<p>ದಾವಣಗೆರೆ: ‘ದಕ್ಷಿಣ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪಕ್ಷದ ಭದ್ರಕೋಟೆ. ಇದನ್ನು ಬೇಧಿಸಲು ಯಾರಿಂದಲೂ ಸಾಧ್ಯವಿಲ್ಲ’ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.</p>.<p>ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರ ಆನೆಕೊಂಡದಲ್ಲಿ ಸೋಮವಾರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಶಿವಶಂಕರಪ್ಪ ಅವರು ಸಂಸದ, ಶಾಸಕ, ಮಂತ್ರಿಯಾಗಿ ಕ್ಷೇತ್ರದ ಬಡ, ಶೋಷಿತ, ದುರ್ಬಲ, ಅಹಿಂದ ವರ್ಗದ ಪ್ರಗತಿಗೆ ಶ್ರಮಿಸಿದ್ದಾರೆ. ಮನೆ, ನಿವೇಶನ, ಭೂಮಿ ನೀಡುವ ಜೊತೆಗೆ ಕಲ್ಯಾಣ ಮಂಟಪ ಕಟ್ಟಿಸಿದ್ದಾರೆ. ಕೋವಿಡ್ ಸಂದರ್ಭದಲ್ಲಿ ₹ 10 ಕೋಟಿಗೂ ಹೆಚ್ಚು ವೆಚ್ಚ ಮಾಡಿ ಜನರಿಗೆ ಉಚಿತ ಲಸಿಕೆ ಹಾಕಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ’ ಎಂದರು.</p>.<p>‘ಮಾದಿಗ ಸಮುದಾಯಕ್ಕೆ ಹೆಚ್ಚಿನ ಸಹಕಾರ ನೀಡಿದ ಶಾಮನೂರು ಕುಟುಂಬದ ಕುಡಿ ಸಮರ್ಥ್ ಅವರನ್ನು ಗೆಲ್ಲಿಸಬೇಕು. ಪ್ರತಿ ಬೂತ್ಗಳಲ್ಲೂ ನೂರಕ್ಕೆ ನೂರು ಮತ ಕಾಂಗ್ರೆಸ್ಗೆ ನೀಡಬೇಕು’ ಎಂದರು.</p>.<p>‘ಮಾದಿಗರನ್ನು ದಾರಿ ತಪ್ಪಿಸುವ ಷಡ್ಯಂತ್ರ ನಡೆಯುತ್ತಿದೆ. ಇದಕ್ಕೆ ನಾವ್ಯಾರೂ ಅವಕಾಶ ನೀಡುವುದು ಬೇಡ. ಸರ್ಕಾರದ ಮೇಲೆ ಒತ್ತಡ ತಂದು ಪರಿಶಿಷ್ಟ ಜಾತಿಯವರಿಗೆ ಸಿಗಬೇಕಾಗ ಸೌಲಭ್ಯಗಳನ್ನು ಕಲ್ಪಿಸಲು ಶ್ರಮಿಸುವೆ’ ಎಂದು ಭರವಸೆ ನೀಡಿದರು.</p>.<p>ಶಾಸಕ ಕೆ.ಎಸ್.ಬಸವಂತಪ್ಪ ಮಾತನಾಡಿ, ‘ರಾಜಕಾರಣಕ್ಕೆ ಯುವ ಪೀಳಿಗೆ ಪ್ರವೇಶಿಸಬೇಕೆಂಬ ಆಶಯದಿಂದ ಕಾಂಗ್ರೆಸ್ ಸಮರ್ಥ್ ಅವರಿಗೆ ಟಿಕೆಟ್ ನೀಡಿದ್ದು, ರಾಜ್ಯದಲ್ಲಿಯೇ ದಾಖಲೆ ಮತಗಳ ಅಂತರದಲ್ಲಿ ಗೆಲ್ಲಿಸಬೇಕು. ಈ ವಿಷಯದಲ್ಲಿ ಮಾದಿಗ ಹಾಗೂ ಮುಸ್ಲಿಂ ಸಮುದಾಯದ ಹೊಣೆಗಾರಿಕೆ ಹೆಚ್ಚು ಇದೆ’ ಎಂದು ಹೇಳಿದರು.</p>.<p>ಬಸಾಪುರ- ಹೊಸಕ್ಯಾಂಪ್, ಇಂದಿರಾ ನಗರ ಸೇರಿ ವಿವಿಧೆಡೆ ಪ್ರಚಾರ ನಡೆಸಲಾಯಿತು. ಮುಖಂಡರಾದ ಬಿ.ಎಂ.ಹನುಮಂತಪ್ಪ, ಕೊಟ್ರಯ್ಯ, ವೀರಯ್ಯ, ಚೌಡಪ್ಪ, ದ್ಯಾಮಪ್ಪ, ಎತ್ತಪ್ಪ, ವೇಮಣ್ಣ, ಮಲ್ಲೇಶ್, ನಾಗರಾಜ್, ಭರಮಸಾಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮುಬಾರಕ್, ರೆಹಮತ್ ವುಲ್ಲಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260407-44-551395999</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ‘ದಕ್ಷಿಣ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪಕ್ಷದ ಭದ್ರಕೋಟೆ. ಇದನ್ನು ಬೇಧಿಸಲು ಯಾರಿಂದಲೂ ಸಾಧ್ಯವಿಲ್ಲ’ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.</p>.<p>ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರ ಆನೆಕೊಂಡದಲ್ಲಿ ಸೋಮವಾರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಶಿವಶಂಕರಪ್ಪ ಅವರು ಸಂಸದ, ಶಾಸಕ, ಮಂತ್ರಿಯಾಗಿ ಕ್ಷೇತ್ರದ ಬಡ, ಶೋಷಿತ, ದುರ್ಬಲ, ಅಹಿಂದ ವರ್ಗದ ಪ್ರಗತಿಗೆ ಶ್ರಮಿಸಿದ್ದಾರೆ. ಮನೆ, ನಿವೇಶನ, ಭೂಮಿ ನೀಡುವ ಜೊತೆಗೆ ಕಲ್ಯಾಣ ಮಂಟಪ ಕಟ್ಟಿಸಿದ್ದಾರೆ. ಕೋವಿಡ್ ಸಂದರ್ಭದಲ್ಲಿ ₹ 10 ಕೋಟಿಗೂ ಹೆಚ್ಚು ವೆಚ್ಚ ಮಾಡಿ ಜನರಿಗೆ ಉಚಿತ ಲಸಿಕೆ ಹಾಕಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ’ ಎಂದರು.</p>.<p>‘ಮಾದಿಗ ಸಮುದಾಯಕ್ಕೆ ಹೆಚ್ಚಿನ ಸಹಕಾರ ನೀಡಿದ ಶಾಮನೂರು ಕುಟುಂಬದ ಕುಡಿ ಸಮರ್ಥ್ ಅವರನ್ನು ಗೆಲ್ಲಿಸಬೇಕು. ಪ್ರತಿ ಬೂತ್ಗಳಲ್ಲೂ ನೂರಕ್ಕೆ ನೂರು ಮತ ಕಾಂಗ್ರೆಸ್ಗೆ ನೀಡಬೇಕು’ ಎಂದರು.</p>.<p>‘ಮಾದಿಗರನ್ನು ದಾರಿ ತಪ್ಪಿಸುವ ಷಡ್ಯಂತ್ರ ನಡೆಯುತ್ತಿದೆ. ಇದಕ್ಕೆ ನಾವ್ಯಾರೂ ಅವಕಾಶ ನೀಡುವುದು ಬೇಡ. ಸರ್ಕಾರದ ಮೇಲೆ ಒತ್ತಡ ತಂದು ಪರಿಶಿಷ್ಟ ಜಾತಿಯವರಿಗೆ ಸಿಗಬೇಕಾಗ ಸೌಲಭ್ಯಗಳನ್ನು ಕಲ್ಪಿಸಲು ಶ್ರಮಿಸುವೆ’ ಎಂದು ಭರವಸೆ ನೀಡಿದರು.</p>.<p>ಶಾಸಕ ಕೆ.ಎಸ್.ಬಸವಂತಪ್ಪ ಮಾತನಾಡಿ, ‘ರಾಜಕಾರಣಕ್ಕೆ ಯುವ ಪೀಳಿಗೆ ಪ್ರವೇಶಿಸಬೇಕೆಂಬ ಆಶಯದಿಂದ ಕಾಂಗ್ರೆಸ್ ಸಮರ್ಥ್ ಅವರಿಗೆ ಟಿಕೆಟ್ ನೀಡಿದ್ದು, ರಾಜ್ಯದಲ್ಲಿಯೇ ದಾಖಲೆ ಮತಗಳ ಅಂತರದಲ್ಲಿ ಗೆಲ್ಲಿಸಬೇಕು. ಈ ವಿಷಯದಲ್ಲಿ ಮಾದಿಗ ಹಾಗೂ ಮುಸ್ಲಿಂ ಸಮುದಾಯದ ಹೊಣೆಗಾರಿಕೆ ಹೆಚ್ಚು ಇದೆ’ ಎಂದು ಹೇಳಿದರು.</p>.<p>ಬಸಾಪುರ- ಹೊಸಕ್ಯಾಂಪ್, ಇಂದಿರಾ ನಗರ ಸೇರಿ ವಿವಿಧೆಡೆ ಪ್ರಚಾರ ನಡೆಸಲಾಯಿತು. ಮುಖಂಡರಾದ ಬಿ.ಎಂ.ಹನುಮಂತಪ್ಪ, ಕೊಟ್ರಯ್ಯ, ವೀರಯ್ಯ, ಚೌಡಪ್ಪ, ದ್ಯಾಮಪ್ಪ, ಎತ್ತಪ್ಪ, ವೇಮಣ್ಣ, ಮಲ್ಲೇಶ್, ನಾಗರಾಜ್, ಭರಮಸಾಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮುಬಾರಕ್, ರೆಹಮತ್ ವುಲ್ಲಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260407-44-551395999</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>