ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇಂದು
ದಾವಣಗೆರೆ – ಚಿತ್ರದುರ್ಗ ಜಿಲ್ಲಾ ಬ್ಯಾಂಕ್ ನಿವೃತ್ತರ ಒಕ್ಕೂಟ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಪೆನ್ಷನರ್ ಕಮ್ಯೂನ್ ಸಂಘಟನೆ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಭಾನುವಾರ ನಡೆಯಲಿದೆ. ನಗರದ ತರಳಬಾಳು ಬಡಾವಣೆಯಲ್ಲಿರುವ ಮಾಗನೂರು ಬಸಪ್ಪ ಕಾಲೇಜು ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಒಕ್ಕೂಟದ ಅಧ್ಯಕ್ಷ ಶಾಂತಗಂಗಾಧರ ಎಸ್.ಟಿ. ಅಧ್ಯಕ್ಷತೆ ವಹಿಸಲಿದ್ದು ಕಾಲೇಜಿನ ನಿರ್ದೇಶಕ ಜಿ.ಎನ್.ಎಚ್.ಕುಮಾರ್ ಉದ್ಘಾಟಿಸಲಿದ್ದಾರೆ. ಎಸ್ಬಿಐ ಪೆನ್ಷನರ್ ಕಮ್ಯೂನ್ನ ಕಾರ್ಯದರ್ಶಿ ಅಜಿತ್ಕುಮಾರ್ ನ್ಯಾಮತಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಒಕ್ಕೂಟದ ಗೌರವಾಧ್ಯಕ್ಷ ಜಿ.ರಂಗಸ್ವಾಮಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ.