<p><strong>ಆಗರಬನ್ನಿಹಟ್ಟಿ (ಚನ್ನಗಿರಿ):</strong> ‘ಸರ್ಕಾರದಿಂದಲೇ ಸರ್ಕಾರಿ ಶಾಲೆಗಳ ಅಭಿವೃದ್ಧಿ ಸಾಧ್ಯವಾಗುವುದಿಲ್ಲ. ಸಮುದಾಯದ ಸಹಕಾರವೂ ಅಗತ್ಯವಾಗಿದೆ’ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮೆಹಬೂಬ್ ಖಾನ್ ತಿಳಿಸಿದರು. </p>.<p>ತಾಲ್ಲೂಕಿನ ಆಗರಬನ್ನಿಹಟ್ಟಿ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ ನಲಿಕಲಿ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಮಾತನಾಡಿದರು. </p>.<p>ಚನ್ನಗಿರಿ ಪಟ್ಟಣದಿಂದ ಈ ಶಾಲೆಗೆ 80 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಶಾಲೆಯ ಶಿಕ್ಷಕರು ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದಾರೆ. ಒಂದನೇ ತರಗತಿಯ ನಲಿಕಲಿ ವಿದ್ಯಾರ್ಥಿಗಳ ಅಭ್ಯಾಸಕ್ಕೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಹಾಗೂ ಸದಸ್ಯರು ಮತ್ತು ಮಾಜಿ ಸದಸ್ಯರು ಸೇರಿ ₹19,000 ವೆಚ್ಚದಲ್ಲಿ ಟೇಬಲ್ ಹಾಗೂ ಕುರ್ಚಿಗಳನ್ನು ದಾನವಾಗಿ ನೀಡಿದ್ದೇವೆ. ಶಾಲೆಯ ಅಭಿವೃದ್ಧಿಗೆ ಸದಾ ಸಿದ್ದರಿದ್ದೇವೆ ಎಂದರು. </p>.<p>ಎಸ್ಡಿಎಂಸಿ ಸದಸ್ಯರಾದ ಮಹಿಬ್ ಉಲ್ಲಾ, ಸಮೀವುಲ್ಲಾ, ಮಾಜಿ ಅಧ್ಯಕ್ಷ ನಫೀಜ್ ಉಲ್ಲಾ, ಮಹಮದ್ ಹಫೀಜ್, ಮುಖ್ಯಶಿಕ್ಷಕ ಸೈಯದ್ ಇಲ್ಯಾಸ್ ಅಹಮದ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಗರಬನ್ನಿಹಟ್ಟಿ (ಚನ್ನಗಿರಿ):</strong> ‘ಸರ್ಕಾರದಿಂದಲೇ ಸರ್ಕಾರಿ ಶಾಲೆಗಳ ಅಭಿವೃದ್ಧಿ ಸಾಧ್ಯವಾಗುವುದಿಲ್ಲ. ಸಮುದಾಯದ ಸಹಕಾರವೂ ಅಗತ್ಯವಾಗಿದೆ’ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮೆಹಬೂಬ್ ಖಾನ್ ತಿಳಿಸಿದರು. </p>.<p>ತಾಲ್ಲೂಕಿನ ಆಗರಬನ್ನಿಹಟ್ಟಿ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ ನಲಿಕಲಿ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಮಾತನಾಡಿದರು. </p>.<p>ಚನ್ನಗಿರಿ ಪಟ್ಟಣದಿಂದ ಈ ಶಾಲೆಗೆ 80 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಶಾಲೆಯ ಶಿಕ್ಷಕರು ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದಾರೆ. ಒಂದನೇ ತರಗತಿಯ ನಲಿಕಲಿ ವಿದ್ಯಾರ್ಥಿಗಳ ಅಭ್ಯಾಸಕ್ಕೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಹಾಗೂ ಸದಸ್ಯರು ಮತ್ತು ಮಾಜಿ ಸದಸ್ಯರು ಸೇರಿ ₹19,000 ವೆಚ್ಚದಲ್ಲಿ ಟೇಬಲ್ ಹಾಗೂ ಕುರ್ಚಿಗಳನ್ನು ದಾನವಾಗಿ ನೀಡಿದ್ದೇವೆ. ಶಾಲೆಯ ಅಭಿವೃದ್ಧಿಗೆ ಸದಾ ಸಿದ್ದರಿದ್ದೇವೆ ಎಂದರು. </p>.<p>ಎಸ್ಡಿಎಂಸಿ ಸದಸ್ಯರಾದ ಮಹಿಬ್ ಉಲ್ಲಾ, ಸಮೀವುಲ್ಲಾ, ಮಾಜಿ ಅಧ್ಯಕ್ಷ ನಫೀಜ್ ಉಲ್ಲಾ, ಮಹಮದ್ ಹಫೀಜ್, ಮುಖ್ಯಶಿಕ್ಷಕ ಸೈಯದ್ ಇಲ್ಯಾಸ್ ಅಹಮದ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>