<p><strong>ಹರಿಹರ:</strong> ಸೈಬರ್ ವಂಚನೆಗಳಿಂದ ಗ್ರಾಹಕರನ್ನು ರಕ್ಷಿಸಲು ಕೆನರಾ ಬ್ಯಾಂಕ್ ಗರಿಷ್ಠ ಸುರಕ್ಷತೆ ಒದಗಿಸಿದೆ ಎಂದು ಇಲ್ಲಿನ ಕೆನರಾ ಬ್ಯಾಂಕ್ ವ್ಯವಸ್ಥಾಪಕ ಚನ್ನಕೇಶವ ವಿ.ಎನ್. ಹೇಳಿದರು.</p>.<p>ನಗರದ ಹಳೆ ಪಿ.ಬಿ.ರಸ್ತೆಯಲ್ಲಿನ ಕೆನರಾ ಬ್ಯಾಂಕ್ ಶಾಖೆಯಲ್ಲಿ ಗುರುವಾರ ಆಯೋಜಿಸಿದ್ದ, ಬ್ಯಾಂಕ್ ಸಂಸ್ಥಾಪಕ ಅಮ್ಮೆಂಬಳ ಸುಬ್ಬರಾವ್ ಪೈ ಅವರ 173ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಸೈಬರ್ ವಂಚನೆಯನ್ನು ಪರಿಣಾಮಕಾರಿಯಾಗಿ ತಡೆಯಲು ಕೈಗೊಂಡ ಕ್ರಮಗಳಿಗಾಗಿ ಕೆನರಾ ಬ್ಯಾಂಕ್ 2024-25ನೇ ಸಾಲಿನಲ್ಲಿ ಕೇಂದ್ರದ ಹಣಕಾಸು ಸಚಿವರ ಪ್ರಶಸ್ತಿ ಪಡೆದಿದೆ ಎಂದರು. </p>.<p>ಸಾಲ ಮರುಪಾವತಿ ದ್ರಷ್ಟಿಯಿಂದ ಉಳ್ಳವರಿಗೆ ಸಾಲ ನೀಡುವ ಬ್ಯಾಂಕ್ಗಳ ನೀತಿಗೆ ಅಪವಾದವಾಗಿ ಕೆನರಾ ಬ್ಯಾಂಕ್ ಸೇವೆ ನೀಡುತ್ತಿದೆ ಎಂದು ತಹಶೀಲ್ದಾರ್ ಗುರುಬಸವರಾಜ್ ಕೆ.ಎಂ. ಹೇಳಿದರು.</p>.<p>ಬ್ರಹ್ಮಾನಂದ ಮಠದ ಮುಖ್ಯಸ್ಥ ವಿವೇಕಾನಂದ ಸ್ವಾಮಿ ಮಾತನಾಡಿದರು. ಗ್ರಾಹಕರು, ಸಿಬ್ಬಂದಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ:</strong> ಸೈಬರ್ ವಂಚನೆಗಳಿಂದ ಗ್ರಾಹಕರನ್ನು ರಕ್ಷಿಸಲು ಕೆನರಾ ಬ್ಯಾಂಕ್ ಗರಿಷ್ಠ ಸುರಕ್ಷತೆ ಒದಗಿಸಿದೆ ಎಂದು ಇಲ್ಲಿನ ಕೆನರಾ ಬ್ಯಾಂಕ್ ವ್ಯವಸ್ಥಾಪಕ ಚನ್ನಕೇಶವ ವಿ.ಎನ್. ಹೇಳಿದರು.</p>.<p>ನಗರದ ಹಳೆ ಪಿ.ಬಿ.ರಸ್ತೆಯಲ್ಲಿನ ಕೆನರಾ ಬ್ಯಾಂಕ್ ಶಾಖೆಯಲ್ಲಿ ಗುರುವಾರ ಆಯೋಜಿಸಿದ್ದ, ಬ್ಯಾಂಕ್ ಸಂಸ್ಥಾಪಕ ಅಮ್ಮೆಂಬಳ ಸುಬ್ಬರಾವ್ ಪೈ ಅವರ 173ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಸೈಬರ್ ವಂಚನೆಯನ್ನು ಪರಿಣಾಮಕಾರಿಯಾಗಿ ತಡೆಯಲು ಕೈಗೊಂಡ ಕ್ರಮಗಳಿಗಾಗಿ ಕೆನರಾ ಬ್ಯಾಂಕ್ 2024-25ನೇ ಸಾಲಿನಲ್ಲಿ ಕೇಂದ್ರದ ಹಣಕಾಸು ಸಚಿವರ ಪ್ರಶಸ್ತಿ ಪಡೆದಿದೆ ಎಂದರು. </p>.<p>ಸಾಲ ಮರುಪಾವತಿ ದ್ರಷ್ಟಿಯಿಂದ ಉಳ್ಳವರಿಗೆ ಸಾಲ ನೀಡುವ ಬ್ಯಾಂಕ್ಗಳ ನೀತಿಗೆ ಅಪವಾದವಾಗಿ ಕೆನರಾ ಬ್ಯಾಂಕ್ ಸೇವೆ ನೀಡುತ್ತಿದೆ ಎಂದು ತಹಶೀಲ್ದಾರ್ ಗುರುಬಸವರಾಜ್ ಕೆ.ಎಂ. ಹೇಳಿದರು.</p>.<p>ಬ್ರಹ್ಮಾನಂದ ಮಠದ ಮುಖ್ಯಸ್ಥ ವಿವೇಕಾನಂದ ಸ್ವಾಮಿ ಮಾತನಾಡಿದರು. ಗ್ರಾಹಕರು, ಸಿಬ್ಬಂದಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>