ರೈಲ್ವೆ ನಿಲ್ದಾಣದಲ್ಲಿ ಕೂಡ ಪ್ರಯಾಣಿಕರು ಇಲ್ಲದೇ ಬಿಕೋ ಅನ್ನುತ್ತಿತ್ತು. ವಾರದ ಸಂತೆ ನಡೆಯುವ ಸ್ಥಳಗಳಲ್ಲಿ ಮಾತ್ರ ಭಾನುವಾರ ಬೆಳಿಗ್ಗೆ ಖರೀದಿಗೆ ಜನರು ಬಂದಿದ್ದರು. ಹೊತ್ತು ಏರುತ್ತಿದ್ದಂತೆ ಗ್ರಾಹಕರ ಸಂಖ್ಯೆ ಕಡಿಮೆಯಾಗುತ್ತಾ ಬಂದಿತ್ತು. ಗ್ರಾಮೀಣ ಪ್ರದೇಶದಿಂದ ಹಣ್ಣು, ಸೊಪ್ಪು, ತರಕಾರಿ, ಹೂವು ತಂಡ ರೈತರು, ವ್ಯಾಪಾರಸ್ಥರಿಗೆ ಗ್ರಾಹಕರು ಇಲ್ಲದಂತಾಯಿತು. ಸದಾ ಜನರಿಂದ ತುಂಬಿರುತ್ತಿದ್ದ ಇಲ್ಲಿನ ಗಡಿಯಾರ ಕಂಬ, ಕಾಯಿಪೇಟೆ, ಕೆಆರ್ ಮಾರುಕಟ್ಟೆ, ಹಳೆ ಹೆರಿಗೆ ಆಸ್ಪತ್ರೆ, ನಿಟುವಳ್ಳಿ ಭಾಗ, ಎಸ್ ನಿಜಲಿಂಗಪ್ಪ ಬಡಾವಣೆ ಗಡಿಯಾರ ವೃತ್ತ ಬಳಿ ಜನರು ಅಷ್ಟಾಗಿ ಕಂಡುಬರಲಿಲ್ಲ. ಕೋಳಿ, ಕುರಿ, ಮೀನು ಮಾಂಸದಂಗಡಿಗಳು, ಮೀನು ಮಾರಾಟದ ಅಂಗಡಿಗಳಲ್ಲಿ ಭಾನುವಾರದ ಬೇಡಿಕೆ ಕಂಡು ಬಂದಿತ್ತು.