<p><strong>ದಾವಣಗೆರೆ</strong>: ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಎದುರಾಗಲಿರುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಪಕ್ಷದ ಹೈಕಮಾಂಡ್ ತೀರ್ಮಾನಿಸುತ್ತದೆ. ಪಕ್ಷದ ಅಭ್ಯರ್ಥಿಯ ಗೆಲುವಿಗೆ ಕೆಲಸ ಮಾಡುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದರು.</p>.<p>ಶಾಮನೂರು ಶಿವಶಂಕರಪ್ಪ ನಿಧನದಿಂದ ಎದುರಾಗಲಿರುವ ಉಪಚುನಾವಣೆಯಲ್ಲಿ ಅಹಿಂದ ವರ್ಗದ ನಾಯಕರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು ಎಂಬ ಒತ್ತಾಯಕ್ಕೆ ಸಂಬಂಧಿಸಿದಂತೆ ಸಚಿವರು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಚುನಾವಣೆಗೆ ಸ್ಪರ್ಧಿಸುವ ಅಪೇಕ್ಷೆ ಅನೇಕರಲ್ಲಿದೆ. ಕ್ಷೇತ್ರದಲ್ಲಿ ಕುಟುಂಬದ ಸದಸ್ಯರೇ ಸ್ಪರ್ಧೆ ಮಾಡಬೇಕು ಎಂಬ ಹಠವಿಲ್ಲ. ಕ್ಷೇತ್ರ ಗೆಲ್ಲುವುದು ಮಾತ್ರವೇ ಪಕ್ಷದ ಗುರಿ. ಹೈಕಮಾಂಡ್ ಕೇಳಿದಾಗ ಕೂಲಂಕಷವಾಗಿ ಮಾತನಾಡುವೆ’ ಎಂದು ಹೇಳಿದರು.</p>.<p>ಪುತ್ರ ಸಮರ್ಥ ಸ್ಪರ್ಧೆಯ ಕುರಿತು ಪ್ರತಿಕ್ರಿಯಿಸಿದ ಸಚಿವರು, ‘ಮನೆ ಮಂದಿಯಲ್ಲ ರಾಜಕೀಯ ಮಾಡಿದರೆ ಹೊಟ್ಟೆಪಾಡಿಗೆ ಏನು ಮಾಡುವುದು’ ಎಂದು ಮರುಪ್ರಶ್ನಿಸಿದರು. ‘ಸಮರ್ಥ ಇನ್ನೂ ಯುವಕ. ಸಾಕಷ್ಟು ಕಾಲಾವಕಾಶವಿದೆ. ಸಹೋದರ ಎಸ್.ಎಸ್. ಗಣೇಶ್ ಹೆಸರು ಮುನ್ನೆಲೆಗೆ ಬರುತ್ತಿದೆ. ಅವರೊಂದಿಗೆ ಚರ್ಚೆ ಮಾಡುತ್ತೇನೆ. ಈ ವಿಚಾರದಲ್ಲಿ ಕುಟುಂಬ ಇನ್ನೂ ತೀರ್ಮಾನಕ್ಕೆ ಬಂದಿಲ್ಲ’ ಎಂದು ಸ್ಪಷ್ಟಪಡಿಸಿದರು.</p>.<div><blockquote>ಜನಪ್ರತಿನಿಧಿಯಾದ ನನ್ನೊಂದಿಗೆ ಅನೇಕರು ಫೋಟೊ ತೆಗೆಸಿಕೊಳ್ಳುತ್ತಾರೆ. ಅವರು ಮಾಡುವ ತಪ್ಪುಗಳಿಗೆ ನಾನು ಹೇಗೆ ಹೊಣೆಗಾರ ಆಗುತ್ತೇನೆ? ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ</blockquote><span class="attribution">ಎಸ್.ಎಸ್. ಮಲ್ಲಿಕಾರ್ಜುನ್ ಜಿಲ್ಲಾ ಉಸ್ತುವಾರಿ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಎದುರಾಗಲಿರುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಪಕ್ಷದ ಹೈಕಮಾಂಡ್ ತೀರ್ಮಾನಿಸುತ್ತದೆ. ಪಕ್ಷದ ಅಭ್ಯರ್ಥಿಯ ಗೆಲುವಿಗೆ ಕೆಲಸ ಮಾಡುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದರು.</p>.<p>ಶಾಮನೂರು ಶಿವಶಂಕರಪ್ಪ ನಿಧನದಿಂದ ಎದುರಾಗಲಿರುವ ಉಪಚುನಾವಣೆಯಲ್ಲಿ ಅಹಿಂದ ವರ್ಗದ ನಾಯಕರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು ಎಂಬ ಒತ್ತಾಯಕ್ಕೆ ಸಂಬಂಧಿಸಿದಂತೆ ಸಚಿವರು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಚುನಾವಣೆಗೆ ಸ್ಪರ್ಧಿಸುವ ಅಪೇಕ್ಷೆ ಅನೇಕರಲ್ಲಿದೆ. ಕ್ಷೇತ್ರದಲ್ಲಿ ಕುಟುಂಬದ ಸದಸ್ಯರೇ ಸ್ಪರ್ಧೆ ಮಾಡಬೇಕು ಎಂಬ ಹಠವಿಲ್ಲ. ಕ್ಷೇತ್ರ ಗೆಲ್ಲುವುದು ಮಾತ್ರವೇ ಪಕ್ಷದ ಗುರಿ. ಹೈಕಮಾಂಡ್ ಕೇಳಿದಾಗ ಕೂಲಂಕಷವಾಗಿ ಮಾತನಾಡುವೆ’ ಎಂದು ಹೇಳಿದರು.</p>.<p>ಪುತ್ರ ಸಮರ್ಥ ಸ್ಪರ್ಧೆಯ ಕುರಿತು ಪ್ರತಿಕ್ರಿಯಿಸಿದ ಸಚಿವರು, ‘ಮನೆ ಮಂದಿಯಲ್ಲ ರಾಜಕೀಯ ಮಾಡಿದರೆ ಹೊಟ್ಟೆಪಾಡಿಗೆ ಏನು ಮಾಡುವುದು’ ಎಂದು ಮರುಪ್ರಶ್ನಿಸಿದರು. ‘ಸಮರ್ಥ ಇನ್ನೂ ಯುವಕ. ಸಾಕಷ್ಟು ಕಾಲಾವಕಾಶವಿದೆ. ಸಹೋದರ ಎಸ್.ಎಸ್. ಗಣೇಶ್ ಹೆಸರು ಮುನ್ನೆಲೆಗೆ ಬರುತ್ತಿದೆ. ಅವರೊಂದಿಗೆ ಚರ್ಚೆ ಮಾಡುತ್ತೇನೆ. ಈ ವಿಚಾರದಲ್ಲಿ ಕುಟುಂಬ ಇನ್ನೂ ತೀರ್ಮಾನಕ್ಕೆ ಬಂದಿಲ್ಲ’ ಎಂದು ಸ್ಪಷ್ಟಪಡಿಸಿದರು.</p>.<div><blockquote>ಜನಪ್ರತಿನಿಧಿಯಾದ ನನ್ನೊಂದಿಗೆ ಅನೇಕರು ಫೋಟೊ ತೆಗೆಸಿಕೊಳ್ಳುತ್ತಾರೆ. ಅವರು ಮಾಡುವ ತಪ್ಪುಗಳಿಗೆ ನಾನು ಹೇಗೆ ಹೊಣೆಗಾರ ಆಗುತ್ತೇನೆ? ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ</blockquote><span class="attribution">ಎಸ್.ಎಸ್. ಮಲ್ಲಿಕಾರ್ಜುನ್ ಜಿಲ್ಲಾ ಉಸ್ತುವಾರಿ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>