<p>ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣದಲ್ಲಿ ಪ್ರಚಾರದ ಭರಾಟೆ ಜೋರಾಗಿದೆ. ಕಾಂಗ್ರೆಸ್, ಬಿಜೆಪಿಯ ಮುಖಂಡರ ದಂಡು ಆಗಮಿಸಿದ್ದು, ಮತದಾರರ ಸೆಳೆಯಲು ಕಸರತ್ತು ನಡೆಸಿದ್ದಾರೆ.</p>.<p>ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ನೇತೃತ್ವದಲ್ಲಿ ಸಚಿವರು, ಶಾಸಕರು ಪಕ್ಷದ ಅಭ್ಯರ್ಥಿ ಪರವಾಗಿ ಅಖಾಡಕ್ಕೆ ಇಳಿದಿದ್ದಾರೆ.</p>.<p>ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಮತ್ತು ವಿರೋಧ ಪಕ್ಷದ ನಾಯಕ ಆರ್. ಅಶೋಕ ಸಾರಥ್ಯದಲ್ಲಿ ಎನ್ಡಿಎ ಅಭ್ಯರ್ಥಿ ಗೆಲುವಿಗೆ ಶಾಸಕರು, ಮಾಜಿ ಸಚಿವರು ಬೆವರು ಸುರಿಸುತ್ತಿದ್ದಾರೆ.</p>.<p>ಬೂತ್ ತೊರೆಯದಂತೆ ತಾಕೀತು: ಗೆಲುವಿಗೆ ಕಾರ್ಯತಂತ್ರ ರೂಪಿಸಲು ಡಿ.ಕೆ. ಶಿವಕುಮಾರ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸೋಮವಾರ ಸರಣಿ ಸಭೆ ನಡೆಸಿದರು. ಬಾಪೂಜಿ ಎಂಬಿಎ ಕಾಲೇಜು ಆವರಣದಲ್ಲಿ ತೆರೆದಿರುವ ಕೆಪಿಸಿಸಿ ಕ್ಯಾಂಪ್ ಕಚೇರಿ ಇಡೀ ದಿನ ಚಟುವಟಿಕೆಯಿಂದ ಕೂಡಿತ್ತು.</p>.<p>ಪ್ರಚಾರಕ್ಕೆ ಪಕ್ಷ ನಿಯೋಜಿಸಿದ ಸಚಿವರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರೊಂದಿಗೆ ಇಬ್ಬರೂ ಸಭೆ ನಡೆಸಿದರು. ಕೆಪಿಸಿಸಿ ವೀಕ್ಷಕರು, ಗ್ಯಾರಂಟಿ ಅನುಷ್ಠಾನ ಸಮಿತಿ ಪದಾಧಿಕಾರಿಗಳು, ಜಿಲ್ಲಾ ಮುಖಂಡರೊಂದಿಗೆ ಚರ್ಚಿಸಿದರು. ಏ.7ರವರೆಗೆ ಜವಾಬ್ದಾರಿ ನೀಡಿದ ಬೂತ್ಗಳನ್ನು ತೊರೆಯದಂತೆ ತಾಕೀತು ಮಾಡಿದರು.</p>.<p>ಕ್ಷೇತ್ರ ವ್ಯಾಪ್ತಿಯ 284 ಮತಗಟ್ಟೆಗಳನ್ನು ವಿಂಗಡಿಸಿ ಸಚಿವರು, ಶಾಸಕರು ಹಾಗೂ ನಿಗಮ– ಮಂಡಳಿಗಳ ಅಧ್ಯಕ್ಷರಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ.</p>.<p>ಬಿಜೆಪಿ ಪ್ರಣಾಳಿಕೆ ಬಿಡುಗಡೆ: ದಕ್ಷಿಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಪ್ರಣಾಳಿಕೆಯನ್ನು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್. ಅಶೋಕ್ ಬಿಡುಗಡೆ ಮಾಡಿದರು. 12 ಪ್ರಮುಖ ಅಂಶಗಳ ಪ್ರಣಾಳಿಕೆಯಲ್ಲಿ ರಸ್ತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗಿದೆ.</p>.<p>ಬಿ.ಎಸ್.ಯಡಿಯೂರಪ್ಪ, ಸಂಸದ ಬಸವರಾಜ ಬೊಮ್ಮಾಯಿ ಅವರೂ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡಿದರು. ಶಾಸಕ ಸುನಿಲ್ಕುಮಾರ್ ಅವರು ಕಾರ್ಯಕರ್ತರ ಸಭೆ ನಡೆಸಿ ಕಾರ್ಯತಂತ್ರ ರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-51-1344104530</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣದಲ್ಲಿ ಪ್ರಚಾರದ ಭರಾಟೆ ಜೋರಾಗಿದೆ. ಕಾಂಗ್ರೆಸ್, ಬಿಜೆಪಿಯ ಮುಖಂಡರ ದಂಡು ಆಗಮಿಸಿದ್ದು, ಮತದಾರರ ಸೆಳೆಯಲು ಕಸರತ್ತು ನಡೆಸಿದ್ದಾರೆ.</p>.<p>ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ನೇತೃತ್ವದಲ್ಲಿ ಸಚಿವರು, ಶಾಸಕರು ಪಕ್ಷದ ಅಭ್ಯರ್ಥಿ ಪರವಾಗಿ ಅಖಾಡಕ್ಕೆ ಇಳಿದಿದ್ದಾರೆ.</p>.<p>ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಮತ್ತು ವಿರೋಧ ಪಕ್ಷದ ನಾಯಕ ಆರ್. ಅಶೋಕ ಸಾರಥ್ಯದಲ್ಲಿ ಎನ್ಡಿಎ ಅಭ್ಯರ್ಥಿ ಗೆಲುವಿಗೆ ಶಾಸಕರು, ಮಾಜಿ ಸಚಿವರು ಬೆವರು ಸುರಿಸುತ್ತಿದ್ದಾರೆ.</p>.<p>ಬೂತ್ ತೊರೆಯದಂತೆ ತಾಕೀತು: ಗೆಲುವಿಗೆ ಕಾರ್ಯತಂತ್ರ ರೂಪಿಸಲು ಡಿ.ಕೆ. ಶಿವಕುಮಾರ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸೋಮವಾರ ಸರಣಿ ಸಭೆ ನಡೆಸಿದರು. ಬಾಪೂಜಿ ಎಂಬಿಎ ಕಾಲೇಜು ಆವರಣದಲ್ಲಿ ತೆರೆದಿರುವ ಕೆಪಿಸಿಸಿ ಕ್ಯಾಂಪ್ ಕಚೇರಿ ಇಡೀ ದಿನ ಚಟುವಟಿಕೆಯಿಂದ ಕೂಡಿತ್ತು.</p>.<p>ಪ್ರಚಾರಕ್ಕೆ ಪಕ್ಷ ನಿಯೋಜಿಸಿದ ಸಚಿವರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರೊಂದಿಗೆ ಇಬ್ಬರೂ ಸಭೆ ನಡೆಸಿದರು. ಕೆಪಿಸಿಸಿ ವೀಕ್ಷಕರು, ಗ್ಯಾರಂಟಿ ಅನುಷ್ಠಾನ ಸಮಿತಿ ಪದಾಧಿಕಾರಿಗಳು, ಜಿಲ್ಲಾ ಮುಖಂಡರೊಂದಿಗೆ ಚರ್ಚಿಸಿದರು. ಏ.7ರವರೆಗೆ ಜವಾಬ್ದಾರಿ ನೀಡಿದ ಬೂತ್ಗಳನ್ನು ತೊರೆಯದಂತೆ ತಾಕೀತು ಮಾಡಿದರು.</p>.<p>ಕ್ಷೇತ್ರ ವ್ಯಾಪ್ತಿಯ 284 ಮತಗಟ್ಟೆಗಳನ್ನು ವಿಂಗಡಿಸಿ ಸಚಿವರು, ಶಾಸಕರು ಹಾಗೂ ನಿಗಮ– ಮಂಡಳಿಗಳ ಅಧ್ಯಕ್ಷರಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ.</p>.<p>ಬಿಜೆಪಿ ಪ್ರಣಾಳಿಕೆ ಬಿಡುಗಡೆ: ದಕ್ಷಿಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಪ್ರಣಾಳಿಕೆಯನ್ನು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್. ಅಶೋಕ್ ಬಿಡುಗಡೆ ಮಾಡಿದರು. 12 ಪ್ರಮುಖ ಅಂಶಗಳ ಪ್ರಣಾಳಿಕೆಯಲ್ಲಿ ರಸ್ತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗಿದೆ.</p>.<p>ಬಿ.ಎಸ್.ಯಡಿಯೂರಪ್ಪ, ಸಂಸದ ಬಸವರಾಜ ಬೊಮ್ಮಾಯಿ ಅವರೂ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡಿದರು. ಶಾಸಕ ಸುನಿಲ್ಕುಮಾರ್ ಅವರು ಕಾರ್ಯಕರ್ತರ ಸಭೆ ನಡೆಸಿ ಕಾರ್ಯತಂತ್ರ ರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-51-1344104530</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>