<p>ದಾವಣಗೆರೆ: ಇಲ್ಲಿನ ಸೈಬರ್ ಅಪರಾಧ ಠಾಣೆ ಪೊಲೀಸರು ಆನ್ಲೈನ್ ವಂಚನೆ ಪ್ರಕರಣದಲ್ಲಿ ಅಂತರರಾಜ್ಯ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಆರೋಪಿ ನೂರಾರು ಕೋಟಿ ವಂಚಿಸಿದ್ದಾನೆ ಎನ್ನಲಾಗಿದ್ದು, ಈತನ ಬ್ಯಾಂಕ್ ಖಾತೆಯಲ್ಲಿ ₹ 18 ಕೋಟಿ ಇರುವುದು ಪತ್ತೆಯಾಗಿದೆ.</p>.<p>ಹಾಸನ ಜಿಲ್ಲೆಯ ಬೇಲೂರಿನ ಶಾಂತಿನಗರ ನಿವಾಸಿ ಸೈಯದ್ ಅರ್ಫಾತ್ ಪಾಷ (28) ಬಂಧಿತ. ಪ್ರಕರಣದ ಮೊದಲ ಆರೋಪಿ ಹೈದರಾಬಾದ್ ಮೂಲದ ಉಬೇದ್ ತಲೆಮರೆಸಿಕೊಂಡಿದ್ದಾನೆ. ಸೈಯ್ಯದ್ ಅರ್ಫಾತ್ ಸಿ.ಸಿ.ಟಿ.ವಿ ಅಳವಡಿಸುವ ಕೆಲಸ ಮಾಡಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ದಾವಣಗೆರೆಯ ನಿಟುವಳ್ಳಿ ನಿವಾಸಿ, ಕಟ್ಟಡ ನಿರ್ಮಾಣ ವಲಯದ ಉದ್ಯಮಿ ಪ್ರಮೋದ್ ಎಚ್.ಎಚ್. ಅವರ ಬ್ಯಾಂಕ್ ಖಾತೆಯಲ್ಲಿದ್ದ ₹ 52.60 ಲಕ್ಷ ಹಣವನ್ನು ಆರೋಪಿಗಳು ನೆಟ್ ಬ್ಯಾಂಕಿಂಗ್ ಮೂಲಕ ತಮ್ಮ ಖಾತೆಗೆ ವರ್ಗಾಯಿಸಿಕೊಂಡಿದ್ದರು. ಖಾತೆಯು ಬ್ಲಾಕ್ ಆಗಿದ್ದನ್ನು ಬ್ಯಾಂಕ್ನಲ್ಲಿ ವಿಚಾರಿಸಿದಾಗ ಆನ್ಲೈನ್ ಮೂಲಕ ವಂಚನೆ ನಡೆದಿರುವುದು ಗೊತ್ತಾಗಿತ್ತು. ಈ ಬಗ್ಗೆ ಪ್ರಮೋದ್ ಅವರು ನೀಡಿದ ದೂರು ಆಧರಿಸಿ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. </p>.<h2>ಆರೋಪಿಗಳ ವಿರುದ್ಧ 127 ಪ್ರಕರಣ: </h2>.<p>ಆರೋಪಿಗಳಾದ ಸೈಯದ್ ಅರ್ಫಾತ್ ಹಾಗೂ ಉಬೇದ್ ವಿರುದ್ಧ ದೇಶದ ವಿವಿಧ ಪೊಲೀಸ್ ಠಾಣೆಗಳಲ್ಲಿ 127 ಪ್ರಕರಣಗಳು ದಾಖಲಾಗಿರುವುದು ತನಿಖೆ ವೇಳೆ ಗೊತ್ತಾಗಿದೆ.</p>.<p>ಜುಲೈ 27 ರಿಂದ ಆಗಸ್ಟ್ 19ರ ವರೆಗೆ ಆರೋಪಿಗಳು ಬೇರೆಯವರ ಬ್ಯಾಂಕ್ ಖಾತೆಗಳಿಂದ ₹ 150 ಕೋಟಿ ಹಣವನ್ನು ತಮ್ಮ ಖಾತೆಗೆ ಆನ್ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚನೆ ಎಸಗಿದ್ದಾರೆ. ಈ ಪೈಕಿ ₹ 132 ಕೋಟಿ ಹಣವನ್ನು ವಿತ್ ಡ್ರಾ ಮಾಡಿಕೊಂಡಿದ್ದಾರೆ. ಖಾತೆಯಲ್ಲಿ ಉಳಿದಿದ್ದ ₹18 ಕೋಟಿ ಹಣವನ್ನು ಪೊಲೀಸರು ಬ್ಯಾಂಕ್ ಮೂಲಕ ಫ್ರೀಜ್ ಮಾಡಿಸಿದ್ದಾರೆ.</p>.<p>‘₹ 18 ಕೋಟಿ ಪೈಕಿ ಕೋರ್ಟ್ ಆದೇಶದಂತೆ ದೂರುದಾರ ಪ್ರಮೋದ್ ಅವರಿಗೆ ₹ 52.60 ಲಕ್ಷ ಹಣ ಕೊಡಿಸಲಾಗಿದೆ. ಆರೋಪಿಗಳ ಬಗ್ಗೆ ದೇಶದ ವಿವಿಧ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ. ಉತ್ತರ ಪ್ರದೇಶ, ಜಮ್ಮು ಕಾಶ್ಮೀರ, ಆಂಧ್ರಪ್ರದೇಶ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳ ಸೈಬರ್ ಠಾಣೆಗಳಲ್ಲಿ ಇವರ ವಿರುದ್ಧ ಪ್ರಕರಣಗಳು ದಾಖಲಾಗಿವೆ.</p>.<p>‘ಇದೇ ಮೊದಲ ಬಾರಿ ಆರೋಪಿ ಸಿಕ್ಕಿಬಿದ್ದಿದ್ದು,ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ’ ಎಂದು ಸೈಬರ್ ಅಪರಾಧ ಠಾಣೆಯ ಡಿವೈಎಸ್ಪಿ ಬಂಕಾಳಿ ನಾಗಪ್ಪ ತಿಳಿಸಿದರು. </p>.<p>ಇನ್ಸ್ಪೆಕ್ಟರ್ ವಸಂತ್, ಸಿಬ್ಬಂದಿ ಅಶೋಕ, ಸುರೇಶ್, ಮುತ್ತುರಾಜ್, ನಿಜಲಿಂಗಪ್ಪ, ಅಂಜಿನಪ್ಪ ಕಾರ್ಯಾಚರಣೆ ನಡೆಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ಇಲ್ಲಿನ ಸೈಬರ್ ಅಪರಾಧ ಠಾಣೆ ಪೊಲೀಸರು ಆನ್ಲೈನ್ ವಂಚನೆ ಪ್ರಕರಣದಲ್ಲಿ ಅಂತರರಾಜ್ಯ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಆರೋಪಿ ನೂರಾರು ಕೋಟಿ ವಂಚಿಸಿದ್ದಾನೆ ಎನ್ನಲಾಗಿದ್ದು, ಈತನ ಬ್ಯಾಂಕ್ ಖಾತೆಯಲ್ಲಿ ₹ 18 ಕೋಟಿ ಇರುವುದು ಪತ್ತೆಯಾಗಿದೆ.</p>.<p>ಹಾಸನ ಜಿಲ್ಲೆಯ ಬೇಲೂರಿನ ಶಾಂತಿನಗರ ನಿವಾಸಿ ಸೈಯದ್ ಅರ್ಫಾತ್ ಪಾಷ (28) ಬಂಧಿತ. ಪ್ರಕರಣದ ಮೊದಲ ಆರೋಪಿ ಹೈದರಾಬಾದ್ ಮೂಲದ ಉಬೇದ್ ತಲೆಮರೆಸಿಕೊಂಡಿದ್ದಾನೆ. ಸೈಯ್ಯದ್ ಅರ್ಫಾತ್ ಸಿ.ಸಿ.ಟಿ.ವಿ ಅಳವಡಿಸುವ ಕೆಲಸ ಮಾಡಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ದಾವಣಗೆರೆಯ ನಿಟುವಳ್ಳಿ ನಿವಾಸಿ, ಕಟ್ಟಡ ನಿರ್ಮಾಣ ವಲಯದ ಉದ್ಯಮಿ ಪ್ರಮೋದ್ ಎಚ್.ಎಚ್. ಅವರ ಬ್ಯಾಂಕ್ ಖಾತೆಯಲ್ಲಿದ್ದ ₹ 52.60 ಲಕ್ಷ ಹಣವನ್ನು ಆರೋಪಿಗಳು ನೆಟ್ ಬ್ಯಾಂಕಿಂಗ್ ಮೂಲಕ ತಮ್ಮ ಖಾತೆಗೆ ವರ್ಗಾಯಿಸಿಕೊಂಡಿದ್ದರು. ಖಾತೆಯು ಬ್ಲಾಕ್ ಆಗಿದ್ದನ್ನು ಬ್ಯಾಂಕ್ನಲ್ಲಿ ವಿಚಾರಿಸಿದಾಗ ಆನ್ಲೈನ್ ಮೂಲಕ ವಂಚನೆ ನಡೆದಿರುವುದು ಗೊತ್ತಾಗಿತ್ತು. ಈ ಬಗ್ಗೆ ಪ್ರಮೋದ್ ಅವರು ನೀಡಿದ ದೂರು ಆಧರಿಸಿ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. </p>.<h2>ಆರೋಪಿಗಳ ವಿರುದ್ಧ 127 ಪ್ರಕರಣ: </h2>.<p>ಆರೋಪಿಗಳಾದ ಸೈಯದ್ ಅರ್ಫಾತ್ ಹಾಗೂ ಉಬೇದ್ ವಿರುದ್ಧ ದೇಶದ ವಿವಿಧ ಪೊಲೀಸ್ ಠಾಣೆಗಳಲ್ಲಿ 127 ಪ್ರಕರಣಗಳು ದಾಖಲಾಗಿರುವುದು ತನಿಖೆ ವೇಳೆ ಗೊತ್ತಾಗಿದೆ.</p>.<p>ಜುಲೈ 27 ರಿಂದ ಆಗಸ್ಟ್ 19ರ ವರೆಗೆ ಆರೋಪಿಗಳು ಬೇರೆಯವರ ಬ್ಯಾಂಕ್ ಖಾತೆಗಳಿಂದ ₹ 150 ಕೋಟಿ ಹಣವನ್ನು ತಮ್ಮ ಖಾತೆಗೆ ಆನ್ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚನೆ ಎಸಗಿದ್ದಾರೆ. ಈ ಪೈಕಿ ₹ 132 ಕೋಟಿ ಹಣವನ್ನು ವಿತ್ ಡ್ರಾ ಮಾಡಿಕೊಂಡಿದ್ದಾರೆ. ಖಾತೆಯಲ್ಲಿ ಉಳಿದಿದ್ದ ₹18 ಕೋಟಿ ಹಣವನ್ನು ಪೊಲೀಸರು ಬ್ಯಾಂಕ್ ಮೂಲಕ ಫ್ರೀಜ್ ಮಾಡಿಸಿದ್ದಾರೆ.</p>.<p>‘₹ 18 ಕೋಟಿ ಪೈಕಿ ಕೋರ್ಟ್ ಆದೇಶದಂತೆ ದೂರುದಾರ ಪ್ರಮೋದ್ ಅವರಿಗೆ ₹ 52.60 ಲಕ್ಷ ಹಣ ಕೊಡಿಸಲಾಗಿದೆ. ಆರೋಪಿಗಳ ಬಗ್ಗೆ ದೇಶದ ವಿವಿಧ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ. ಉತ್ತರ ಪ್ರದೇಶ, ಜಮ್ಮು ಕಾಶ್ಮೀರ, ಆಂಧ್ರಪ್ರದೇಶ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳ ಸೈಬರ್ ಠಾಣೆಗಳಲ್ಲಿ ಇವರ ವಿರುದ್ಧ ಪ್ರಕರಣಗಳು ದಾಖಲಾಗಿವೆ.</p>.<p>‘ಇದೇ ಮೊದಲ ಬಾರಿ ಆರೋಪಿ ಸಿಕ್ಕಿಬಿದ್ದಿದ್ದು,ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ’ ಎಂದು ಸೈಬರ್ ಅಪರಾಧ ಠಾಣೆಯ ಡಿವೈಎಸ್ಪಿ ಬಂಕಾಳಿ ನಾಗಪ್ಪ ತಿಳಿಸಿದರು. </p>.<p>ಇನ್ಸ್ಪೆಕ್ಟರ್ ವಸಂತ್, ಸಿಬ್ಬಂದಿ ಅಶೋಕ, ಸುರೇಶ್, ಮುತ್ತುರಾಜ್, ನಿಜಲಿಂಗಪ್ಪ, ಅಂಜಿನಪ್ಪ ಕಾರ್ಯಾಚರಣೆ ನಡೆಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>