<p><strong>ದಾವಣಗೆರೆ</strong>: ಜಿಲ್ಲೆಯ 59 ಗ್ರಾಮಗಳಲ್ಲಿ ಪೂರೈಕೆಯಾಗುವ ನೀರು ಕಲುಷಿತವಾಗಿದ್ದು, ಕುಡಿಯಲು ಯೋಗ್ಯವಿಲ್ಲ ಎಂಬುದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಪರೀಕ್ಷೆಯಲ್ಲಿ ಪತ್ತೆಯಾಗಿದೆ. ಇಂತಹ ಗ್ರಾಮಗಳಿಗೆ ಕುಡಿಯುವ ನೀರಿನ ಶುದ್ಧೀಕರಣ (ಆರ್ಒ) ಘಟಕಗಳನ್ನು ಅಳವಡಿಸಲಾಗಿದೆ.</p>.<p>ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಮೂಲಗಳ ಗುಣಮಟ್ಟವನ್ನು ನಿರಂತರವಾಗಿ ಪರೀಕ್ಷೆಗೆ ಒಳಡಿಸಲಾಗುತ್ತಿದೆ. 2025–26ನೇ ಸಾಲಿನ ಮಾರ್ಚ್ವರೆಗೆ 5,345 ಜಲ ಮಾದರಿಗಳನ್ನು ಪ್ರಯೋಗಾಲಯಗಳಲ್ಲಿ ಪರೀಕ್ಷಿಸಲಾಗಿದೆ. ಕೆಲವು ಜನವಸತಿ ಪ್ರದೇಶಗಳಲ್ಲಿನ ಜಲಮೂಲಗಳಲ್ಲಿ ಕಬ್ಬಿಣ, ನೈಟ್ರೇಟ್ ಮತ್ತು ಲವಣಾಂಶಗಳು ನಿಗದಿತ ಪ್ರಮಾಣಕ್ಕಿಂತ ಹೆಚ್ಚಾಗಿರುವುದು ಕಂಡುಬಂದಿದೆ.</p>.<p>ಜಿಲ್ಲೆಯ 726 ಜನವಸತಿ ಪ್ರದೇಶಗಳಲ್ಲಿ 400ಕ್ಕೂ ಅಧಿಕ ಹಳ್ಳಿಗಳು ಬಹುಗ್ರಾಮ ಕುಡಿಯುವ ನೀರಿನ ಯೋಜನೆ ವ್ಯಾಪ್ತಿಯಲ್ಲಿವೆ. 35 ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಕಾರ್ಯನಿರ್ವಹಿಸುತ್ತಿದ್ದು, 5 ಯೋಜನೆಗಳು ಪ್ರಗತಿಯಲ್ಲಿವೆ. ತುಂಗಭದ್ರಾ ನದಿ ಹಾಗೂ ಶಾಂತಿಸಾಗರ ಕೆರೆಯ ನೀರಿನ ಮೇಲಿನ ಅವಲಂಬನೆ ಹೆಚ್ಚಿದೆ. ಉಳಿದ ಜನವಸತಿ ಪ್ರದೇಶಗಳ ಕುಡಿಯುವ ನೀರಿಗೆ ಕೊಳವೆಬಾವಿ ಆಶ್ರಯಿಸಲಾಗಿದೆ. ಈ ಎಲ್ಲ ಜಲಮೂಲಗಳ ನೀರಿನ ಗುಣಮಟ್ಟವನ್ನು ಪರೀಕ್ಷಿಸಲಾಗುತ್ತಿದೆ.</p>.<p>‘ಜಲಜೀವನ್ ಮಿಷನ್ ಯೋಜನೆಯಡಿ ನಿರ್ವಹಣೆ ಹಾಗೂ ನೀರಿನ ಗುಣಮಟ್ಟ ಪರೀಕ್ಷೆಗೆ ಅನುದಾನವಿದೆ. ರಾಜ್ಯ ಸರ್ಕಾರದ ಪ್ರತ್ಯೇಕ ಅನುದಾನ ಕೂಡ ಲಭ್ಯವಿದೆ. ನೀರಿನ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ನಿರಂತರ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ತಿಳಿಸಿದರು.</p>.<p><strong>ಮೂರು ಹಂತದ ಪರೀಕ್ಷೆ:</strong> ಕುಡಿಯುವ ನೀರಿನ ಗುಣಮಟ್ಟವನ್ನು ಮೂರು ಹಂತಗಳಲ್ಲಿ ಪರೀಕ್ಷಿಸಲಾಗುತ್ತಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಫೀಲ್ಡ್ ಟೆಸ್ಟಿಂಗ್ ಕಿಟ್ಗಳ (ಎಫ್ಟಿಕೆ) ಮೂಲಕ ನೀರಗಂಟಿಗಳು ಪರೀಕ್ಷೆ ನಡೆಸುತ್ತಾರೆ. ಚನ್ನಗಿರಿ ಹಾಗೂ ದಾವಣಗೆರೆಯಲ್ಲಿ ರಾಸಾಯನಿಕ ಪ್ರಯೋಗಾಲಯ (ಕೆಮಿಕಲ್ ಲ್ಯಾಬ್) ಹಾಗೂ ದಾವಣಗೆರೆಯಲ್ಲಿರುವ ಜೈವಿಕ ಪ್ರಯೋಗಾಲಯದಲ್ಲಿ (ಬಯಾಲಾಜಿಕಲ್ ಲ್ಯಾಬ್) ನೀರಿನ ಗುಣಮಟ್ಟವನ್ನು ಪರೀಕ್ಷಿಸಲಾಗುತ್ತಿದೆ.</p>.<p>‘ಎಫ್ಟಿಕೆ ಮೂಲಕ ನೀರಿನ ಗುಣಮಟ್ಟ ಪರೀಕ್ಷಿಸಲು ನೀರಗಂಟಿಗಳಿಗೆ ತರಬೇತಿ ನೀಡಲಾಗಿದೆ. 2025–26ನೇ ಸಾಲಿನಲ್ಲಿ 26,000 ನೀರಿನ ಮಾದರಿಗಳನ್ನು ಪರೀಕ್ಷಿಸಿ ನಿಗದಿತ ಗುರಿಗಿಂತ ಶೇ 107ರಷ್ಟು ಪ್ರಗತಿ ಸಾಧಿಸಲಾಗಿದೆ. ರಾಸಾಯನಿಕ ಪ್ರಯೋಗಾಲಯದಲ್ಲಿ 18 ಅಂಶಗಳನ್ನು ಕೇಂದ್ರೀಕರಿಸಿ ಪರೀಕ್ಷಿಸಲಾಗುತ್ತದೆ. ಖಾಸಗಿ ಕೊಳವೆಬಾವಿಗಳ ನೀರು ಕೂಡ ಪರೀಕ್ಷಿಸಿ ಜನವಸತಿ ಪ್ರದೇಶಕ್ಕೆ ಪೂರೈಸಲಾಗುತ್ತಿದೆ’ ಎಂದು ಗಿತ್ತೆ ಮಾಧವ ವಿಠ್ಠಲರಾವ್ ವಿವರಿಸಿದರು.</p>.<p>ಫ್ಲೋರೈಡ್ ಅಂಶ ಇರುವ ನೀರು ಬಳಕೆ ಮಾಡಿದ ಗ್ರಾಮಗಳ ಜನರ ಆರೋಗ್ಯ ತಪಾಸಣೆಯನ್ನು ಜಿಲ್ಲಾ ಪಂಚಾಯಿತಿ ವತಿಯಿಂದ ನಡೆಸಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯರ ತಂಡ ಗ್ರಾಮೀಣ ಜನರ ದಂತ ಹಾಗೂ ಮೂಳೆಯನ್ನು ಪರೀಕ್ಷಿಸಿ ಸಲಹೆ, ಔಷಧಗಳನ್ನು ನೀಡಿದೆ.</p>.<p><strong>5 ಗ್ರಾಮಗಳಿಗೆ ಟ್ಯಾಂಕರ್ ನೀರು</strong></p><p>ಜಿಲ್ಲೆಯ 25 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಈ ಪೈಕಿ 5 ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.</p><p>ದಾವಣಗೆರೆ ತಾಲ್ಲೂಕಿನ ಗುಡಾಳು, ವಿನಾಯಕ ಕ್ಯಾಂಪ್, ಚಿಕ್ಕವ್ವನಾಗತಿಹಳ್ಳಿ, ಚನ್ನಗಿರಿ ತಾಲ್ಲೂಕಿನ ಕಂಚುಗಾರತಿಕಟ್ಟೆ ಹಾಗೂ ಜಗಳೂರು ತಾಲ್ಲೂಕಿನ ಹುಚ್ಚಂಗಿಪುರಕ್ಕೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಉಳಿದ 20 ಗ್ರಾಮಗಳಲ್ಲಿ ಖಾಸಗಿ ಕೊಳವೆಬಾವಿಗಳ ನೆರವು ಪಡೆಯಲಾಗಿದೆ.</p>.<div><blockquote>ಕುಡಿಯುವ ನೀರಿನ ಗುಣಮಟ್ಟಕ್ಕೆ ಹೆಚ್ಚು ಗಮನ ಹರಿಸಲಾಗಿದೆ. ಯಾವುದೇ ಕಾರಣಕ್ಕೂ ಕಲುಷಿತ ನೀರು ಪೂರೈಕೆ ಆಗದಂತೆ ಎಚ್ಚರ ವಹಿಸಲಾಗಿದೆ <br></blockquote><span class="attribution">ಗಿತ್ತೆ ಮಾಧವ ವಿಠ್ಠಲರಾವ್, ಸಿಇಒ, ಜಿಲ್ಲಾ ಪಂಚಾಯಿತಿ</span></div>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-43-1714315873</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಜಿಲ್ಲೆಯ 59 ಗ್ರಾಮಗಳಲ್ಲಿ ಪೂರೈಕೆಯಾಗುವ ನೀರು ಕಲುಷಿತವಾಗಿದ್ದು, ಕುಡಿಯಲು ಯೋಗ್ಯವಿಲ್ಲ ಎಂಬುದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಪರೀಕ್ಷೆಯಲ್ಲಿ ಪತ್ತೆಯಾಗಿದೆ. ಇಂತಹ ಗ್ರಾಮಗಳಿಗೆ ಕುಡಿಯುವ ನೀರಿನ ಶುದ್ಧೀಕರಣ (ಆರ್ಒ) ಘಟಕಗಳನ್ನು ಅಳವಡಿಸಲಾಗಿದೆ.</p>.<p>ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಮೂಲಗಳ ಗುಣಮಟ್ಟವನ್ನು ನಿರಂತರವಾಗಿ ಪರೀಕ್ಷೆಗೆ ಒಳಡಿಸಲಾಗುತ್ತಿದೆ. 2025–26ನೇ ಸಾಲಿನ ಮಾರ್ಚ್ವರೆಗೆ 5,345 ಜಲ ಮಾದರಿಗಳನ್ನು ಪ್ರಯೋಗಾಲಯಗಳಲ್ಲಿ ಪರೀಕ್ಷಿಸಲಾಗಿದೆ. ಕೆಲವು ಜನವಸತಿ ಪ್ರದೇಶಗಳಲ್ಲಿನ ಜಲಮೂಲಗಳಲ್ಲಿ ಕಬ್ಬಿಣ, ನೈಟ್ರೇಟ್ ಮತ್ತು ಲವಣಾಂಶಗಳು ನಿಗದಿತ ಪ್ರಮಾಣಕ್ಕಿಂತ ಹೆಚ್ಚಾಗಿರುವುದು ಕಂಡುಬಂದಿದೆ.</p>.<p>ಜಿಲ್ಲೆಯ 726 ಜನವಸತಿ ಪ್ರದೇಶಗಳಲ್ಲಿ 400ಕ್ಕೂ ಅಧಿಕ ಹಳ್ಳಿಗಳು ಬಹುಗ್ರಾಮ ಕುಡಿಯುವ ನೀರಿನ ಯೋಜನೆ ವ್ಯಾಪ್ತಿಯಲ್ಲಿವೆ. 35 ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಕಾರ್ಯನಿರ್ವಹಿಸುತ್ತಿದ್ದು, 5 ಯೋಜನೆಗಳು ಪ್ರಗತಿಯಲ್ಲಿವೆ. ತುಂಗಭದ್ರಾ ನದಿ ಹಾಗೂ ಶಾಂತಿಸಾಗರ ಕೆರೆಯ ನೀರಿನ ಮೇಲಿನ ಅವಲಂಬನೆ ಹೆಚ್ಚಿದೆ. ಉಳಿದ ಜನವಸತಿ ಪ್ರದೇಶಗಳ ಕುಡಿಯುವ ನೀರಿಗೆ ಕೊಳವೆಬಾವಿ ಆಶ್ರಯಿಸಲಾಗಿದೆ. ಈ ಎಲ್ಲ ಜಲಮೂಲಗಳ ನೀರಿನ ಗುಣಮಟ್ಟವನ್ನು ಪರೀಕ್ಷಿಸಲಾಗುತ್ತಿದೆ.</p>.<p>‘ಜಲಜೀವನ್ ಮಿಷನ್ ಯೋಜನೆಯಡಿ ನಿರ್ವಹಣೆ ಹಾಗೂ ನೀರಿನ ಗುಣಮಟ್ಟ ಪರೀಕ್ಷೆಗೆ ಅನುದಾನವಿದೆ. ರಾಜ್ಯ ಸರ್ಕಾರದ ಪ್ರತ್ಯೇಕ ಅನುದಾನ ಕೂಡ ಲಭ್ಯವಿದೆ. ನೀರಿನ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ನಿರಂತರ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ತಿಳಿಸಿದರು.</p>.<p><strong>ಮೂರು ಹಂತದ ಪರೀಕ್ಷೆ:</strong> ಕುಡಿಯುವ ನೀರಿನ ಗುಣಮಟ್ಟವನ್ನು ಮೂರು ಹಂತಗಳಲ್ಲಿ ಪರೀಕ್ಷಿಸಲಾಗುತ್ತಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಫೀಲ್ಡ್ ಟೆಸ್ಟಿಂಗ್ ಕಿಟ್ಗಳ (ಎಫ್ಟಿಕೆ) ಮೂಲಕ ನೀರಗಂಟಿಗಳು ಪರೀಕ್ಷೆ ನಡೆಸುತ್ತಾರೆ. ಚನ್ನಗಿರಿ ಹಾಗೂ ದಾವಣಗೆರೆಯಲ್ಲಿ ರಾಸಾಯನಿಕ ಪ್ರಯೋಗಾಲಯ (ಕೆಮಿಕಲ್ ಲ್ಯಾಬ್) ಹಾಗೂ ದಾವಣಗೆರೆಯಲ್ಲಿರುವ ಜೈವಿಕ ಪ್ರಯೋಗಾಲಯದಲ್ಲಿ (ಬಯಾಲಾಜಿಕಲ್ ಲ್ಯಾಬ್) ನೀರಿನ ಗುಣಮಟ್ಟವನ್ನು ಪರೀಕ್ಷಿಸಲಾಗುತ್ತಿದೆ.</p>.<p>‘ಎಫ್ಟಿಕೆ ಮೂಲಕ ನೀರಿನ ಗುಣಮಟ್ಟ ಪರೀಕ್ಷಿಸಲು ನೀರಗಂಟಿಗಳಿಗೆ ತರಬೇತಿ ನೀಡಲಾಗಿದೆ. 2025–26ನೇ ಸಾಲಿನಲ್ಲಿ 26,000 ನೀರಿನ ಮಾದರಿಗಳನ್ನು ಪರೀಕ್ಷಿಸಿ ನಿಗದಿತ ಗುರಿಗಿಂತ ಶೇ 107ರಷ್ಟು ಪ್ರಗತಿ ಸಾಧಿಸಲಾಗಿದೆ. ರಾಸಾಯನಿಕ ಪ್ರಯೋಗಾಲಯದಲ್ಲಿ 18 ಅಂಶಗಳನ್ನು ಕೇಂದ್ರೀಕರಿಸಿ ಪರೀಕ್ಷಿಸಲಾಗುತ್ತದೆ. ಖಾಸಗಿ ಕೊಳವೆಬಾವಿಗಳ ನೀರು ಕೂಡ ಪರೀಕ್ಷಿಸಿ ಜನವಸತಿ ಪ್ರದೇಶಕ್ಕೆ ಪೂರೈಸಲಾಗುತ್ತಿದೆ’ ಎಂದು ಗಿತ್ತೆ ಮಾಧವ ವಿಠ್ಠಲರಾವ್ ವಿವರಿಸಿದರು.</p>.<p>ಫ್ಲೋರೈಡ್ ಅಂಶ ಇರುವ ನೀರು ಬಳಕೆ ಮಾಡಿದ ಗ್ರಾಮಗಳ ಜನರ ಆರೋಗ್ಯ ತಪಾಸಣೆಯನ್ನು ಜಿಲ್ಲಾ ಪಂಚಾಯಿತಿ ವತಿಯಿಂದ ನಡೆಸಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯರ ತಂಡ ಗ್ರಾಮೀಣ ಜನರ ದಂತ ಹಾಗೂ ಮೂಳೆಯನ್ನು ಪರೀಕ್ಷಿಸಿ ಸಲಹೆ, ಔಷಧಗಳನ್ನು ನೀಡಿದೆ.</p>.<p><strong>5 ಗ್ರಾಮಗಳಿಗೆ ಟ್ಯಾಂಕರ್ ನೀರು</strong></p><p>ಜಿಲ್ಲೆಯ 25 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಈ ಪೈಕಿ 5 ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.</p><p>ದಾವಣಗೆರೆ ತಾಲ್ಲೂಕಿನ ಗುಡಾಳು, ವಿನಾಯಕ ಕ್ಯಾಂಪ್, ಚಿಕ್ಕವ್ವನಾಗತಿಹಳ್ಳಿ, ಚನ್ನಗಿರಿ ತಾಲ್ಲೂಕಿನ ಕಂಚುಗಾರತಿಕಟ್ಟೆ ಹಾಗೂ ಜಗಳೂರು ತಾಲ್ಲೂಕಿನ ಹುಚ್ಚಂಗಿಪುರಕ್ಕೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಉಳಿದ 20 ಗ್ರಾಮಗಳಲ್ಲಿ ಖಾಸಗಿ ಕೊಳವೆಬಾವಿಗಳ ನೆರವು ಪಡೆಯಲಾಗಿದೆ.</p>.<div><blockquote>ಕುಡಿಯುವ ನೀರಿನ ಗುಣಮಟ್ಟಕ್ಕೆ ಹೆಚ್ಚು ಗಮನ ಹರಿಸಲಾಗಿದೆ. ಯಾವುದೇ ಕಾರಣಕ್ಕೂ ಕಲುಷಿತ ನೀರು ಪೂರೈಕೆ ಆಗದಂತೆ ಎಚ್ಚರ ವಹಿಸಲಾಗಿದೆ <br></blockquote><span class="attribution">ಗಿತ್ತೆ ಮಾಧವ ವಿಠ್ಠಲರಾವ್, ಸಿಇಒ, ಜಿಲ್ಲಾ ಪಂಚಾಯಿತಿ</span></div>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-43-1714315873</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>