<p><strong>ದಾವಣಗೆರೆ:</strong> ‘ವಿದ್ಯಾರ್ಥಿಗಳನ್ನು ಕರೆದೊಯ್ಯುವ ಆಟೊ ಚಾಲಕರು ಸುರಕ್ಷತೆಯ ದೃಷ್ಟಿಯಿಂದ ಸಂಚಾರ ನಿಯಮಗಳನ್ನು ತಪ್ಪದೇ ಪಾಲಿಸಬೇಕು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಟಿ. ಶೇಖರ್ ಹೇಳಿದರು.</p>.<p>ನಗರದಲ್ಲಿ ಪೊಲೀಸ್ ಇಲಾಖೆ, ಡಾನ್ ಬೋಸ್ಕೊ ಸಂಸ್ಥೆ ಸಹಯೋಗದಲ್ಲಿ ಈಚೆಗೆ ಆಯೋಜಿಸಿದ್ದ ‘ಆಟೊ ಚಾಲಕರು ಮತ್ತು ಮಾಲೀಕರಿಗೆ ಸಂಚಾರ ನಿಯಮಗಳ ಅರಿವು ಹಾಗೂ ಮಕ್ಕಳ ಸುರಕ್ಷತೆ’ ಕುರಿತ ಸಮಾಲೋಚನಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ಜಿಲ್ಲೆಯಲ್ಲಿ 23 ಸಾವಿರ, ನಗರದಲ್ಲಿ 16 ಸಾವಿರ ಆಟೊಗಳಿವೆ. ಅವುಗಳನ್ನು ತಪ್ಪದೇ ನೋಂದಣಿ ಮಾಡಿಸಬೇಕು. ಮಕ್ಕಳು ಮತ್ತು ಮಹಿಳೆಯರು ವಾಹನಗಳಲ್ಲಿ ಇದ್ದಾಗ ಜಾಗರೂಕವಾಗಿರಬೇಕು’ ಎಂದರು.</p>.<p>‘ನಿಮ್ಮ ಸಂಘಟನೆಗಳಿಂದ ಗುರುತಿನ ಚೀಟಿ ಮಾಡಿಸಿಕೊಳ್ಳಿ. ಬೇರೆ ಜಿಲ್ಲೆಯ ಯಾವುದೇ ಆಟೊಗಳು ಓಡಾಡುತ್ತಿರುವುದು ಕಂಡುಬಂದರೆ ಕೂಡಲೇ ಸಂಚಾರ ಪೊಲೀಸರಿಗೆ ತಿಳಿಸಬೇಕು. ಅಂತಹ ವಾಹನಗಳನ್ನು ಜಪ್ತಿ ಮಾಡಲಾಗುತ್ತದೆ. ಆಟೊ ಚಾಲಕರು ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಎಎಸ್ಪಿ ಪರಮೇಶ್ವರ ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಡಾನ್ ಬೋಸ್ಕೊ ಸಂಸ್ಥೆಯ ಸಿ.ಎಸ್.ಎನ್. ಯೋಜನೆಯ ಸಂಯೋಜಕ ಬಿ. ಮಂಜಪ್ಪ ಉಪನ್ಯಾಸ ನೀಡಿದರು.</p>.<p>ಸಮಾಜಮುಖಿ ಕಾರ್ಯ ಮತ್ತು ಮಾನವೀಯತೆ ಮೆರೆದಿದ್ದ 7 ಜನ ಆಟೊ ಚಾಲಕರನ್ನು ಸನ್ಮಾನಿಸಲಾಯಿತು.</p>.<p>ಡಿವೈಎಸ್ಪಿಗಳಾದ ಬಸವರಾಜ್, ಶರಣಬಸವೇಶ್ವರ, ಸಂಸ್ಥೆಯ ನಿರ್ದೇಶಕ ಫಾದರ್ ರೆಜಿ ಜೇಕಬ್ ಡಾನ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-43-917818455</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ‘ವಿದ್ಯಾರ್ಥಿಗಳನ್ನು ಕರೆದೊಯ್ಯುವ ಆಟೊ ಚಾಲಕರು ಸುರಕ್ಷತೆಯ ದೃಷ್ಟಿಯಿಂದ ಸಂಚಾರ ನಿಯಮಗಳನ್ನು ತಪ್ಪದೇ ಪಾಲಿಸಬೇಕು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಟಿ. ಶೇಖರ್ ಹೇಳಿದರು.</p>.<p>ನಗರದಲ್ಲಿ ಪೊಲೀಸ್ ಇಲಾಖೆ, ಡಾನ್ ಬೋಸ್ಕೊ ಸಂಸ್ಥೆ ಸಹಯೋಗದಲ್ಲಿ ಈಚೆಗೆ ಆಯೋಜಿಸಿದ್ದ ‘ಆಟೊ ಚಾಲಕರು ಮತ್ತು ಮಾಲೀಕರಿಗೆ ಸಂಚಾರ ನಿಯಮಗಳ ಅರಿವು ಹಾಗೂ ಮಕ್ಕಳ ಸುರಕ್ಷತೆ’ ಕುರಿತ ಸಮಾಲೋಚನಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ಜಿಲ್ಲೆಯಲ್ಲಿ 23 ಸಾವಿರ, ನಗರದಲ್ಲಿ 16 ಸಾವಿರ ಆಟೊಗಳಿವೆ. ಅವುಗಳನ್ನು ತಪ್ಪದೇ ನೋಂದಣಿ ಮಾಡಿಸಬೇಕು. ಮಕ್ಕಳು ಮತ್ತು ಮಹಿಳೆಯರು ವಾಹನಗಳಲ್ಲಿ ಇದ್ದಾಗ ಜಾಗರೂಕವಾಗಿರಬೇಕು’ ಎಂದರು.</p>.<p>‘ನಿಮ್ಮ ಸಂಘಟನೆಗಳಿಂದ ಗುರುತಿನ ಚೀಟಿ ಮಾಡಿಸಿಕೊಳ್ಳಿ. ಬೇರೆ ಜಿಲ್ಲೆಯ ಯಾವುದೇ ಆಟೊಗಳು ಓಡಾಡುತ್ತಿರುವುದು ಕಂಡುಬಂದರೆ ಕೂಡಲೇ ಸಂಚಾರ ಪೊಲೀಸರಿಗೆ ತಿಳಿಸಬೇಕು. ಅಂತಹ ವಾಹನಗಳನ್ನು ಜಪ್ತಿ ಮಾಡಲಾಗುತ್ತದೆ. ಆಟೊ ಚಾಲಕರು ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಎಎಸ್ಪಿ ಪರಮೇಶ್ವರ ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಡಾನ್ ಬೋಸ್ಕೊ ಸಂಸ್ಥೆಯ ಸಿ.ಎಸ್.ಎನ್. ಯೋಜನೆಯ ಸಂಯೋಜಕ ಬಿ. ಮಂಜಪ್ಪ ಉಪನ್ಯಾಸ ನೀಡಿದರು.</p>.<p>ಸಮಾಜಮುಖಿ ಕಾರ್ಯ ಮತ್ತು ಮಾನವೀಯತೆ ಮೆರೆದಿದ್ದ 7 ಜನ ಆಟೊ ಚಾಲಕರನ್ನು ಸನ್ಮಾನಿಸಲಾಯಿತು.</p>.<p>ಡಿವೈಎಸ್ಪಿಗಳಾದ ಬಸವರಾಜ್, ಶರಣಬಸವೇಶ್ವರ, ಸಂಸ್ಥೆಯ ನಿರ್ದೇಶಕ ಫಾದರ್ ರೆಜಿ ಜೇಕಬ್ ಡಾನ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-43-917818455</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>