<p><strong>ದಾವಣಗೆರೆ:</strong> ಕ್ರಿಕೆಟ್ ಬೆಟ್ಟಿಂಗ್ ಮತ್ತು ಆನ್ಲೈನ್ ಗೇಮಿಂಗ್ ವ್ಯಸನದಿಂದ ಮಾಡಿಕೊಂಡಿದ್ದ ಸಾಲವನ್ನು ತೀರಿಸಲು ಸರಗಳ್ಳತ ಮಾಡುತ್ತಿದ್ದ ಆರೋಪದ ಮೇರೆಗೆ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಸೇರಿ ಐವರನ್ನು ಹೊನ್ನಾಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p><p>ಹಾವೇರಿ ಜಿಲ್ಲೆಯ ಮುಂಡರಗಿಯ ನಿಯಾಜ್ ಎಂ. (23), ಮುಸ್ತಾಕ್ (20), ಸುಹೀಲ್ (19), ಅಂಜುಮ್ ಬಾನು (22) ಹಾಗೂ ಕಾನೂನು ಸಂಘರ್ಷಕ್ಕೊಳಗಾದ ಬಾಲಕ ಬಂಧಿತರು. ಆರೋಪಿಗಳಿಂದ ₹ 2.2 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ₹ 20 ಲಕ್ಷ ಮೌಲ್ಯದ ಕಾರು, ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಇದರಿಂದ ಭರಮಸಾಗರ, ಹೊನ್ನಾಳಿ ಮತ್ತು ನ್ಯಾಮತಿ ಪೊಲೀಸ್ ಠಾಣಾ ವ್ಯಾಪ್ತಿಯ 3 ಪ್ರಕರಣಗಳು ಪತ್ತೆಯಾಗಿವೆ.</p><p>ಸಾಗರ ತಾಲ್ಲೂಕಿನ ತ್ಯಾಗರ್ತಿ ಗ್ರಾಮದ ಸತೀಶ್ ಎಂಬುವವರು ಮಾರ್ಚ್ 8ರಂದು ಪತ್ನಿಯೊಂದಿಗೆ ಹೊನ್ನಾಳಿಯಿಂದ ಶಿಕಾರಿಪುರದತ್ತ ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದರು. ಸೊರಟೂರು ಕ್ರಾಸ್ ಬಳಿ ಬೈಕ್ ಅಡ್ಡಗಟ್ಟಿದ ದುಷ್ಕರ್ಮಿಗಳು ₹ 50,000 ಮೌಲ್ಯದ ಚಿನ್ನಾಭರಣ ದೋಚಿದ್ದರು. ಹೊನ್ನಾಳಿ ಪೊಲೀಸ್ ಇನ್ಸ್ಟೆಕ್ಟರ್ ಸುನೀಲ್ ಕುಮಾರ್ ನೇತೃತ್ವದ ತಂಡ ಆರೋಪಿಗಳನ್ನು ಪತ್ತೆ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಕ್ರಿಕೆಟ್ ಬೆಟ್ಟಿಂಗ್ ಮತ್ತು ಆನ್ಲೈನ್ ಗೇಮಿಂಗ್ ವ್ಯಸನದಿಂದ ಮಾಡಿಕೊಂಡಿದ್ದ ಸಾಲವನ್ನು ತೀರಿಸಲು ಸರಗಳ್ಳತ ಮಾಡುತ್ತಿದ್ದ ಆರೋಪದ ಮೇರೆಗೆ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಸೇರಿ ಐವರನ್ನು ಹೊನ್ನಾಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p><p>ಹಾವೇರಿ ಜಿಲ್ಲೆಯ ಮುಂಡರಗಿಯ ನಿಯಾಜ್ ಎಂ. (23), ಮುಸ್ತಾಕ್ (20), ಸುಹೀಲ್ (19), ಅಂಜುಮ್ ಬಾನು (22) ಹಾಗೂ ಕಾನೂನು ಸಂಘರ್ಷಕ್ಕೊಳಗಾದ ಬಾಲಕ ಬಂಧಿತರು. ಆರೋಪಿಗಳಿಂದ ₹ 2.2 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ₹ 20 ಲಕ್ಷ ಮೌಲ್ಯದ ಕಾರು, ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಇದರಿಂದ ಭರಮಸಾಗರ, ಹೊನ್ನಾಳಿ ಮತ್ತು ನ್ಯಾಮತಿ ಪೊಲೀಸ್ ಠಾಣಾ ವ್ಯಾಪ್ತಿಯ 3 ಪ್ರಕರಣಗಳು ಪತ್ತೆಯಾಗಿವೆ.</p><p>ಸಾಗರ ತಾಲ್ಲೂಕಿನ ತ್ಯಾಗರ್ತಿ ಗ್ರಾಮದ ಸತೀಶ್ ಎಂಬುವವರು ಮಾರ್ಚ್ 8ರಂದು ಪತ್ನಿಯೊಂದಿಗೆ ಹೊನ್ನಾಳಿಯಿಂದ ಶಿಕಾರಿಪುರದತ್ತ ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದರು. ಸೊರಟೂರು ಕ್ರಾಸ್ ಬಳಿ ಬೈಕ್ ಅಡ್ಡಗಟ್ಟಿದ ದುಷ್ಕರ್ಮಿಗಳು ₹ 50,000 ಮೌಲ್ಯದ ಚಿನ್ನಾಭರಣ ದೋಚಿದ್ದರು. ಹೊನ್ನಾಳಿ ಪೊಲೀಸ್ ಇನ್ಸ್ಟೆಕ್ಟರ್ ಸುನೀಲ್ ಕುಮಾರ್ ನೇತೃತ್ವದ ತಂಡ ಆರೋಪಿಗಳನ್ನು ಪತ್ತೆ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>