<p><strong>ದಾವಣಗೆರೆ</strong>: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ 50 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿ ಜಿಲ್ಲಾ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಸಲಾಯಿತು ಎಂದು ಮಹಾಸಭಾದ ನೂತನ ದಾವಣಗೆರೆ ಜಿಲ್ಲಾ ಪ್ರತಿನಿಧಿ ಆನಂದ ತೀರ್ಥಚಾರ್ಯ ತಿಳಿಸಿದರು.</p>.<p>ಏಪ್ರಿಲ್ 13ರಂದು ನಡೆದ ಚುನಾವಣೆಯಲ್ಲಿ ಪ್ರತಿಸ್ಪರ್ಧಿ ನಾಗಭೂಷಣ್ ವಿರುದ್ಧ 216 ಮತಗಳ ಅಂತರದಿಂದ ಗೆಲುವು ಪಡೆದಿದ್ದೇನೆ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.</p>.<p>‘31 ಜಿಲ್ಲೆಗಳ ಪೈಕಿ ಅಶೋಕ ಹಾರನಹಳ್ಳಿ ಬೆಂಬಲದೊಂದಿಗೆ ಸ್ಪರ್ಧಿಸಿದ್ದ ಭಾನುಪ್ರಕಾಶ ಶರ್ಮ ತಂಡದ 21 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದೇವೆ. ಅಶೋಕ ಹಾರನಹಳ್ಳಿ ಅವರು ಈ ಹಿಂದೆ ಅಧ್ಯಕ್ಷರಾಗಿ ಉತ್ತಮ ಕೆಲಸ ಮಾಡಿದ್ದಾರೆ’ ಎಂದರು.</p>.<p>‘ಸಮುದಾಯದಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುವುದು. ವಧು– ವರರ ಶೋಧನೆ ದೊಡ್ಡ ಸಮಸ್ಯೆಯಾಗಿದ್ದು, ಈ ಬಗ್ಗೆ ಸಮಾವೇಶ ಆಯೋಜಿಸಲಾಗುವುದು’ ಎಂದು ತಿಳಿಸಿದರು.</p>.<p>‘ಜಾತಿಜನಗಣತಿಯು ನ್ಯೂನತೆಯಿಂದ ಕೂಡಿದ್ದು, ವಿಪ್ರ ಸಮುದಾಯದ ಜನಸಂಖ್ಯೆಯನ್ನು ಕಡಿಮೆ ತೋರಿಸಲಾಗಿದೆ. ಆಗಿರುವ ಪ್ರಮಾದವನ್ನು ಸರ್ಕಾರ ಸರಿಪಡಿಸಬೇಕು’ ಎಂದು ಮುಖಂಡ ಪಿ.ಸಿ.ಶ್ರೀನಿವಾಸ್ ಹೇಳಿದರು.</p>.<p>ಮುಖಂಡರಾದ ರಾಮಚಂದ್ರ, ಅನಿಲ್ ಬಾರಂಗಳ್, ನಿರಂಜನ, ಸತ್ಯನಾರಾಯಣ, ಬಾಲಕೃಷ್ಣ ವೈದ್ಯ, ಉಮೇಶ ಕುಲಕರ್ಣಿ ಇನ್ನಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ 50 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿ ಜಿಲ್ಲಾ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಸಲಾಯಿತು ಎಂದು ಮಹಾಸಭಾದ ನೂತನ ದಾವಣಗೆರೆ ಜಿಲ್ಲಾ ಪ್ರತಿನಿಧಿ ಆನಂದ ತೀರ್ಥಚಾರ್ಯ ತಿಳಿಸಿದರು.</p>.<p>ಏಪ್ರಿಲ್ 13ರಂದು ನಡೆದ ಚುನಾವಣೆಯಲ್ಲಿ ಪ್ರತಿಸ್ಪರ್ಧಿ ನಾಗಭೂಷಣ್ ವಿರುದ್ಧ 216 ಮತಗಳ ಅಂತರದಿಂದ ಗೆಲುವು ಪಡೆದಿದ್ದೇನೆ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.</p>.<p>‘31 ಜಿಲ್ಲೆಗಳ ಪೈಕಿ ಅಶೋಕ ಹಾರನಹಳ್ಳಿ ಬೆಂಬಲದೊಂದಿಗೆ ಸ್ಪರ್ಧಿಸಿದ್ದ ಭಾನುಪ್ರಕಾಶ ಶರ್ಮ ತಂಡದ 21 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದೇವೆ. ಅಶೋಕ ಹಾರನಹಳ್ಳಿ ಅವರು ಈ ಹಿಂದೆ ಅಧ್ಯಕ್ಷರಾಗಿ ಉತ್ತಮ ಕೆಲಸ ಮಾಡಿದ್ದಾರೆ’ ಎಂದರು.</p>.<p>‘ಸಮುದಾಯದಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುವುದು. ವಧು– ವರರ ಶೋಧನೆ ದೊಡ್ಡ ಸಮಸ್ಯೆಯಾಗಿದ್ದು, ಈ ಬಗ್ಗೆ ಸಮಾವೇಶ ಆಯೋಜಿಸಲಾಗುವುದು’ ಎಂದು ತಿಳಿಸಿದರು.</p>.<p>‘ಜಾತಿಜನಗಣತಿಯು ನ್ಯೂನತೆಯಿಂದ ಕೂಡಿದ್ದು, ವಿಪ್ರ ಸಮುದಾಯದ ಜನಸಂಖ್ಯೆಯನ್ನು ಕಡಿಮೆ ತೋರಿಸಲಾಗಿದೆ. ಆಗಿರುವ ಪ್ರಮಾದವನ್ನು ಸರ್ಕಾರ ಸರಿಪಡಿಸಬೇಕು’ ಎಂದು ಮುಖಂಡ ಪಿ.ಸಿ.ಶ್ರೀನಿವಾಸ್ ಹೇಳಿದರು.</p>.<p>ಮುಖಂಡರಾದ ರಾಮಚಂದ್ರ, ಅನಿಲ್ ಬಾರಂಗಳ್, ನಿರಂಜನ, ಸತ್ಯನಾರಾಯಣ, ಬಾಲಕೃಷ್ಣ ವೈದ್ಯ, ಉಮೇಶ ಕುಲಕರ್ಣಿ ಇನ್ನಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>