<p><strong>ದಾವಣಗೆರೆ:</strong> ಕೋವಿಡ್ ತಡೆಗೆ ರಾಜ್ಯ ಸರ್ಕಾರ ವಿಧಿಸಿರುವ 14 ದಿನಗಳ ಲಾಕ್ಡೌನ್ ನಗರದಲ್ಲಿ ಮಂಗಳವಾರ ರಾತ್ರಿಯೇ ಜಾರಿಯಾಯಿತು.ರಾತ್ರಿ 9 ಗಂಟೆಯ ನಂತರ ‘ಮನೆಗೆ ಹೊರಡಿ’ ಎಂದು ಧ್ವನಿವರ್ಧಕದ ಮೂಲಕಪೊಲೀಸರು ಅಂಗಡಿ ಬಾಗಿಲು ಮುಚ್ಚಿಸುತ್ತಾ ಹೋದರು. ಜನರೆಲ್ಲ ಮನೆ ಸೇರಿದರು. ನಗರವೆಲ್ಲಾ ನಿರ್ಜನವಾಯಿತು.</p>.<p>ಒಂದು ದಿವಸ ಮುಂಚಿತವಾಗಿಯೇ ಲಾಕ್ಡೌನ್ ಮಾಹಿತಿ ನೀಡಿದ್ದರಿಂದ ಮಾರುಕಟ್ಟೆ, ದಿನಸಿ ಅಂಗಡಿಗಳಲ್ಲಿ ಜನಜಂಗುಳಿ ಇತ್ತು. ಹೊರ ಜಿಲ್ಲೆಯಲ್ಲಿದ್ದ ಜಿಲ್ಲೆಯ ಜನರು ಬಸ್ ಹಾಗೂ ರೈಲುಗಳ ಮೂಲಕ ನಗರಕ್ಕೆ ಬಂದಿಳಿದರು. ಬೆಂಗಳೂರು–ದಾವಣಗೆರೆ ಮಾರ್ಗವಾಗಿ 60ಕ್ಕೂ ಹೆಚ್ಚು ಬಸ್ಗಳು ಸಂಚರಿಸಿವೆ.</p>.<p>ಅಗತ್ಯ ವಸ್ತುಗಳು, ಕೃಷಿ ಪರಿಕರಗಳ ಅಂಗಡಿಗಳು ತೆರೆದಿದ್ದು, ಬೆಳಿಗ್ಗೆಯಿಂದ ರಾತ್ರಿ 9ರ ತನಕ ಖರೀದಿಸಿದರು. ಹೋಟೆಲ್ಗಳು ಹಾಗೂ ಮದ್ಯದ ಅಂಗಡಿಗಳಲ್ಲಿ ಪಾರ್ಸೆಲ್ಗೆ ಅವಕಾಶ ನೀಡಲಾಗಿತ್ತು.</p>.<p>ಬುಧವಾರದಿಂದ ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6ರಿಂದ 10ಗಂಟೆಯವರೆಗೆ ಅವಕಾಶ ಕಲ್ಪಿಸಿದ್ದು, ಆನಂತರ ಎಲ್ಲಾ ವಹಿವಾಟುಗಳು ಬಂದ್ ಆಗಲಿವೆ. ಕೆಎಸ್ಆರ್ಟಿಸಿ ಹಾಗೂ ಖಾಸಗಿ ಬಸ್ಗಳ ಸಂಚಾರ ಇರುವುದಿಲ್ಲ.</p>.<p>‘ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆಗೆ ಹೋಗುವವರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಅನಗತ್ಯವಾಗಿ ಹೊರ ಬಂದರೆ ದಂಡ ಕಟ್ಟಲು ಸಿದ್ಧರಾಗಬೇಕಾಗುತ್ತದೆ’ ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.</p>.<p>‘ಲಾಕ್ಡೌನ್ ವೇಳೆ ಬೆಳಿಗ್ಗೆ ಮದ್ಯ ಖರೀದಿಸಿ ಸಂಜೆ ವೇಳೆ ಅಕ್ರಮವಾಗಿ ಮದ್ಯ ಮಾರಾಟ ಮಾಡಿದರೆ, ಅಬಕಾರಿ ಹಾಗೂ ಪೊಲೀಸ್ ಇಲಾಖೆಗಳು ಜಂಟಿಯಾಗಿ ಅಂತಹವರ ವಿರುದ್ಧ ಕ್ರಮ ಕೈಗೊಳ್ಳುತ್ತವೆ’ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಎಚ್ಚರಿಸಿದ್ದಾರೆ.</p>.<p class="Briefhead">‘ಮಧ್ಯಾಹ್ನದವರೆಗೆ ರಸಗೊಬ್ಬರ ಮಾರಾಟ’</p>.<p>ದಾವಣಗೆರೆ: ಲಾಕ್ಡೌನ್ ನಿಮಿತ್ತ ಕೃಷಿ ಚಟುವಟಿಕೆಗೆ ನಿರ್ಬಂಧವಿಲ್ಲ. ಆದರೂ ರೈತರು ಮತ್ತು ವ್ಯಾಪಾರಿಗಳ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಅಂಗಡಿಗಳು ಬೆಳಿಗ್ಗೆಯಿಂದ ಮಧ್ಯಾಹ್ನ 2 ಗಂಟೆಯವರೆಗೂ<br />ತೆಗೆದಿರುತ್ತದೆ.</p>.<p>ರೈತರು ಮಾಸ್ಕ್ ಧರಿಸಿ, ಅಂತರ ಕಾಯ್ದುಕೊಂಡು ಕೊರೊನಾ ಸುರಕ್ಷತಾ ನಿಯಮ ಪಾಲನೆ ಮಾಡಬೇಕು ಎಂದು ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕಗಳ ಮಾರಾಟಗಾರರ ಸಂಘದ ಅಧ್ಯಕ್ಷ ನಾಗರಾಜ್ ಲೋಕಿಕೆರೆ ಅವರು ಮನವಿ<br />ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಕೋವಿಡ್ ತಡೆಗೆ ರಾಜ್ಯ ಸರ್ಕಾರ ವಿಧಿಸಿರುವ 14 ದಿನಗಳ ಲಾಕ್ಡೌನ್ ನಗರದಲ್ಲಿ ಮಂಗಳವಾರ ರಾತ್ರಿಯೇ ಜಾರಿಯಾಯಿತು.ರಾತ್ರಿ 9 ಗಂಟೆಯ ನಂತರ ‘ಮನೆಗೆ ಹೊರಡಿ’ ಎಂದು ಧ್ವನಿವರ್ಧಕದ ಮೂಲಕಪೊಲೀಸರು ಅಂಗಡಿ ಬಾಗಿಲು ಮುಚ್ಚಿಸುತ್ತಾ ಹೋದರು. ಜನರೆಲ್ಲ ಮನೆ ಸೇರಿದರು. ನಗರವೆಲ್ಲಾ ನಿರ್ಜನವಾಯಿತು.</p>.<p>ಒಂದು ದಿವಸ ಮುಂಚಿತವಾಗಿಯೇ ಲಾಕ್ಡೌನ್ ಮಾಹಿತಿ ನೀಡಿದ್ದರಿಂದ ಮಾರುಕಟ್ಟೆ, ದಿನಸಿ ಅಂಗಡಿಗಳಲ್ಲಿ ಜನಜಂಗುಳಿ ಇತ್ತು. ಹೊರ ಜಿಲ್ಲೆಯಲ್ಲಿದ್ದ ಜಿಲ್ಲೆಯ ಜನರು ಬಸ್ ಹಾಗೂ ರೈಲುಗಳ ಮೂಲಕ ನಗರಕ್ಕೆ ಬಂದಿಳಿದರು. ಬೆಂಗಳೂರು–ದಾವಣಗೆರೆ ಮಾರ್ಗವಾಗಿ 60ಕ್ಕೂ ಹೆಚ್ಚು ಬಸ್ಗಳು ಸಂಚರಿಸಿವೆ.</p>.<p>ಅಗತ್ಯ ವಸ್ತುಗಳು, ಕೃಷಿ ಪರಿಕರಗಳ ಅಂಗಡಿಗಳು ತೆರೆದಿದ್ದು, ಬೆಳಿಗ್ಗೆಯಿಂದ ರಾತ್ರಿ 9ರ ತನಕ ಖರೀದಿಸಿದರು. ಹೋಟೆಲ್ಗಳು ಹಾಗೂ ಮದ್ಯದ ಅಂಗಡಿಗಳಲ್ಲಿ ಪಾರ್ಸೆಲ್ಗೆ ಅವಕಾಶ ನೀಡಲಾಗಿತ್ತು.</p>.<p>ಬುಧವಾರದಿಂದ ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6ರಿಂದ 10ಗಂಟೆಯವರೆಗೆ ಅವಕಾಶ ಕಲ್ಪಿಸಿದ್ದು, ಆನಂತರ ಎಲ್ಲಾ ವಹಿವಾಟುಗಳು ಬಂದ್ ಆಗಲಿವೆ. ಕೆಎಸ್ಆರ್ಟಿಸಿ ಹಾಗೂ ಖಾಸಗಿ ಬಸ್ಗಳ ಸಂಚಾರ ಇರುವುದಿಲ್ಲ.</p>.<p>‘ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆಗೆ ಹೋಗುವವರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಅನಗತ್ಯವಾಗಿ ಹೊರ ಬಂದರೆ ದಂಡ ಕಟ್ಟಲು ಸಿದ್ಧರಾಗಬೇಕಾಗುತ್ತದೆ’ ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.</p>.<p>‘ಲಾಕ್ಡೌನ್ ವೇಳೆ ಬೆಳಿಗ್ಗೆ ಮದ್ಯ ಖರೀದಿಸಿ ಸಂಜೆ ವೇಳೆ ಅಕ್ರಮವಾಗಿ ಮದ್ಯ ಮಾರಾಟ ಮಾಡಿದರೆ, ಅಬಕಾರಿ ಹಾಗೂ ಪೊಲೀಸ್ ಇಲಾಖೆಗಳು ಜಂಟಿಯಾಗಿ ಅಂತಹವರ ವಿರುದ್ಧ ಕ್ರಮ ಕೈಗೊಳ್ಳುತ್ತವೆ’ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಎಚ್ಚರಿಸಿದ್ದಾರೆ.</p>.<p class="Briefhead">‘ಮಧ್ಯಾಹ್ನದವರೆಗೆ ರಸಗೊಬ್ಬರ ಮಾರಾಟ’</p>.<p>ದಾವಣಗೆರೆ: ಲಾಕ್ಡೌನ್ ನಿಮಿತ್ತ ಕೃಷಿ ಚಟುವಟಿಕೆಗೆ ನಿರ್ಬಂಧವಿಲ್ಲ. ಆದರೂ ರೈತರು ಮತ್ತು ವ್ಯಾಪಾರಿಗಳ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಅಂಗಡಿಗಳು ಬೆಳಿಗ್ಗೆಯಿಂದ ಮಧ್ಯಾಹ್ನ 2 ಗಂಟೆಯವರೆಗೂ<br />ತೆಗೆದಿರುತ್ತದೆ.</p>.<p>ರೈತರು ಮಾಸ್ಕ್ ಧರಿಸಿ, ಅಂತರ ಕಾಯ್ದುಕೊಂಡು ಕೊರೊನಾ ಸುರಕ್ಷತಾ ನಿಯಮ ಪಾಲನೆ ಮಾಡಬೇಕು ಎಂದು ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕಗಳ ಮಾರಾಟಗಾರರ ಸಂಘದ ಅಧ್ಯಕ್ಷ ನಾಗರಾಜ್ ಲೋಕಿಕೆರೆ ಅವರು ಮನವಿ<br />ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>