<p>ದಾವಣಗೆರೆ: ಉಪಚುನಾವಣೆಯ ದಕ್ಷಿಣ ಕ್ಷೇತ್ರ ಗೆಲ್ಲಲು ಪಣತೊಟ್ಟಿರುವ ಬಿಜೆಪಿ ನಾಯಕರು ಪ್ರಚಾರ ಮಾತ್ರವಲ್ಲದೇ ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.</p>.<p>ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭಾನುವಾರ ಇಡೀ ದಿನ ಬೂತ್ ಸಮಿತಿ ಸದಸ್ಯರೊಂದಿಗೆ ಸರಣಿ ಸಭೆಗಳನ್ನು ನಡೆಸಿದರು.</p>.<p>ನಗರ ಹಾಗೂ ಗ್ರಾಮೀಣ ವ್ಯಾಪ್ತಿಯ ಬೂತ್ ಸಮಿತಿ ಅಧ್ಯಕ್ಷರು, ಸದಸ್ಯರ ಜೊತೆ ಚರ್ಚಿಸಿದ ಅವರು ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲೇಬೇಕು. ಮತದಾನದ ದಿನದವರೆಗೂ ಮತದಾರರ ಮನವೊಲಿಸಿ ಎಂದು ಸೂಚಿಸಿದರು.</p>.<p>ಸಭೆ ಬಳಿಕ ಮಾತನಾಡಿದ ಅವರು, ‘ದಕ್ಷಿಣ ಕ್ಷೇತ್ರದ ಪ್ರತಿ ಬೂತ್ನಲ್ಲಿ ಪರಿಸ್ಥಿತಿ ಬಗ್ಗೆ ಅವಲೋಕಿಸಿದ್ದೇನೆ. ಬೂತ್ ಪ್ರಮುಖರು ತುಂಬಾ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಂಕಿ ಸಂಖ್ಯೆ ಸಮೇತ ವರದಿ ನೀಡಿದ್ದಾರೆ. ಐತಿಹಾಸಿಕ ಗೆಲುವು ನಮ್ಮದಾಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ಮತದಾರರಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಇದೆ. ಸಾಮಾನ್ಯವಾಗಿ ಉಪಚುನಾವಣೆಯಲ್ಲಿ ಆಡಳಿತದ ಪರ ಅಲೆ ಇರುತ್ತದೆ. ಆದರೆ, ಇಲ್ಲಿ ಆಡಳಿತ ಪಕ್ಷದ ವಿರುದ್ಧ ಅಲೆ ಎದ್ದಿದೆ’ ಎಂದು ಹೇಳಿದರು.</p>.<p>ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರು ಗಾಂಧಿನಗರ ಸೇರಿದಂತೆ ವಿವಿಧೆಡೆ ಅದ್ದೂರಿ ಪ್ರಚಾರ ನಡೆಸಿ, ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.</p>.<p>‘ಕಾಂಗ್ರೆಸ್ನವರು ದಶಕಗಳ ಕಾಲ ಈ ಕ್ಷೇತ್ರದಲ್ಲಿ ಅಧಿಕಾರ ನಡೆಸಿದ್ದರೂ, ಈ ಭಾಗದಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕಾಮಗಾರಿ ನಡೆಸಿಲ್ಲ. ಜನಪ್ರತಿನಿಧಿಗಳಿಗೆ ಚುನಾವಣೆ ಸಂದರ್ಭದಲ್ಲಿ ಮಾತ್ರ ಈ ಭಾಗದ ಸಮಸ್ಯೆಗಳು ಅರಿವಿಗೆ ಬರುತ್ತವೆ’ ಎಂದು ಟೀಕಿಸಿದರು.</p>.<p>‘ಈ ಭಾಗದಲ್ಲಿ ಬಡವರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದು, ಅವರಿಗೆ ಇಲ್ಲಿಯವರೆಗೂ ವಸತಿ ಸೌಲಭ್ಯ ಕಲ್ಪಿಸಿಲ್ಲ. ಚರಂಡಿ ಸಮಸ್ಯೆಯು ತೀವ್ರವಾಗಿದೆ. ಮಳೆಗಾಲದಲ್ಲಿ ಇಲ್ಲಿನ ಮನೆಗಳಿಗೆ ನೀರು ನುಗ್ಗುತ್ತದೆ. ಇನ್ನೂ ಹತ್ತಾರು ಸಮಸ್ಯೆಗಳಿಗೆ ಪರಿಹಾರ ಸಿಗದೇ ಜನರು ಸಂಕಷ್ಟ ಪಡುತ್ತಿದ್ದಾರೆ’ ಎಂದು ಹೇಳಿದರು.</p>.<p>‘ದಕ್ಷಿಣ ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವ ಕನಸನ್ನು ಹೊತ್ತು ಈ ಬಾರಿ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. ಅತ್ಯಮೂಲ್ಯವಾದ ಮತವನ್ನು ನನಗೆ ನೀಡುವ ಮೂಲಕ ಜನಸೇವೆ ಮಾಡಲು ಅವಕಾಶ ನೀಡಬೇಕು’ ಎಂದು ಮನವಿ ಮಾಡಿದರು.</p>.<p>ಮುಖಂಡರಾದ ಯಶವಂತರಾವ್ ಜಾಧವ್, ರಾಜನಹಳ್ಳಿ ಶಿವಕುಮಾರ್, ಗಾಂಧಿನಗರ ಹಾಲೇಶ್, ಆಲೂರು ಲಿಂಗರಾಜು, ವೀರೇಶ್ ಡಿ.ಆರ್., ಆಂಜಿನಪ್ಪ, ಸೇರಿದಂತೆ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-44-139679862</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ಉಪಚುನಾವಣೆಯ ದಕ್ಷಿಣ ಕ್ಷೇತ್ರ ಗೆಲ್ಲಲು ಪಣತೊಟ್ಟಿರುವ ಬಿಜೆಪಿ ನಾಯಕರು ಪ್ರಚಾರ ಮಾತ್ರವಲ್ಲದೇ ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.</p>.<p>ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭಾನುವಾರ ಇಡೀ ದಿನ ಬೂತ್ ಸಮಿತಿ ಸದಸ್ಯರೊಂದಿಗೆ ಸರಣಿ ಸಭೆಗಳನ್ನು ನಡೆಸಿದರು.</p>.<p>ನಗರ ಹಾಗೂ ಗ್ರಾಮೀಣ ವ್ಯಾಪ್ತಿಯ ಬೂತ್ ಸಮಿತಿ ಅಧ್ಯಕ್ಷರು, ಸದಸ್ಯರ ಜೊತೆ ಚರ್ಚಿಸಿದ ಅವರು ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲೇಬೇಕು. ಮತದಾನದ ದಿನದವರೆಗೂ ಮತದಾರರ ಮನವೊಲಿಸಿ ಎಂದು ಸೂಚಿಸಿದರು.</p>.<p>ಸಭೆ ಬಳಿಕ ಮಾತನಾಡಿದ ಅವರು, ‘ದಕ್ಷಿಣ ಕ್ಷೇತ್ರದ ಪ್ರತಿ ಬೂತ್ನಲ್ಲಿ ಪರಿಸ್ಥಿತಿ ಬಗ್ಗೆ ಅವಲೋಕಿಸಿದ್ದೇನೆ. ಬೂತ್ ಪ್ರಮುಖರು ತುಂಬಾ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಂಕಿ ಸಂಖ್ಯೆ ಸಮೇತ ವರದಿ ನೀಡಿದ್ದಾರೆ. ಐತಿಹಾಸಿಕ ಗೆಲುವು ನಮ್ಮದಾಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ಮತದಾರರಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಇದೆ. ಸಾಮಾನ್ಯವಾಗಿ ಉಪಚುನಾವಣೆಯಲ್ಲಿ ಆಡಳಿತದ ಪರ ಅಲೆ ಇರುತ್ತದೆ. ಆದರೆ, ಇಲ್ಲಿ ಆಡಳಿತ ಪಕ್ಷದ ವಿರುದ್ಧ ಅಲೆ ಎದ್ದಿದೆ’ ಎಂದು ಹೇಳಿದರು.</p>.<p>ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರು ಗಾಂಧಿನಗರ ಸೇರಿದಂತೆ ವಿವಿಧೆಡೆ ಅದ್ದೂರಿ ಪ್ರಚಾರ ನಡೆಸಿ, ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.</p>.<p>‘ಕಾಂಗ್ರೆಸ್ನವರು ದಶಕಗಳ ಕಾಲ ಈ ಕ್ಷೇತ್ರದಲ್ಲಿ ಅಧಿಕಾರ ನಡೆಸಿದ್ದರೂ, ಈ ಭಾಗದಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕಾಮಗಾರಿ ನಡೆಸಿಲ್ಲ. ಜನಪ್ರತಿನಿಧಿಗಳಿಗೆ ಚುನಾವಣೆ ಸಂದರ್ಭದಲ್ಲಿ ಮಾತ್ರ ಈ ಭಾಗದ ಸಮಸ್ಯೆಗಳು ಅರಿವಿಗೆ ಬರುತ್ತವೆ’ ಎಂದು ಟೀಕಿಸಿದರು.</p>.<p>‘ಈ ಭಾಗದಲ್ಲಿ ಬಡವರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದು, ಅವರಿಗೆ ಇಲ್ಲಿಯವರೆಗೂ ವಸತಿ ಸೌಲಭ್ಯ ಕಲ್ಪಿಸಿಲ್ಲ. ಚರಂಡಿ ಸಮಸ್ಯೆಯು ತೀವ್ರವಾಗಿದೆ. ಮಳೆಗಾಲದಲ್ಲಿ ಇಲ್ಲಿನ ಮನೆಗಳಿಗೆ ನೀರು ನುಗ್ಗುತ್ತದೆ. ಇನ್ನೂ ಹತ್ತಾರು ಸಮಸ್ಯೆಗಳಿಗೆ ಪರಿಹಾರ ಸಿಗದೇ ಜನರು ಸಂಕಷ್ಟ ಪಡುತ್ತಿದ್ದಾರೆ’ ಎಂದು ಹೇಳಿದರು.</p>.<p>‘ದಕ್ಷಿಣ ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವ ಕನಸನ್ನು ಹೊತ್ತು ಈ ಬಾರಿ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. ಅತ್ಯಮೂಲ್ಯವಾದ ಮತವನ್ನು ನನಗೆ ನೀಡುವ ಮೂಲಕ ಜನಸೇವೆ ಮಾಡಲು ಅವಕಾಶ ನೀಡಬೇಕು’ ಎಂದು ಮನವಿ ಮಾಡಿದರು.</p>.<p>ಮುಖಂಡರಾದ ಯಶವಂತರಾವ್ ಜಾಧವ್, ರಾಜನಹಳ್ಳಿ ಶಿವಕುಮಾರ್, ಗಾಂಧಿನಗರ ಹಾಲೇಶ್, ಆಲೂರು ಲಿಂಗರಾಜು, ವೀರೇಶ್ ಡಿ.ಆರ್., ಆಂಜಿನಪ್ಪ, ಸೇರಿದಂತೆ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-44-139679862</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>