<p><strong>ಜಗಳೂರು:</strong> ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಸೈಬರ್ ಅಪರಾಧಗಳು ಶೇ 30ರಷ್ಟು ಕಡಿಮೆಯಾಗಿದ್ದು, ವಂಚಕರಿಂದ ₹ 10 ಕೋಟಿ ವಸೂಲಾತಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದರು.</p>.<p>ಪಟ್ಟಣದ ಪೊಲೀಸ್ ಠಾಣೆಗೆ ಸೋಮವಾರ ಭೇಟಿ ಪರಿಶೀಲಿಸಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಹೂಡಿಕೆ ನೆಪದಲ್ಲಿ ಅಕ್ಷರಸ್ಥರೇ ಹೆಚ್ಚಾಗಿ ಸೈಬರ್ ವಂಚನೆಗೆ ಒಳಗಾಗುತ್ತಿದ್ದಾರೆ. ಜಿಲ್ಲೆಯಲ್ಲಿ 69 ಪ್ರಕರಣಗಳು ಬೆಳಕಿಗೆ ಬಂದಿವೆ’ ಎಂದರು.</p>.<p>‘ಮನೆ ಮನೆಗೆ ಪೋಲೀಸ್ ಜಾಗೃತಿ ಅಭಿಯಾನದಿಂದ ಗ್ರಾಮೀಣ ಭಾಗದಲ್ಲಿನ ಅಪರಾಧ ಪ್ರಕರಣಗಳು ಹಾಗೂ ಕೌಟುಂಬಿಕ ಸಮಸ್ಯೆಗಳು ತ್ವರಿತವಾಗಿ ಇತ್ಯರ್ಥವಾಗುತ್ತಿವೆ’ ಎಂದರು.</p>.<p>‘ಜಿಲ್ಲೆಯಲ್ಲಿ 4.5 ಲಕ್ಷ ಮನೆಗಳಿದ್ದು, ಶೇ 78 ರಷ್ಟು ಮನೆಗಳಿಗೆ ಭೇಟಿ ನೀಡಿಲಾಗಿದೆ. ಅನೇಕ ಕಳವು, ನಾಪತ್ತೆ ಪ್ರಕರಣ ಪತ್ತೆಯಾಗಿವೆ. ದಲಿತ ಕಾಲೊನಿಗಳಿಗೆ ಭೇಟಿ ನೀಡಿ ಕುಂದುಕೊರತೆ ಆಲಿಸಲಾಗುತ್ತಿದೆ. ಜನಸಾಮಾನ್ಯರಲ್ಲಿ ಪೊಲೀಸ್ ಬಗ್ಗೆ ನಂಬಿಕೆ ಗಟ್ಟಿಗೊಳ್ಳುತ್ತಿದೆ’ ಎಂದು ಮಾಹಿತಿ ನೀಡಿದರು.</p>.<p>‘ಪಟ್ಟಣದಲ್ಲಿ 18 ಪೊಲೀಸ್ ವಸತಿ ಗೃಹಗಳಿವೆ. ಕೆಲವು ಶಿಥಿಲಾವಸ್ಥೆಯಲ್ಲಿದ್ದು, ಹೆಚ್ಚುವರಿಯಾಗಿ 24 ಪೊಲೀಸ್ ವಸತಿಗೃಹ ನಿರ್ಮಾಣಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ತಿಳಿಸಿದರು.</p>.<p>‘ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಸಂಚಾರಿ ಪೊಲೀಸ್ ನಿಯೋಜಿಸಬೇಕು. ವಸತಿಶಾಲೆಗಳಲ್ಲಿ ಪೋಕ್ಸೊ, ಬಾಲ್ಯವಿವಾಹ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಮೂಡಿಸಬೇಕು. ಹೆಚ್ಚುತ್ತಿರುವ ಅಪಘಾತಗಳ ಬಗ್ಗೆ ಅರಿವು ಮೂಡಿಸಬೇಕು’ ಎಂದರು.</p>.<p>ಡಿವೈಎಸ್ಪಿ ಬಸವರಾಜ್, ಸಿಪಿಐ ಸಿದ್ದರಾಮಯ್ಯ, ಪಿಎಸ್ಐಗಳಾದ ಗಾದಿಲಿಂಗಪ್ಪ, ಆಶಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಗಳೂರು:</strong> ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಸೈಬರ್ ಅಪರಾಧಗಳು ಶೇ 30ರಷ್ಟು ಕಡಿಮೆಯಾಗಿದ್ದು, ವಂಚಕರಿಂದ ₹ 10 ಕೋಟಿ ವಸೂಲಾತಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದರು.</p>.<p>ಪಟ್ಟಣದ ಪೊಲೀಸ್ ಠಾಣೆಗೆ ಸೋಮವಾರ ಭೇಟಿ ಪರಿಶೀಲಿಸಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಹೂಡಿಕೆ ನೆಪದಲ್ಲಿ ಅಕ್ಷರಸ್ಥರೇ ಹೆಚ್ಚಾಗಿ ಸೈಬರ್ ವಂಚನೆಗೆ ಒಳಗಾಗುತ್ತಿದ್ದಾರೆ. ಜಿಲ್ಲೆಯಲ್ಲಿ 69 ಪ್ರಕರಣಗಳು ಬೆಳಕಿಗೆ ಬಂದಿವೆ’ ಎಂದರು.</p>.<p>‘ಮನೆ ಮನೆಗೆ ಪೋಲೀಸ್ ಜಾಗೃತಿ ಅಭಿಯಾನದಿಂದ ಗ್ರಾಮೀಣ ಭಾಗದಲ್ಲಿನ ಅಪರಾಧ ಪ್ರಕರಣಗಳು ಹಾಗೂ ಕೌಟುಂಬಿಕ ಸಮಸ್ಯೆಗಳು ತ್ವರಿತವಾಗಿ ಇತ್ಯರ್ಥವಾಗುತ್ತಿವೆ’ ಎಂದರು.</p>.<p>‘ಜಿಲ್ಲೆಯಲ್ಲಿ 4.5 ಲಕ್ಷ ಮನೆಗಳಿದ್ದು, ಶೇ 78 ರಷ್ಟು ಮನೆಗಳಿಗೆ ಭೇಟಿ ನೀಡಿಲಾಗಿದೆ. ಅನೇಕ ಕಳವು, ನಾಪತ್ತೆ ಪ್ರಕರಣ ಪತ್ತೆಯಾಗಿವೆ. ದಲಿತ ಕಾಲೊನಿಗಳಿಗೆ ಭೇಟಿ ನೀಡಿ ಕುಂದುಕೊರತೆ ಆಲಿಸಲಾಗುತ್ತಿದೆ. ಜನಸಾಮಾನ್ಯರಲ್ಲಿ ಪೊಲೀಸ್ ಬಗ್ಗೆ ನಂಬಿಕೆ ಗಟ್ಟಿಗೊಳ್ಳುತ್ತಿದೆ’ ಎಂದು ಮಾಹಿತಿ ನೀಡಿದರು.</p>.<p>‘ಪಟ್ಟಣದಲ್ಲಿ 18 ಪೊಲೀಸ್ ವಸತಿ ಗೃಹಗಳಿವೆ. ಕೆಲವು ಶಿಥಿಲಾವಸ್ಥೆಯಲ್ಲಿದ್ದು, ಹೆಚ್ಚುವರಿಯಾಗಿ 24 ಪೊಲೀಸ್ ವಸತಿಗೃಹ ನಿರ್ಮಾಣಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ತಿಳಿಸಿದರು.</p>.<p>‘ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಸಂಚಾರಿ ಪೊಲೀಸ್ ನಿಯೋಜಿಸಬೇಕು. ವಸತಿಶಾಲೆಗಳಲ್ಲಿ ಪೋಕ್ಸೊ, ಬಾಲ್ಯವಿವಾಹ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಮೂಡಿಸಬೇಕು. ಹೆಚ್ಚುತ್ತಿರುವ ಅಪಘಾತಗಳ ಬಗ್ಗೆ ಅರಿವು ಮೂಡಿಸಬೇಕು’ ಎಂದರು.</p>.<p>ಡಿವೈಎಸ್ಪಿ ಬಸವರಾಜ್, ಸಿಪಿಐ ಸಿದ್ದರಾಮಯ್ಯ, ಪಿಎಸ್ಐಗಳಾದ ಗಾದಿಲಿಂಗಪ್ಪ, ಆಶಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>