ಈ ಪ್ರಯೋಗ ಯಶಸ್ವಿಯಾಗಿದ್ದರಿಂದ ಮತ್ತೆ 13ನೇ ಸ್ಥಾನಕ್ಕೆ ಏರಿತ್ತು. ಈ ಬಾರಿಯೂ ಫಲಿತಾಂಶ ಪಟ್ಟಿಯಲ್ಲಿ ಮೊದಲ 10 ಜಿಲ್ಲೆಗಳ ಪಟ್ಟಿಯಲ್ಲಿ ಸ್ಥಾನ ಪಡೆಯಲು ಶಾಲೆ ದತ್ತು ಯೋಜನೆ, ರಾತ್ರಿ ಪಾಠ, ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಮನೆಗೆ ಭೇಟಿ ಕಾರ್ಯಕ್ರಮ, ಗಣಿತ, ಇಂಗ್ಲಿಷ್ ವಿಷಯಗಳಿಗೆ ವಿಶೇಷ ಕಾರ್ಯಾಗಾರ, ಸಂವಾದ, ವಿಷಯಗಳ ಪುನರಾವರ್ತನೆ, ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ, ಗ್ರಾಮೀಣ ಭಾಗದ ಫಲಿತಾಂಶ ಸುಧಾರಿಸಲು ವಿಶ್ವಾಸ ಕಿರಣ ಸೇರಿದಂತೆ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆದರೆ, ಇವು ಯಾವುದೂ ಫಲ ನೀಡಲಿಲ್ಲ. ಎಲ್ಲಿ ಲೋಪವಾಗಿದೆ ಎನ್ನುವುದರ ಕುರಿತು ಅಧಿಕಾರಿಗಳಿಗೂ ಸ್ಪಷ್ಟ ಮಾಹಿತಿ ಇಲ್ಲ.