಬಾರದು ಎಂದು ನಾಗರಿಕ ಹಿತರಕ್ಷಣಾ ವೇದಿಕೆಯವರು ರಸ್ತೆಯನ್ನು ಬಂದ್ ಮಾಡಲು ನಿರ್ಧರಿಸಿದ್ದೇವೆ’ ಎಂದು ಸ್ಥಳೀಯ ನಿವಾಸಿ ಪರಮೇಶ್ವರಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.