<p><strong>ದಾವಣಗೆರೆ/ಬಾಗಲಕೋಟೆ:</strong> ಉಪ ಚುನಾವಣೆ ನಡೆಯುತ್ತಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರದಲ್ಲಿ ಮಂಗಳವಾರ ನಾಮಪತ್ರಗಳ ಪರಿಶೀಲನೆ ನಡೆದಿದ್ದು, ಐವರ ನಾಮಪತ್ರಗಳು ತಿರಸ್ಕೃತಗೊಂಡವು.</p>.<p>ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಸಲ್ಲಿಕೆಯಾಗಿದ್ದ 45 ನಾಮಪತ್ರಗಳಲ್ಲಿ ಮೂವರ ನಾಮಪತ್ರಗಳು ತಿರಸ್ಕೃತಗೊಂಡಿವೆ. 36 ಅಭ್ಯರ್ಥಿಗಳ 42 ನಾಮಪತ್ರಗಳು ಕ್ರಮಬದ್ಧವಾಗಿವೆ.</p>.<p>ಬಿಜೆಪಿ ಹೆಸರಲ್ಲಿ ಯಶವಂತರಾವ್ ಜಾಧವ್, ಕಾಂಗ್ರೆಸ್ ಹೆಸರಲ್ಲಿ ಸಾದಿಕ್ ಪೈಲ್ವಾನ್, ಕರ್ನಾಟಕ ರಾಷ್ಟ್ರ ಸಮಿತಿ ಹೆಸರಲ್ಲಿ ಎಚ್.ಕೆ.ದಾವಲ್ಸಾಬ್ ಸಲ್ಲಿಸಿದ್ದ ನಾಮಪತ್ರಗಳು ತಿರಸ್ಕೃತಗೊಂಡವರು.</p>.<p>ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿರುವ ಸಾದಿಕ್ ಪೈಲ್ವಾನ್ ಅವರು ಪಕ್ಷೇತರರಾಗಿ ಸಲ್ಲಿಸಿದ್ದ ಮತ್ತೊಂದು ನಾಮಪತ್ರ ಊರ್ಜಿತವಾಗಿದೆ.</p>.<p><strong>ಬಾಗಲಕೋಟೆ ವರದಿ:</strong> ‘ಬಾಗಲಕೋಟೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಗಳಾದ ಪರಶುರಾಮ ನೀಲನಾಯಕ ಮತ್ತು ಬಾಬುಷಾ ರೊಳ್ಳಿ ಅವರು ಸೂಕ್ತ ದಾಖಲೆ ಸಲ್ಲಿಸಿಲ್ಲ ಎಂದು ನಾಮಪತ್ರ ತಿರಸ್ಕೃತವಾಗಿವೆ.</p>.<p>16 ಮಂದಿ ನಾಮಪತ್ರ ಸಲ್ಲಿಸಿದ್ದರು. ಇಬ್ಬರ ನಾಮಪತ್ರ ತಿರಸ್ಕೃತವಾಗಿದ್ದು, 14 ಮಂದಿ ಕಣದಲ್ಲಿ ಉಳಿದಿದ್ದಾರೆ ಎಂದು ಚುನಾವಣಾಧಿಕಾರಿ ಸಂತೋಷ ಜಗಲಾಸರ ತಿಳಿಸಿದರು.</p>.<p>ನಾಮಪತ್ರ ವಾಪಸು ಪಡೆಯಲು ಮಾರ್ಚ್ 26 ಕಡೆಯ ದಿನವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ/ಬಾಗಲಕೋಟೆ:</strong> ಉಪ ಚುನಾವಣೆ ನಡೆಯುತ್ತಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರದಲ್ಲಿ ಮಂಗಳವಾರ ನಾಮಪತ್ರಗಳ ಪರಿಶೀಲನೆ ನಡೆದಿದ್ದು, ಐವರ ನಾಮಪತ್ರಗಳು ತಿರಸ್ಕೃತಗೊಂಡವು.</p>.<p>ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಸಲ್ಲಿಕೆಯಾಗಿದ್ದ 45 ನಾಮಪತ್ರಗಳಲ್ಲಿ ಮೂವರ ನಾಮಪತ್ರಗಳು ತಿರಸ್ಕೃತಗೊಂಡಿವೆ. 36 ಅಭ್ಯರ್ಥಿಗಳ 42 ನಾಮಪತ್ರಗಳು ಕ್ರಮಬದ್ಧವಾಗಿವೆ.</p>.<p>ಬಿಜೆಪಿ ಹೆಸರಲ್ಲಿ ಯಶವಂತರಾವ್ ಜಾಧವ್, ಕಾಂಗ್ರೆಸ್ ಹೆಸರಲ್ಲಿ ಸಾದಿಕ್ ಪೈಲ್ವಾನ್, ಕರ್ನಾಟಕ ರಾಷ್ಟ್ರ ಸಮಿತಿ ಹೆಸರಲ್ಲಿ ಎಚ್.ಕೆ.ದಾವಲ್ಸಾಬ್ ಸಲ್ಲಿಸಿದ್ದ ನಾಮಪತ್ರಗಳು ತಿರಸ್ಕೃತಗೊಂಡವರು.</p>.<p>ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿರುವ ಸಾದಿಕ್ ಪೈಲ್ವಾನ್ ಅವರು ಪಕ್ಷೇತರರಾಗಿ ಸಲ್ಲಿಸಿದ್ದ ಮತ್ತೊಂದು ನಾಮಪತ್ರ ಊರ್ಜಿತವಾಗಿದೆ.</p>.<p><strong>ಬಾಗಲಕೋಟೆ ವರದಿ:</strong> ‘ಬಾಗಲಕೋಟೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಗಳಾದ ಪರಶುರಾಮ ನೀಲನಾಯಕ ಮತ್ತು ಬಾಬುಷಾ ರೊಳ್ಳಿ ಅವರು ಸೂಕ್ತ ದಾಖಲೆ ಸಲ್ಲಿಸಿಲ್ಲ ಎಂದು ನಾಮಪತ್ರ ತಿರಸ್ಕೃತವಾಗಿವೆ.</p>.<p>16 ಮಂದಿ ನಾಮಪತ್ರ ಸಲ್ಲಿಸಿದ್ದರು. ಇಬ್ಬರ ನಾಮಪತ್ರ ತಿರಸ್ಕೃತವಾಗಿದ್ದು, 14 ಮಂದಿ ಕಣದಲ್ಲಿ ಉಳಿದಿದ್ದಾರೆ ಎಂದು ಚುನಾವಣಾಧಿಕಾರಿ ಸಂತೋಷ ಜಗಲಾಸರ ತಿಳಿಸಿದರು.</p>.<p>ನಾಮಪತ್ರ ವಾಪಸು ಪಡೆಯಲು ಮಾರ್ಚ್ 26 ಕಡೆಯ ದಿನವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>