<p><strong>ಜಗಳೂರು (ದಾವಣಗೆರೆ):</strong> ಯಕೃತ್ ಸಿರೋಸಿಸ್ ಕಾಯಿಲೆಯಿಂದಾಗಿ ಸಾವು– ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ತಂದೆಗೆ ಪುತ್ರಿ ನೆರವಾಗಿದ್ದಾರೆ. </p>.<p>ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಶಿರಸ್ತೇದಾರ್ ಅಜ್ಜಪ್ಪ ಪತ್ರಿ ಅವರಿಗೆ ಮಗಳು ಚಂದನಾ ಯಕೃತ್ ದಾನ ಮಾಡಿ ಮರುಜೀವ ನೀಡಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೊ ಆಸ್ಪತ್ರೆಯಲ್ಲಿ ನಡೆದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ತಂದೆ ಹಾಗೂ ಮಗಳು ಚೇತರಿಸಿಕೊಳ್ಳುತ್ತಿದ್ದಾರೆ. </p>.<p>‘ಕೆಲಸದ ಒತ್ತಡದಿಂದ ಅನಾರೋಗ್ಯ ಬಾಧಿಸಿದೆ. ವೈದ್ಯಕೀಯ ವೆಚ್ಚ ಅಂದಾಜು ₹56 ಲಕ್ಷವಾಗಿದ್ದು, ಜೀವನವಿಡೀ ಗಳಿಸಿ, ಉಳಿಸಿದ ಹಣವನ್ನು ಇದಕ್ಕೇ ವ್ಯಯಿಸಿದಂತಾಗಿದೆ. ಸರ್ಕಾರದ ಆರೋಗ್ಯ ಸಂಜೀವಿನಿ ಯೋಜನೆಯಡಿ ಯಾವುದೇ ನೆರವು ಸಿಗುತ್ತಿಲ್ಲ’ ಎಂದು ಅಜ್ಜಪ್ಪ ‘ಪ್ರಜಾವಾಣಿ’ಯೊಂದಿಗೆ ನೋವು ತೋಡಿಕೊಂಡರು.</p>.<p>ಚಂದನಾ ಅವರು ಖಾಸಗಿ ಕಂಪನಿಯೊಂದರಲ್ಲಿ ಎಂಜಿನಿಯರ್ ಆಗಿದ್ದಾರೆ. ಅಜ್ಜಪ್ಪ ಅವರ ಮನೆಗೆ ಭೇಟಿ ನೀಡಿದ್ದ ಶಾಸಕ ಬಿ. ದೇವೇಂದ್ರಪ್ಪ, ಕುಟುಂಬದವರಿಗೆ ವೈಯಕ್ತಿಕವಾಗಿ ₹ 1 ಲಕ್ಷ ನೆರವು ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಗಳೂರು (ದಾವಣಗೆರೆ):</strong> ಯಕೃತ್ ಸಿರೋಸಿಸ್ ಕಾಯಿಲೆಯಿಂದಾಗಿ ಸಾವು– ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ತಂದೆಗೆ ಪುತ್ರಿ ನೆರವಾಗಿದ್ದಾರೆ. </p>.<p>ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಶಿರಸ್ತೇದಾರ್ ಅಜ್ಜಪ್ಪ ಪತ್ರಿ ಅವರಿಗೆ ಮಗಳು ಚಂದನಾ ಯಕೃತ್ ದಾನ ಮಾಡಿ ಮರುಜೀವ ನೀಡಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೊ ಆಸ್ಪತ್ರೆಯಲ್ಲಿ ನಡೆದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ತಂದೆ ಹಾಗೂ ಮಗಳು ಚೇತರಿಸಿಕೊಳ್ಳುತ್ತಿದ್ದಾರೆ. </p>.<p>‘ಕೆಲಸದ ಒತ್ತಡದಿಂದ ಅನಾರೋಗ್ಯ ಬಾಧಿಸಿದೆ. ವೈದ್ಯಕೀಯ ವೆಚ್ಚ ಅಂದಾಜು ₹56 ಲಕ್ಷವಾಗಿದ್ದು, ಜೀವನವಿಡೀ ಗಳಿಸಿ, ಉಳಿಸಿದ ಹಣವನ್ನು ಇದಕ್ಕೇ ವ್ಯಯಿಸಿದಂತಾಗಿದೆ. ಸರ್ಕಾರದ ಆರೋಗ್ಯ ಸಂಜೀವಿನಿ ಯೋಜನೆಯಡಿ ಯಾವುದೇ ನೆರವು ಸಿಗುತ್ತಿಲ್ಲ’ ಎಂದು ಅಜ್ಜಪ್ಪ ‘ಪ್ರಜಾವಾಣಿ’ಯೊಂದಿಗೆ ನೋವು ತೋಡಿಕೊಂಡರು.</p>.<p>ಚಂದನಾ ಅವರು ಖಾಸಗಿ ಕಂಪನಿಯೊಂದರಲ್ಲಿ ಎಂಜಿನಿಯರ್ ಆಗಿದ್ದಾರೆ. ಅಜ್ಜಪ್ಪ ಅವರ ಮನೆಗೆ ಭೇಟಿ ನೀಡಿದ್ದ ಶಾಸಕ ಬಿ. ದೇವೇಂದ್ರಪ್ಪ, ಕುಟುಂಬದವರಿಗೆ ವೈಯಕ್ತಿಕವಾಗಿ ₹ 1 ಲಕ್ಷ ನೆರವು ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>