<p><strong>ದಾವಣಗೆರೆ</strong>: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಣೆ ಮಾಡಬೇಕು ಎಂದು ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಮುಖಂಡ ರಾಜು ವೀರಣ್ಣ ಮನವಿ ಮಾಡಿದರು.</p>.<p>‘ಗೋಮಾತೆ ದೇವರ ಸಮಾನ. ಭಾರತೀಯ ಸಂಸ್ಕೃತಿ, ಸಂಪ್ರದಾಯ, ಸಂಸ್ಕಾರಗಳು ಗೋವಿನೊಂದಿಗೆ ಬೆರೆತು ಹೋಗಿವೆ. ಗ್ರಾಮೀಣ ಪರಿಸರ, ಕೃಷಿಯಲ್ಲಿ ಗೋವು ಅಗತ್ಯ ಪ್ರಾಣಿಯಾಗಿದೆ. ಇದನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಣೆ ಮಾಡಿದರೆ ಅನುಕೂಲವಾಗುತ್ತದೆ’ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಅಭಿಪ್ರಾಯಪಟ್ಟರು.</p>.<p>‘ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಣೆ ಮಾಡುವಂತೆ ಒತ್ತಾಯಿಸಿ ಏ.27ರಂದು ಬೆಳಿಗ್ಗೆ 10ಕ್ಕೆ ಉಪವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ರಾಷ್ಟ್ರಪತಿ, ಪ್ರಧಾನಿ ಹಾಗೂ ಎಲ್ಲ ರಾಜ್ಯಗಳ ಮುಖ್ಯಮಂತ್ರಿ ಕಚೇರಿಗೆ ಮನವಿ ಪತ್ರ ರವಾನಿಸಲಾಗುತ್ತದೆ’ ಎಂದು ಮಾಹಿತಿ ನೀಡಿದರು.</p>.<p>ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಮುಖಂಡರಾದ ಆಲೂರು ನಿಂಗರಾಜ್, ಪರಶುರಾಮ ನಡುಮನಿ, ಮಲ್ಲೇಶ್, ಪ್ರವೀಣ್ ಜಾಧವ್, ಅಜಯ್ಕುಮಾರ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-43-74696939</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಣೆ ಮಾಡಬೇಕು ಎಂದು ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಮುಖಂಡ ರಾಜು ವೀರಣ್ಣ ಮನವಿ ಮಾಡಿದರು.</p>.<p>‘ಗೋಮಾತೆ ದೇವರ ಸಮಾನ. ಭಾರತೀಯ ಸಂಸ್ಕೃತಿ, ಸಂಪ್ರದಾಯ, ಸಂಸ್ಕಾರಗಳು ಗೋವಿನೊಂದಿಗೆ ಬೆರೆತು ಹೋಗಿವೆ. ಗ್ರಾಮೀಣ ಪರಿಸರ, ಕೃಷಿಯಲ್ಲಿ ಗೋವು ಅಗತ್ಯ ಪ್ರಾಣಿಯಾಗಿದೆ. ಇದನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಣೆ ಮಾಡಿದರೆ ಅನುಕೂಲವಾಗುತ್ತದೆ’ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಅಭಿಪ್ರಾಯಪಟ್ಟರು.</p>.<p>‘ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಣೆ ಮಾಡುವಂತೆ ಒತ್ತಾಯಿಸಿ ಏ.27ರಂದು ಬೆಳಿಗ್ಗೆ 10ಕ್ಕೆ ಉಪವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ರಾಷ್ಟ್ರಪತಿ, ಪ್ರಧಾನಿ ಹಾಗೂ ಎಲ್ಲ ರಾಜ್ಯಗಳ ಮುಖ್ಯಮಂತ್ರಿ ಕಚೇರಿಗೆ ಮನವಿ ಪತ್ರ ರವಾನಿಸಲಾಗುತ್ತದೆ’ ಎಂದು ಮಾಹಿತಿ ನೀಡಿದರು.</p>.<p>ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಮುಖಂಡರಾದ ಆಲೂರು ನಿಂಗರಾಜ್, ಪರಶುರಾಮ ನಡುಮನಿ, ಮಲ್ಲೇಶ್, ಪ್ರವೀಣ್ ಜಾಧವ್, ಅಜಯ್ಕುಮಾರ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-43-74696939</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>