<p>ದಾವಣಗೆರೆ: ಕಾರ್ಲ್ ಮಾರ್ಕ್ಸ್ ಹಾಗೂ ಬಿ.ಆರ್. ಅಂಬೇಡ್ಕರ್ ಪ್ರತಿಪಾದಿಸಿದ ತತ್ವಗಳಲ್ಲಿ ಸಾಮ್ಯತೆ ಇದೆ. ಇಬ್ಬರ ವಿಚಾರಗಳ ನಡುವೆ ಒಡಕು ಸೃಷ್ಟಿಸುವ ಹುನ್ನಾರ ನಡೆಯುತ್ತಿದೆ. ಈ ಬಗ್ಗೆ ಎಚ್ಚರದಿಂದ ಇರುವ ಅಗತ್ಯವಿದೆ ಎಂದು ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನದ ರಾಜ್ಯ ಘಟಕದ ಅಧ್ಯಕ್ಷ ಜನಾರ್ದನ್ ಹೇಳಿದರು.</p>.<p>ಇಲ್ಲಿನ ಪಂಪಾಪತಿ ಭವನದಲ್ಲಿ ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಭೂಮಿ ಸರ್ಕಾರದ ಕೈಯಲ್ಲಿರಬೇಕು ಹಾಗೂ ಕೈಗಾರಿಕೆ ಸಾರ್ವಜನಿಕ ಸ್ವತ್ತಾಗಬೇಕು ಎಂಬುದನ್ನು ಅಂಬೇಡ್ಕರ್ ಪ್ರತಿಪಾದಿಸಿದ್ದಾರೆ. ಸಮ ಸಮಾಜದ ಕನಸನ್ನು ಕಾರ್ಲ್ ಮಾರ್ಕ್ಸ್ ಕಂಡಿದ್ದರು. ಇಬ್ಬರ ವಿಚಾರಧಾರೆಗಳ ನಡುವೆ ಭಿನ್ನತೆ ಇಲ್ಲ’ ಎಂದು ಹೇಳಿದರು.</p>.<p>‘ಭಾರತೀಯ ಕಮ್ಯುನಿಸ್ಟ್ ಪಕ್ಷ (ಸಿಪಿಐ) ದಲಿತ ಸಮುದಾಯದ ಹಕ್ಕುಗಳಿಗೆ ಹೋರಾಟ ಮಾಡುತ್ತ ಬಂದಿದೆ. ಜನರ ಹಕ್ಕುಗಳಿಗಾಗಿ ಆಂದೋಲನ ನಡೆಸುವ ಅಗತ್ಯವಿದೆ. ದಲಿತ ಸಂಘಟನೆಗಳು ಒಗ್ಗೂಡಬೇಕಿದೆ’ ಎಂದರು.</p>.<p>‘ಎಲ್ಲ ಜಾತಿಯ ಬಡವರ ಪರವಾಗಿ ಹೋರಾಟ ಸಂಘಟಿಸಬೇಕಿದೆ. ಅವರ ಹಕ್ಕುಗಳನ್ನು ಕಾಪಾಡಲು ಶ್ರಮಿಸಬೇಕಿದೆ. ಹಳ್ಳಿಗಳಿಗೆ ತೆರಳಿ ಸಂಘಟನೆ ಬಲವರ್ಧನೆಗೆ ಮುಂದಾಗಿ’ ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು ಸಲಹೆ ನೀಡಿದರು.</p>.<p>ಸಿಪಿಐ ಜಿಲ್ಲಾ ಸಹಕಾರ್ಯದರ್ಶಿ ಎಚ್.ಜಿ. ಉಮೇಶ್, ಮುಖಂಡರಾದ ಪಿ.ಷಣ್ಮುಖಸ್ವಾಮಿ, ಎಸ್.ಎಸ್. ಮಲ್ಲಮ್ಮ, ವಿ. ಲಕ್ಷ್ಮಣ, ಜಿ.ಯಲ್ಲಪ್ಪ, ರಂಗನಾಥ್, ಶೇಖರ ನಾಯಕ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ಕಾರ್ಲ್ ಮಾರ್ಕ್ಸ್ ಹಾಗೂ ಬಿ.ಆರ್. ಅಂಬೇಡ್ಕರ್ ಪ್ರತಿಪಾದಿಸಿದ ತತ್ವಗಳಲ್ಲಿ ಸಾಮ್ಯತೆ ಇದೆ. ಇಬ್ಬರ ವಿಚಾರಗಳ ನಡುವೆ ಒಡಕು ಸೃಷ್ಟಿಸುವ ಹುನ್ನಾರ ನಡೆಯುತ್ತಿದೆ. ಈ ಬಗ್ಗೆ ಎಚ್ಚರದಿಂದ ಇರುವ ಅಗತ್ಯವಿದೆ ಎಂದು ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನದ ರಾಜ್ಯ ಘಟಕದ ಅಧ್ಯಕ್ಷ ಜನಾರ್ದನ್ ಹೇಳಿದರು.</p>.<p>ಇಲ್ಲಿನ ಪಂಪಾಪತಿ ಭವನದಲ್ಲಿ ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಭೂಮಿ ಸರ್ಕಾರದ ಕೈಯಲ್ಲಿರಬೇಕು ಹಾಗೂ ಕೈಗಾರಿಕೆ ಸಾರ್ವಜನಿಕ ಸ್ವತ್ತಾಗಬೇಕು ಎಂಬುದನ್ನು ಅಂಬೇಡ್ಕರ್ ಪ್ರತಿಪಾದಿಸಿದ್ದಾರೆ. ಸಮ ಸಮಾಜದ ಕನಸನ್ನು ಕಾರ್ಲ್ ಮಾರ್ಕ್ಸ್ ಕಂಡಿದ್ದರು. ಇಬ್ಬರ ವಿಚಾರಧಾರೆಗಳ ನಡುವೆ ಭಿನ್ನತೆ ಇಲ್ಲ’ ಎಂದು ಹೇಳಿದರು.</p>.<p>‘ಭಾರತೀಯ ಕಮ್ಯುನಿಸ್ಟ್ ಪಕ್ಷ (ಸಿಪಿಐ) ದಲಿತ ಸಮುದಾಯದ ಹಕ್ಕುಗಳಿಗೆ ಹೋರಾಟ ಮಾಡುತ್ತ ಬಂದಿದೆ. ಜನರ ಹಕ್ಕುಗಳಿಗಾಗಿ ಆಂದೋಲನ ನಡೆಸುವ ಅಗತ್ಯವಿದೆ. ದಲಿತ ಸಂಘಟನೆಗಳು ಒಗ್ಗೂಡಬೇಕಿದೆ’ ಎಂದರು.</p>.<p>‘ಎಲ್ಲ ಜಾತಿಯ ಬಡವರ ಪರವಾಗಿ ಹೋರಾಟ ಸಂಘಟಿಸಬೇಕಿದೆ. ಅವರ ಹಕ್ಕುಗಳನ್ನು ಕಾಪಾಡಲು ಶ್ರಮಿಸಬೇಕಿದೆ. ಹಳ್ಳಿಗಳಿಗೆ ತೆರಳಿ ಸಂಘಟನೆ ಬಲವರ್ಧನೆಗೆ ಮುಂದಾಗಿ’ ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು ಸಲಹೆ ನೀಡಿದರು.</p>.<p>ಸಿಪಿಐ ಜಿಲ್ಲಾ ಸಹಕಾರ್ಯದರ್ಶಿ ಎಚ್.ಜಿ. ಉಮೇಶ್, ಮುಖಂಡರಾದ ಪಿ.ಷಣ್ಮುಖಸ್ವಾಮಿ, ಎಸ್.ಎಸ್. ಮಲ್ಲಮ್ಮ, ವಿ. ಲಕ್ಷ್ಮಣ, ಜಿ.ಯಲ್ಲಪ್ಪ, ರಂಗನಾಥ್, ಶೇಖರ ನಾಯಕ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>