<p><strong>ದಾವಣಗೆರೆ: </strong>ಕೊರೊನಾ ನಿಯಂತ್ರಣಕ್ಕಾಗಿ ನೀಡುತ್ತಿರುವ ಲಸಿಕೆ ಬಗ್ಗೆ ಯಾವುದೇ ಆಧಾರವಿಲ್ಲದೆ ಅಪಪ್ರಚಾರ ಮಾಡಿದರೆ, ವದಂತಿ ಹಬ್ಬಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಎಚ್ಚರಿಸಿದರು.</p>.<p>ಜಿಲ್ಲೆಯಲ್ಲಿ ಕೋವಿಶೀಲ್ಡ್ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು.</p>.<p>ಎಲ್ಲ ಪರೀಕ್ಷೆಗಳನ್ನು ಮಾಡಿ, ಯಾವುದೇ ಅಡ್ಡಪರಿಣಾಮ ಇಲ್ಲ ಎಂಬುದನ್ನು ಕಂಡುಕೊಂಡ ಬಳಿಕವೇ ಲಸಿಕೆಯನ್ನು ನೀಡಲು ಸರ್ಕಾರ ಕ್ರಮಕೈಗೊಂಡಿದೆ ಎಂದು ತಿಳಿಸಿದರು.</p>.<p>ಜಿಲ್ಲೆಗೆ 3500 ಕೋವಿಶೀಲ್ಡ್ ಲಸಿಕೆ, 708 ಕೋವಾಕ್ಸಿನ್ ಲಸಿಕೆ ಬಂದಿವೆ. ಆರೋಗ್ಯ ಕ್ಷೇತ್ರದ ಕೊರೊನಾ ವಾರಿಯರ್ ಗಳಿಗೆ ನೀಡಲಾಗುತ್ತಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ತಿಳಿಸಿದರು.</p>.<p>ಶಾಸಕರಾದ ಎಸ್.ಎ. ರವೀಂದ್ರನಾಥ್, ಪ್ರೊ.ಲಿಂಗಣ್ಣ, ಡಿಎಚ್ಒ ಡಾ.ನಾಗರಾಜ, ಡಿಎಸ್ಒ ಡಾ.ರಾಘವನ್, ಆರ್ ಸಿಎಚ್ಒ ಡಾ.ಮೀನಾಕ್ಷಿ ಅವರೂ ಇದ್ದರು.</p>.<p>ಮೊದಲ ವ್ಯಾಕ್ಸಿನ್ ಹಾಕಿಸಿಕೊಂಡ ಡಿ ಗ್ರೂಪ್ ನೌಕರ ರಾಜಾಭಕ್ಷಿ, ಎರಡನೆ ವ್ಯಾಕ್ಸಿನ್ ಹಾಕಿಸಿಕೊಂಡ ಡಾ. ಶಶಿಧರ್, 'ಮೊದಲು ಹಾಕಿಸಿಕೊಂಡಿರುವುದು ಖುಷಿಯಾಗಿದೆ. ಎಲ್ಲರೂ ಹಾಕಿಸಿಕೊಳ್ಳಬೇಕು' ಎಂದು ಸಲಹೆ ನೀಡಿದರು.</p>.<p>ಜಿಲ್ಲೆಯ ಏಳು ಕೇಂದ್ರಗಳಲ್ಲಿ ಲಸಿಕೆ ಹಾಕಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಕೊರೊನಾ ನಿಯಂತ್ರಣಕ್ಕಾಗಿ ನೀಡುತ್ತಿರುವ ಲಸಿಕೆ ಬಗ್ಗೆ ಯಾವುದೇ ಆಧಾರವಿಲ್ಲದೆ ಅಪಪ್ರಚಾರ ಮಾಡಿದರೆ, ವದಂತಿ ಹಬ್ಬಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಎಚ್ಚರಿಸಿದರು.</p>.<p>ಜಿಲ್ಲೆಯಲ್ಲಿ ಕೋವಿಶೀಲ್ಡ್ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು.</p>.<p>ಎಲ್ಲ ಪರೀಕ್ಷೆಗಳನ್ನು ಮಾಡಿ, ಯಾವುದೇ ಅಡ್ಡಪರಿಣಾಮ ಇಲ್ಲ ಎಂಬುದನ್ನು ಕಂಡುಕೊಂಡ ಬಳಿಕವೇ ಲಸಿಕೆಯನ್ನು ನೀಡಲು ಸರ್ಕಾರ ಕ್ರಮಕೈಗೊಂಡಿದೆ ಎಂದು ತಿಳಿಸಿದರು.</p>.<p>ಜಿಲ್ಲೆಗೆ 3500 ಕೋವಿಶೀಲ್ಡ್ ಲಸಿಕೆ, 708 ಕೋವಾಕ್ಸಿನ್ ಲಸಿಕೆ ಬಂದಿವೆ. ಆರೋಗ್ಯ ಕ್ಷೇತ್ರದ ಕೊರೊನಾ ವಾರಿಯರ್ ಗಳಿಗೆ ನೀಡಲಾಗುತ್ತಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ತಿಳಿಸಿದರು.</p>.<p>ಶಾಸಕರಾದ ಎಸ್.ಎ. ರವೀಂದ್ರನಾಥ್, ಪ್ರೊ.ಲಿಂಗಣ್ಣ, ಡಿಎಚ್ಒ ಡಾ.ನಾಗರಾಜ, ಡಿಎಸ್ಒ ಡಾ.ರಾಘವನ್, ಆರ್ ಸಿಎಚ್ಒ ಡಾ.ಮೀನಾಕ್ಷಿ ಅವರೂ ಇದ್ದರು.</p>.<p>ಮೊದಲ ವ್ಯಾಕ್ಸಿನ್ ಹಾಕಿಸಿಕೊಂಡ ಡಿ ಗ್ರೂಪ್ ನೌಕರ ರಾಜಾಭಕ್ಷಿ, ಎರಡನೆ ವ್ಯಾಕ್ಸಿನ್ ಹಾಕಿಸಿಕೊಂಡ ಡಾ. ಶಶಿಧರ್, 'ಮೊದಲು ಹಾಕಿಸಿಕೊಂಡಿರುವುದು ಖುಷಿಯಾಗಿದೆ. ಎಲ್ಲರೂ ಹಾಕಿಸಿಕೊಳ್ಳಬೇಕು' ಎಂದು ಸಲಹೆ ನೀಡಿದರು.</p>.<p>ಜಿಲ್ಲೆಯ ಏಳು ಕೇಂದ್ರಗಳಲ್ಲಿ ಲಸಿಕೆ ಹಾಕಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>