<p><strong>ದಾವಣಗೆರೆ</strong>: ಜಿಲ್ಲಾ ಬಿಜೆಪಿ ನಾಯಕರಲ್ಲಿ ಮೂಡಿರುವ ಭಿನ್ನಮತವನ್ನು ಶಮನಗೊಳಿಸಲು ರಾಜ್ಯ ಉಸ್ತುವಾರಿ ರಾಧಾಮೋಹನ್ದಾಸ್ ಅಗರವಾಲ್ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಇಡೀ ದಿನ ನಡೆಸಿದ ಪ್ರಯತ್ನ ಸಫಲವಾಗಲಿಲ್ಲ.</p><p>ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಎದುರಾಗಿರುವ ಉಪಚುನಾವಣೆಗೆ ನಿಯೋಜನೆಗೊಂಡ ಪಕ್ಷದ ಬೂತ್ ಮಟ್ಟದ ಕಾರ್ಯಕರ್ತರು ಹಾಗೂ ವಿಸ್ತಾರಕರನ್ನು ಅಭಿನಂದಿಸುವ ಕಾರ್ಯಕ್ರಮದಿಂದ ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ಹಾಗೂ ಶಾಸಕ ಬಿ.ಪಿ. ಹರೀಶ್ ಬಣ ದೂರ ಉಳಿಯಿತು.</p><p>‘ಈಗಾಗಲೇ ಒಂದು ಕಡೆ ನನ್ನ ಸಮಯ ವ್ಯರ್ಥವಾಗಿದೆ. ಈಗ ಸಮಯ ತುಂಬಾ ಕಡಿಮೆ ಇದೆ. ಮತ್ತೊಮ್ಮೆ ಬರುವೆ’ ಎಂಬುದಾಗಿ ರಾಧಾಮೋಹನ್ ದಾಸ್ ಅಗರವಾಲ್ ಬಹಿರಂಗ ಸಭೆಯಲ್ಲಿ ಕಾರ್ಯಕರ್ತರಿಗೆ ಸೂಚ್ಯವಾಗಿ ಹೇಳಿ ತರಾತುರಿಯಲ್ಲಿ ತೆರಳಿದರು.</p>.<p><strong>ಭಿನ್ನರ ಜೊತೆ ಪ್ರತ್ಯೇಕ ಸಭೆ:</strong> ಮಾಜಿ ಸಚಿವರಾದ ಎಂ.ಪಿ. ರೇಣುಕಾಚಾರ್ಯ, ಎಸ್.ಎ. ರವೀಂದ್ರನಾಥ್ ಬಣದ ಜೊತೆಗೆ ರಾಧಾಮೋಹನದಾಸ್ ಅಗರವಾಲ್ ಹಾಗೂ ಬಿ.ವೈ. ವಿಜಯೇಂದ್ರ ಅವರು ನಗರದ ಹೊರವಲಯದ ರೆಸಾರ್ಟ್ನಲ್ಲಿ ಒಂದೂವರೆ ಗಂಟೆ ಸಭೆ ನಡೆಸಿದರು. ಮಾಜಿ ಸಚಿವ ಕರುಣಾಕ ರೆಡ್ಡಿ ಸೇರಿದಂತೆ ಅನೇಕರ ಅಹವಾಲು ಆಲಿಸಿದರು.</p><p>ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ಹಾಗೂ ಶಾಸಕ ಬಿ.ಪಿ. ಹರೀಶ್ ಬಣದ ಜೊತೆಗೆ ಇಬ್ಬರು ನಾಯಕರು ಮಧ್ಯಾಹ್ನ ಸುದೀರ್ಘ ಸಭೆ ನಡೆಸಿದರು. ಬಳ್ಳಾರಿ ಮಾಜಿ ಸಂಸದ ದೇವೇಂದ್ರಪ್ಪ, ಮಾಜಿ ಶಾಸಕ ಎಚ್.ಪಿ.ರಾಜೇಶ್ ಸೇರಿ ಅನೇಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ‘ರೇಣುಕಾಚಾರ್ಯ ಹಠಾವೋ, ಬಿಜೆಪಿ ಬಚಾವೋ’ ಎಂಬುದಾಗಿ ಸಿದ್ದೇಶ್ವರ ಬೆಂಬಲಿಗರು ಘೋಷಣೆ ಕೂಗಿದರು.</p><p>‘ಪಕ್ಷದಲ್ಲಿ ಉಂಟಾಗಿದ್ದ ಸಣ್ಣಪುಟ್ಟ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಿದ್ದೇವೆ. ಎರಡು ಬಣಗಳೊಂದಿಗೆ ವಿಸ್ತೃತವಾಗಿ ಚರ್ಚಿಸಿದ್ದೇವೆ. ಇದು ಬಗೆಹರಿಯುವ ವಿಶ್ವಾಸ ಮೂಡಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ನಿರ್ಧರಿಸುವ ಅಭ್ಯರ್ಥಿಯ ಗೆಲುವಿಗೆ ಒಗ್ಗೂಡಿ ಶ್ರಮಿಸುವುದಾಗಿ ಎಲ್ಲರೂ ಒಪ್ಪಿದ್ದಾರೆ’ ಎಂದು ಬಿ.ವೈ. ವಿಜಯೇಂದ್ರ ಸುದ್ದಿಗಾರರಿಗೆ ತಿಳಿಸಿದರು.</p>.<div><blockquote>2028ರ ಸಾರ್ವತ್ರಿಕ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಬಿ.ಎಸ್. ಯಡಿಯೂರಪ್ಪ ಅವರು ಬಿಜೆಪಿಯನ್ನು ಗುತ್ತಿಗೆ ಹಿಡಿದಿರುವಂತೆ ವರ್ತಿಸುತ್ತಿದ್ದಾರೆ.</blockquote><span class="attribution">-ಬಿ.ಪಿ.ಹರೀಶ್, ಹರಿಹರ ಶಾಸಕ</span></div>.<div><blockquote>ರಾಜ್ಯ ಉಸ್ತುವಾರಿ ರಾಧಾಮೋಹನ್ದಾಸ್ ಅಗರವಾಲ್ ಬಳಿ ಕೆಲ ಬೇಡಿಕೆಗಳನ್ನು ಮುಂದಿಟ್ಟಿದ್ದೇವೆ. ಇದಕ್ಕೆ ಸ್ಪಂದಿಸುವ ಆಶ್ವಾಸನೆ ಸಿಕ್ಕಿದೆ. ಈಗ ಏನೂ ಹೇಳುವುದಿಲ್ಲ.</blockquote><span class="attribution">-ಜಿ.ಎಂ. ಸಿದ್ದೇಶ್ವರ, ಕೇಂದ್ರದ ಮಾಜಿ ಸಚಿವ</span></div>.ಪಕ್ಷದಲ್ಲಿ ಗೊಂದಲಗಳು ಇರುವುದು ನಿಜ, ಬಗೆಹರಿಸಿಕೊಳ್ಳುತ್ತೇವೆ: ಬಿ.ವೈ.ವಿಜಯೇಂದ್ರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಜಿಲ್ಲಾ ಬಿಜೆಪಿ ನಾಯಕರಲ್ಲಿ ಮೂಡಿರುವ ಭಿನ್ನಮತವನ್ನು ಶಮನಗೊಳಿಸಲು ರಾಜ್ಯ ಉಸ್ತುವಾರಿ ರಾಧಾಮೋಹನ್ದಾಸ್ ಅಗರವಾಲ್ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಇಡೀ ದಿನ ನಡೆಸಿದ ಪ್ರಯತ್ನ ಸಫಲವಾಗಲಿಲ್ಲ.</p><p>ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಎದುರಾಗಿರುವ ಉಪಚುನಾವಣೆಗೆ ನಿಯೋಜನೆಗೊಂಡ ಪಕ್ಷದ ಬೂತ್ ಮಟ್ಟದ ಕಾರ್ಯಕರ್ತರು ಹಾಗೂ ವಿಸ್ತಾರಕರನ್ನು ಅಭಿನಂದಿಸುವ ಕಾರ್ಯಕ್ರಮದಿಂದ ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ಹಾಗೂ ಶಾಸಕ ಬಿ.ಪಿ. ಹರೀಶ್ ಬಣ ದೂರ ಉಳಿಯಿತು.</p><p>‘ಈಗಾಗಲೇ ಒಂದು ಕಡೆ ನನ್ನ ಸಮಯ ವ್ಯರ್ಥವಾಗಿದೆ. ಈಗ ಸಮಯ ತುಂಬಾ ಕಡಿಮೆ ಇದೆ. ಮತ್ತೊಮ್ಮೆ ಬರುವೆ’ ಎಂಬುದಾಗಿ ರಾಧಾಮೋಹನ್ ದಾಸ್ ಅಗರವಾಲ್ ಬಹಿರಂಗ ಸಭೆಯಲ್ಲಿ ಕಾರ್ಯಕರ್ತರಿಗೆ ಸೂಚ್ಯವಾಗಿ ಹೇಳಿ ತರಾತುರಿಯಲ್ಲಿ ತೆರಳಿದರು.</p>.<p><strong>ಭಿನ್ನರ ಜೊತೆ ಪ್ರತ್ಯೇಕ ಸಭೆ:</strong> ಮಾಜಿ ಸಚಿವರಾದ ಎಂ.ಪಿ. ರೇಣುಕಾಚಾರ್ಯ, ಎಸ್.ಎ. ರವೀಂದ್ರನಾಥ್ ಬಣದ ಜೊತೆಗೆ ರಾಧಾಮೋಹನದಾಸ್ ಅಗರವಾಲ್ ಹಾಗೂ ಬಿ.ವೈ. ವಿಜಯೇಂದ್ರ ಅವರು ನಗರದ ಹೊರವಲಯದ ರೆಸಾರ್ಟ್ನಲ್ಲಿ ಒಂದೂವರೆ ಗಂಟೆ ಸಭೆ ನಡೆಸಿದರು. ಮಾಜಿ ಸಚಿವ ಕರುಣಾಕ ರೆಡ್ಡಿ ಸೇರಿದಂತೆ ಅನೇಕರ ಅಹವಾಲು ಆಲಿಸಿದರು.</p><p>ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ಹಾಗೂ ಶಾಸಕ ಬಿ.ಪಿ. ಹರೀಶ್ ಬಣದ ಜೊತೆಗೆ ಇಬ್ಬರು ನಾಯಕರು ಮಧ್ಯಾಹ್ನ ಸುದೀರ್ಘ ಸಭೆ ನಡೆಸಿದರು. ಬಳ್ಳಾರಿ ಮಾಜಿ ಸಂಸದ ದೇವೇಂದ್ರಪ್ಪ, ಮಾಜಿ ಶಾಸಕ ಎಚ್.ಪಿ.ರಾಜೇಶ್ ಸೇರಿ ಅನೇಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ‘ರೇಣುಕಾಚಾರ್ಯ ಹಠಾವೋ, ಬಿಜೆಪಿ ಬಚಾವೋ’ ಎಂಬುದಾಗಿ ಸಿದ್ದೇಶ್ವರ ಬೆಂಬಲಿಗರು ಘೋಷಣೆ ಕೂಗಿದರು.</p><p>‘ಪಕ್ಷದಲ್ಲಿ ಉಂಟಾಗಿದ್ದ ಸಣ್ಣಪುಟ್ಟ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಿದ್ದೇವೆ. ಎರಡು ಬಣಗಳೊಂದಿಗೆ ವಿಸ್ತೃತವಾಗಿ ಚರ್ಚಿಸಿದ್ದೇವೆ. ಇದು ಬಗೆಹರಿಯುವ ವಿಶ್ವಾಸ ಮೂಡಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ನಿರ್ಧರಿಸುವ ಅಭ್ಯರ್ಥಿಯ ಗೆಲುವಿಗೆ ಒಗ್ಗೂಡಿ ಶ್ರಮಿಸುವುದಾಗಿ ಎಲ್ಲರೂ ಒಪ್ಪಿದ್ದಾರೆ’ ಎಂದು ಬಿ.ವೈ. ವಿಜಯೇಂದ್ರ ಸುದ್ದಿಗಾರರಿಗೆ ತಿಳಿಸಿದರು.</p>.<div><blockquote>2028ರ ಸಾರ್ವತ್ರಿಕ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಬಿ.ಎಸ್. ಯಡಿಯೂರಪ್ಪ ಅವರು ಬಿಜೆಪಿಯನ್ನು ಗುತ್ತಿಗೆ ಹಿಡಿದಿರುವಂತೆ ವರ್ತಿಸುತ್ತಿದ್ದಾರೆ.</blockquote><span class="attribution">-ಬಿ.ಪಿ.ಹರೀಶ್, ಹರಿಹರ ಶಾಸಕ</span></div>.<div><blockquote>ರಾಜ್ಯ ಉಸ್ತುವಾರಿ ರಾಧಾಮೋಹನ್ದಾಸ್ ಅಗರವಾಲ್ ಬಳಿ ಕೆಲ ಬೇಡಿಕೆಗಳನ್ನು ಮುಂದಿಟ್ಟಿದ್ದೇವೆ. ಇದಕ್ಕೆ ಸ್ಪಂದಿಸುವ ಆಶ್ವಾಸನೆ ಸಿಕ್ಕಿದೆ. ಈಗ ಏನೂ ಹೇಳುವುದಿಲ್ಲ.</blockquote><span class="attribution">-ಜಿ.ಎಂ. ಸಿದ್ದೇಶ್ವರ, ಕೇಂದ್ರದ ಮಾಜಿ ಸಚಿವ</span></div>.ಪಕ್ಷದಲ್ಲಿ ಗೊಂದಲಗಳು ಇರುವುದು ನಿಜ, ಬಗೆಹರಿಸಿಕೊಳ್ಳುತ್ತೇವೆ: ಬಿ.ವೈ.ವಿಜಯೇಂದ್ರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>