<p>ದಾವಣಗೆರೆ: ‘ಮಕ್ಕಳನ್ನು ಚೆನ್ನಾಗಿ ಓದಿಸಬೇಕು. ಮಕ್ಕಳ ಭವಿಷ್ಯ ಉಜ್ವಲವಾಗಿದ್ದರೆ ಮಾತ್ರ ದೇಶದ ಪ್ರಗತಿ ಸಾಧ್ಯವಾಗಲಿದೆ’ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದರು.</p>.<p>ನಗರದ ಕೃಷ್ಣ ಕಲಾ ಮಂದಿರದಲ್ಲಿ ಸೋಮವಾರ ಜಿಲ್ಲಾ ಆರ್ಯ ಈಡಿಗರ ಸಮಾಜದಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಗೌರವ ಸ್ವೀಕರಿಸಿ ಮಾತನಾಡಿದರು.</p>.<p>‘ಪ್ರಜಾಪ್ರಭುತ್ವದಲ್ಲಿ ಚುನಾವಣೆ ಬಂದಾಗ ನಿಮಗೆ ಅನುಕೂಲಕರವಾದ ಸರ್ಕಾರವನ್ನು ನೀವು ಆರಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ದಾವಣಗೆರೆಯಲ್ಲಿ ಕಾಂಗ್ರೆಸ್ ಸರ್ಕಾರ ಮಾಡಿದಷ್ಟು ಅಭಿವೃದ್ಧಿಯನ್ನು ಬೇರೆ ಯಾವ ಪಕ್ಷದವರೂ ಮಾಡಿಲ್ಲ. ಮುಂದೆಯೂ ಒಳ್ಳೆಯ ಕೆಲಸಗಳು ಆಗಬೇಕು ಎಂದರೆ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ’ ಎಂದು ಹೇಳಿದರು.</p>.<p>ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಬಿ.ಮಂಜಪ್ಪ, ‘ಸಮರ್ಥ್ ಶಾಮನೂರು ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ಅವರಿಗೆ ನಿಮ್ಮ ಮತ ನೀಡುವ ಮೂಲಕ ಜಯಶಾಲಿಯನ್ನಾಗಿ ಮಾಡಬೇಕು’ ಎಂದರು.</p>.<p>ಆರ್ಯ ಈಡಿಗರ ಸಮಾಜದ ಅಧ್ಯಕ್ಷ ಎ.ನಾಗರಾಜ, ‘ಬಿ.ಕೆ.ಹರಿಪ್ರಸಾದ್ ಅವರು ನಮ್ಮ ಸಮುದಾಯದ ಹಿತಕ್ಕಾಗಿ ಸಾಕಷ್ಟು ಕೆಲಸಗಳನ್ನು ಮಾಡುತ್ತಾ ಬಂದಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಸಚಿವರಾಗಲಿ’ ಎಂದು ಆಶಿಸಿದರು.</p>.<p>ಸಮಾಜದ ಗೌರವಾಧ್ಯಕ್ಷ ಎಸ್.ಶಂಕರ್, ಕಾರ್ಯದರ್ಶಿ ದೇವೇಂದ್ರಪ್ಪ, ಖಜಾಂಚಿ ಭರಮಪ್ಪ, ಮುಖಂಡರಾದ ಎಸ್.ಭರಮಪ್ಪ, ಆನಂದ, ಸಿ.ವಿ.ರವೀಂದ್ರ ಬಾಬು, ಬಿ.ಸೋಮಶೇಖರ, ಜಯಪ್ರಕಾಶ ಹಾಗೂ ನಿರ್ದೇಶಕರು, ಸಮುದಾಯದವರು, ಕಾರ್ಯಕರ್ತರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260407-43-363150397</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ‘ಮಕ್ಕಳನ್ನು ಚೆನ್ನಾಗಿ ಓದಿಸಬೇಕು. ಮಕ್ಕಳ ಭವಿಷ್ಯ ಉಜ್ವಲವಾಗಿದ್ದರೆ ಮಾತ್ರ ದೇಶದ ಪ್ರಗತಿ ಸಾಧ್ಯವಾಗಲಿದೆ’ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದರು.</p>.<p>ನಗರದ ಕೃಷ್ಣ ಕಲಾ ಮಂದಿರದಲ್ಲಿ ಸೋಮವಾರ ಜಿಲ್ಲಾ ಆರ್ಯ ಈಡಿಗರ ಸಮಾಜದಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಗೌರವ ಸ್ವೀಕರಿಸಿ ಮಾತನಾಡಿದರು.</p>.<p>‘ಪ್ರಜಾಪ್ರಭುತ್ವದಲ್ಲಿ ಚುನಾವಣೆ ಬಂದಾಗ ನಿಮಗೆ ಅನುಕೂಲಕರವಾದ ಸರ್ಕಾರವನ್ನು ನೀವು ಆರಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ದಾವಣಗೆರೆಯಲ್ಲಿ ಕಾಂಗ್ರೆಸ್ ಸರ್ಕಾರ ಮಾಡಿದಷ್ಟು ಅಭಿವೃದ್ಧಿಯನ್ನು ಬೇರೆ ಯಾವ ಪಕ್ಷದವರೂ ಮಾಡಿಲ್ಲ. ಮುಂದೆಯೂ ಒಳ್ಳೆಯ ಕೆಲಸಗಳು ಆಗಬೇಕು ಎಂದರೆ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ’ ಎಂದು ಹೇಳಿದರು.</p>.<p>ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಬಿ.ಮಂಜಪ್ಪ, ‘ಸಮರ್ಥ್ ಶಾಮನೂರು ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ಅವರಿಗೆ ನಿಮ್ಮ ಮತ ನೀಡುವ ಮೂಲಕ ಜಯಶಾಲಿಯನ್ನಾಗಿ ಮಾಡಬೇಕು’ ಎಂದರು.</p>.<p>ಆರ್ಯ ಈಡಿಗರ ಸಮಾಜದ ಅಧ್ಯಕ್ಷ ಎ.ನಾಗರಾಜ, ‘ಬಿ.ಕೆ.ಹರಿಪ್ರಸಾದ್ ಅವರು ನಮ್ಮ ಸಮುದಾಯದ ಹಿತಕ್ಕಾಗಿ ಸಾಕಷ್ಟು ಕೆಲಸಗಳನ್ನು ಮಾಡುತ್ತಾ ಬಂದಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಸಚಿವರಾಗಲಿ’ ಎಂದು ಆಶಿಸಿದರು.</p>.<p>ಸಮಾಜದ ಗೌರವಾಧ್ಯಕ್ಷ ಎಸ್.ಶಂಕರ್, ಕಾರ್ಯದರ್ಶಿ ದೇವೇಂದ್ರಪ್ಪ, ಖಜಾಂಚಿ ಭರಮಪ್ಪ, ಮುಖಂಡರಾದ ಎಸ್.ಭರಮಪ್ಪ, ಆನಂದ, ಸಿ.ವಿ.ರವೀಂದ್ರ ಬಾಬು, ಬಿ.ಸೋಮಶೇಖರ, ಜಯಪ್ರಕಾಶ ಹಾಗೂ ನಿರ್ದೇಶಕರು, ಸಮುದಾಯದವರು, ಕಾರ್ಯಕರ್ತರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260407-43-363150397</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>