‘ಸ್ಫೂರ್ತಿ ಯುವ ಉತ್ಸವ’ದ ಹಿನ್ನೆಯಲ್ಲಿ ‘ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಹೊಣೆಗಾರಿಕೆ’ ತತ್ವದಡಿ ಕಾಲೇಜಿನ ಬಿ.ಕಾಂ, ಬಿ.ಬಿ.ಎಂ, ಬಿ.ಸಿ.ಎ ಮತ್ತು ಎಂ.ಕಾಂ ವಿದ್ಯಾರ್ಥಿಗಳು ಬೀದಿ ನಾಟಕ ಪ್ರದರ್ಶಿಸುತ್ತಿದ್ದಾರೆ. 10 ತಂಡಗಳನ್ನು ರಚಿಸಲಾಗಿದ್ದು, ಸಾಮಾಜಿಕ ಕಳಕಳಿಯ ವಿಷಯವನ್ನು ಆಯ್ಕೆ ಮಾಡಿಕೊಂಡು, ಅದರ ಕಾರಣ, ಸಮಸ್ಯೆ ಮತ್ತು ನಿವಾರಣೆ ಹೇಗೆ ಎಂಬ ಬಗ್ಗೆ ಮಾಹಿತಿ ಕಲೆ ಹಾಕಿ ಕಿರು ನಾಟಕ ತಯಾರಿಸಿದ್ದಾರೆ. ಅದನ್ನು ನಗರದ ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನ ಮಾಡುತ್ತಿದ್ದಾರೆ.