ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಕೆಟ್ ಬೆಟ್ಟಿಂಗ್‌: ವಿವಿಧೆಡೆ ದಾಳಿ, 8 ಜನರ ಬಂಧನ

Last Updated 2 ಅಕ್ಟೋಬರ್ 2020, 16:01 IST
ಅಕ್ಷರ ಗಾತ್ರ

ದಾವಣಗೆರೆ: ನಗರದ ವಿವಿಧೆಡೆ ಕ್ರಿಕೆಟ್‌ ಬೆಟ್ಟಿಂಗ್‌ ಸಂಬಂಧ ದಾಳಿ ನಡೆಸಿರುವ ಪೊಲೀಸರು 8 ಜನರನ್ನು ಬಂಧಿಸಿ ಒಟ್ಟು ₹ 72 ಸಾವಿರ ನಗದು ಹಾಗೂ 6 ಮೊಬೈಲ್‌ ವಶಪಡಿಸಿಕೊಂಡಿದ್ದಾರೆ.

ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ನೂತನ ಕಾಲೇಜು ರಸ್ತೆಯ ಬಳಿ ಕ್ರಿಕೆಟ್ ಬೆಟ್ಟಿಂಗ್ ಸಂಬಂಧ ಜಯಪ್ರಕಾಶ್ ಗೌಡ, ಚಂದ್ರು, ಅವರನ್ನು ಬಂಧಿಸಿ ₹ 26 ಸಾವಿರ ನಗದು, 2 ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಉಳಿದ ಆರೋಪಿಗಳಾದ ಶಾಂತ, ಷಣ್ಮುಖ, ಉಮೇಶ್ ಪರಾರಿಯಾಗಿದ್ದಾರೆ.

ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯ ರತ್ಮಮ್ಮ ಹಾಸ್ಟೆಲ್ ಬಳಿ ಬೆಟ್ಟಿಂಗ್ ಸಂಬಂಧ ಚಿದಾನಂದಪ್ಪ, ಗಣೇಶ, ಸತ್ಯನಾರಾಯಣ, ಸಂತೋಷ ಅವರನ್ನು ಬಂಧಿಸಿದ್ದಾರೆ. ಬಂಧಿತರಿಂದ ₹ 24 ಸಾವಿರ ನಗದು, 4 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಮತ್ತೊಬ್ಬ ಆರೋಪಿ ಮಂಜುನಾಥ್ ಪರಾರಿಯಾಗಿದ್ದಾನೆ.

ಕೆಟಿಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದಮ್ಮ ಪಾರ್ಕ್ ಬಳಿ ಬೆಟ್ಟಿಂಗ್ ಸಂಬಂಧ ವಿದ್ಯಾಧರ್, ಕಿರಣ್ ಅವರನ್ನು ಬಂಧಿಸಿ ₹ 22 ಸಾವಿರ ನಗದು, 1 ಮೊಬೈಲ್ ವಶಪಡಿಸಿಕೊಂಡಿದ್ದಾರೆ. ರಾಹುಲ್, ರೋಹಿತ್ ತಲೆಮರೆಸಿಕೊಂಡಿದ್ದಾರೆ. ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT