<p><strong>ದಾವಣಗೆರೆ:</strong> ಮಾಯಕೊಂಡ ಕ್ಷೇತ್ರ ವ್ಯಾಪ್ತಿಯ ಚನ್ನಗಿರಿ ತಾಲ್ಲೂಕಿನ ಕೋಟೆಹಾಳು- ಮರಬನಹಳ್ಳಿ ಜಿಲ್ಲಾ ಮುಖ್ಯರಸ್ತೆಯಲ್ಲಿ ಶುಕ್ರವಾರ ನಡೆದ ಕೆಎಸ್ಆರ್ಟಿಸಿ ಬಸ್ ಪಲ್ಟಿ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯವನ್ನು ಶಾಸಕ ಕೆ.ಎಸ್.ಬಸವಂತಪ್ಪ ವಿಚಾರಿಸಿದರು.</p>.<p>ಶನಿವಾರ ಜಿಲ್ಲಾ ಚಿಗಟೇರಿ ಆಸ್ಪತ್ರೆ ಮತ್ತು ಎಸ್.ಎಸ್.ಹೈಟೆಕ್ ಆಸ್ಪತ್ರೆಗೆ ಭೇಟಿ ನೀಡಿದ ಕೆ.ಎಸ್.ಬಸವಂತಪ್ಪ ಅವರು ಗಾಯಾಳುಗಳಿಗೆ ಧೈರ್ಯ ತುಂಬಿದರು.</p>.<p>ಗಾಯಗೊಂಡ ನಾಲ್ವರ ಕೈ ಕಾಲುಗಳು ಮುರಿದಿದ್ದು, ಸೋಮವಾರ ಶಸ್ತ್ರಚಿಕಿತ್ಸೆ ನಡೆಯಲಿದೆ. ಆಸ್ಪತ್ರೆಯ ಆಡಳಿತ ಮಂಡಳಿ ಮತ್ತು ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಚರ್ಚಿಸಿ ಉತ್ತಮ ಚಿಕಿತ್ಸೆ ನೀಡುವಂತೆ ಸೂಚಿಸಿದರು.</p>.<p>ಹೈಟೆಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ನಾಲ್ವರ ಪೈಕಿ ಮೂವರು ಗಾಯಾಳುಗಳು ಬಿಡುಗಡೆಯಾಗಿದ್ದಾರೆ. ಒಂದು ಮಗು ಚಿಕಿತ್ಸೆ ಪಡೆಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಮಾಯಕೊಂಡ ಕ್ಷೇತ್ರ ವ್ಯಾಪ್ತಿಯ ಚನ್ನಗಿರಿ ತಾಲ್ಲೂಕಿನ ಕೋಟೆಹಾಳು- ಮರಬನಹಳ್ಳಿ ಜಿಲ್ಲಾ ಮುಖ್ಯರಸ್ತೆಯಲ್ಲಿ ಶುಕ್ರವಾರ ನಡೆದ ಕೆಎಸ್ಆರ್ಟಿಸಿ ಬಸ್ ಪಲ್ಟಿ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯವನ್ನು ಶಾಸಕ ಕೆ.ಎಸ್.ಬಸವಂತಪ್ಪ ವಿಚಾರಿಸಿದರು.</p>.<p>ಶನಿವಾರ ಜಿಲ್ಲಾ ಚಿಗಟೇರಿ ಆಸ್ಪತ್ರೆ ಮತ್ತು ಎಸ್.ಎಸ್.ಹೈಟೆಕ್ ಆಸ್ಪತ್ರೆಗೆ ಭೇಟಿ ನೀಡಿದ ಕೆ.ಎಸ್.ಬಸವಂತಪ್ಪ ಅವರು ಗಾಯಾಳುಗಳಿಗೆ ಧೈರ್ಯ ತುಂಬಿದರು.</p>.<p>ಗಾಯಗೊಂಡ ನಾಲ್ವರ ಕೈ ಕಾಲುಗಳು ಮುರಿದಿದ್ದು, ಸೋಮವಾರ ಶಸ್ತ್ರಚಿಕಿತ್ಸೆ ನಡೆಯಲಿದೆ. ಆಸ್ಪತ್ರೆಯ ಆಡಳಿತ ಮಂಡಳಿ ಮತ್ತು ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಚರ್ಚಿಸಿ ಉತ್ತಮ ಚಿಕಿತ್ಸೆ ನೀಡುವಂತೆ ಸೂಚಿಸಿದರು.</p>.<p>ಹೈಟೆಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ನಾಲ್ವರ ಪೈಕಿ ಮೂವರು ಗಾಯಾಳುಗಳು ಬಿಡುಗಡೆಯಾಗಿದ್ದಾರೆ. ಒಂದು ಮಗು ಚಿಕಿತ್ಸೆ ಪಡೆಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>