‘ಕೇಂದ್ರ ಹಾಗೂ ರಾಜ್ಯ ಸರ್ಕಾರ ಪ್ರತಿಯೊಬ್ಬರಿಗೂ ಉಚಿತವಾಗಿ ಲಸಿಕೆ ಕೊಡುವುದಾಗಿ ಹೇಳುತ್ತಿದೆ. ಆದರೆ, ಲಸಿಕೆಯು ಮೊದಲು ಅವರ ಕಾರ್ಯಕರ್ತರು, ಬಂಧುಗಳಿಗೆ ತಲುಪುವಂತೆ ನೋಡಿಕೊಳ್ಳಲಾಗುತ್ತದೆ. ಲಸಿಕೆ ಕೊಡುತ್ತಿರುವುದು ಜನರ ತೆರಿಗೆ ಹಣದಿಂದಲೇ ಹೊರತು ಅದಕ್ಕಾಗಿ ಹಣ ಪ್ರಿಂಟ್ ಮಾಡುವುದಿಲ್ಲ. ಲಸಿಕೆ ಹಾಕುವ ಸಂದರ್ಭದಲ್ಲಿ ಇಂತಹ ರಾಜಕೀಯ ಮಾಡಬಾರದು. ಇದು ಮುಂದುವರಿದರೆ ಹೋರಾಟ ಹಮ್ಮಿಕೊಳ್ಳಲಾಗುವುದು’ ಎಂದು ಅವರು ಹೇಳಿದರು.