<p><strong>ದಾವಣಗೆರೆ:</strong> ‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗೋವನ್ನು ರಾಷ್ಟ್ರೀಯ ಪಶು ಎಂದು ಘೋಷಿಸಬೇಕು’ ಎಂದು ವಿಶ್ವ ಮುಸ್ಲಿಂ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಸುಭಾನ್ ಖಾನ್ ಒತ್ತಾಯಿಸಿದ್ದಾರೆ.</p>.<p>‘ಮುಸ್ಲಿಮರು ಬಕ್ರೀದ್ ಅಥವಾ ಬೇರೆ ದಿನಗಳಲ್ಲಿ ಗೋಹತ್ಯೆ ಮಾಡುವುದನ್ನು ನಿಲ್ಲಿಸಬೇಕು. ಹಿಂದೂಗಳ ವಿರೋಧ ಕಟ್ಟಿಕೊಂಡು ಗೋಹತ್ಯೆ ಮಾಡುವುದು ಬೇಡ’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು.</p>.<p>‘ಗೋ ರಕ್ಷಣೆ ಹೆಸರಿನಲ್ಲಿ ಹಿಂಸಾಚಾರ, ಅಪರಾಧ ಪ್ರಕರಣಗಳು ನಡೆಯುತ್ತಿರುವುದು ಕಳವಳಕಾರಿಯಾಗಿದೆ. ಗೋ ಹತ್ಯೆ ಮಾಡುವವರಿಗೆ ಕನಿಷ್ಠ 5ರಿಂದ 7 ವರ್ಷಗಳ ಕಠಿಣ ಶಿಕ್ಷೆ ವಿಧಿಸುವ ಕಾನೂನು ತರಲಿ’ ಎಂದು ಹೇಳಿದರು.</p>.<p>‘ಆಜಾದ್ ನಗರ, ಭಾಷಾ ನಗರ ಭಾಗದಲ್ಲಿರುವ ಹೆಚ್ಚಿನ ಕಸಾಯಿಖಾನೆಗಳಿಗೆ ಪರವಾನಗಿ ಇಲ್ಲ. ಇಲ್ಲಿ ನಿತ್ಯವೂ ಸಾಕಷ್ಟು ಗೋವುಗಳ ವಧೆಯಾಗುತ್ತಿದೆ. ಈ ಬಗ್ಗೆ ಮುಸ್ಲಿಮರಲ್ಲಿ ಜಾಗೃತಿ ಮೂಡಿಸಲು ಇಲ್ಲಿಂದಲೇ ಅಭಿಯಾನ ಆರಂಭಿಸಿದ್ದೇವೆ. ಅಕ್ರಮ ಕಸಾಯಿಖಾನೆ, ಮಾಂಸದ ಅಂಗಡಿಗಳನ್ನು ಬಂದ್ ಮಾಡಿಸಲು ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಪಾಲಿಕೆ ಮುಂದಾಗಲಿ’ ಎಂದು ಆಗ್ರಹಿಸಿದರು.</p>.<p>‘ಗೋಹತ್ಯೆ ತಡೆಯುವ ಹೆಸರಿನಲ್ಲಿ ಕೆಲವರು ಹಲ್ಲೆ ಮಾಡಿ, ಹಣ ವಸೂಲಿ ಮಾಡುವುದು, ಕಾನೂನು ಕೈಗೆತ್ತಿಕೊಳ್ಳುವುದು ಸರಿಯಲ್ಲ. ಹಸುಗಳನ್ನು ಖರೀದಿಸದಂತೆ ಹಾಗೂ ಗೋಮಾಂಸ ತಿನ್ನದಂತೆ ಮೌಲ್ವಿಗಳು ಫತ್ವಾ ಹೊರಡಿಸಿದ್ದು, ಅದನ್ನು ಪಾಲಿಸುತ್ತೇವೆ’ ಎಂದರು.</p>.<p>ಪರಿಷತ್ ಮುಖಂಡರಾದ ಅಲ್ಲಾಬಕ್ಷಿ, ನೂರುಲ್ಲಾ, ಶೇಕ್ ಅಹಮ್ಮದ್, ಫರ್ವೇಜ್ ಹಾಗೂ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-43-1728938130</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗೋವನ್ನು ರಾಷ್ಟ್ರೀಯ ಪಶು ಎಂದು ಘೋಷಿಸಬೇಕು’ ಎಂದು ವಿಶ್ವ ಮುಸ್ಲಿಂ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಸುಭಾನ್ ಖಾನ್ ಒತ್ತಾಯಿಸಿದ್ದಾರೆ.</p>.<p>‘ಮುಸ್ಲಿಮರು ಬಕ್ರೀದ್ ಅಥವಾ ಬೇರೆ ದಿನಗಳಲ್ಲಿ ಗೋಹತ್ಯೆ ಮಾಡುವುದನ್ನು ನಿಲ್ಲಿಸಬೇಕು. ಹಿಂದೂಗಳ ವಿರೋಧ ಕಟ್ಟಿಕೊಂಡು ಗೋಹತ್ಯೆ ಮಾಡುವುದು ಬೇಡ’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು.</p>.<p>‘ಗೋ ರಕ್ಷಣೆ ಹೆಸರಿನಲ್ಲಿ ಹಿಂಸಾಚಾರ, ಅಪರಾಧ ಪ್ರಕರಣಗಳು ನಡೆಯುತ್ತಿರುವುದು ಕಳವಳಕಾರಿಯಾಗಿದೆ. ಗೋ ಹತ್ಯೆ ಮಾಡುವವರಿಗೆ ಕನಿಷ್ಠ 5ರಿಂದ 7 ವರ್ಷಗಳ ಕಠಿಣ ಶಿಕ್ಷೆ ವಿಧಿಸುವ ಕಾನೂನು ತರಲಿ’ ಎಂದು ಹೇಳಿದರು.</p>.<p>‘ಆಜಾದ್ ನಗರ, ಭಾಷಾ ನಗರ ಭಾಗದಲ್ಲಿರುವ ಹೆಚ್ಚಿನ ಕಸಾಯಿಖಾನೆಗಳಿಗೆ ಪರವಾನಗಿ ಇಲ್ಲ. ಇಲ್ಲಿ ನಿತ್ಯವೂ ಸಾಕಷ್ಟು ಗೋವುಗಳ ವಧೆಯಾಗುತ್ತಿದೆ. ಈ ಬಗ್ಗೆ ಮುಸ್ಲಿಮರಲ್ಲಿ ಜಾಗೃತಿ ಮೂಡಿಸಲು ಇಲ್ಲಿಂದಲೇ ಅಭಿಯಾನ ಆರಂಭಿಸಿದ್ದೇವೆ. ಅಕ್ರಮ ಕಸಾಯಿಖಾನೆ, ಮಾಂಸದ ಅಂಗಡಿಗಳನ್ನು ಬಂದ್ ಮಾಡಿಸಲು ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಪಾಲಿಕೆ ಮುಂದಾಗಲಿ’ ಎಂದು ಆಗ್ರಹಿಸಿದರು.</p>.<p>‘ಗೋಹತ್ಯೆ ತಡೆಯುವ ಹೆಸರಿನಲ್ಲಿ ಕೆಲವರು ಹಲ್ಲೆ ಮಾಡಿ, ಹಣ ವಸೂಲಿ ಮಾಡುವುದು, ಕಾನೂನು ಕೈಗೆತ್ತಿಕೊಳ್ಳುವುದು ಸರಿಯಲ್ಲ. ಹಸುಗಳನ್ನು ಖರೀದಿಸದಂತೆ ಹಾಗೂ ಗೋಮಾಂಸ ತಿನ್ನದಂತೆ ಮೌಲ್ವಿಗಳು ಫತ್ವಾ ಹೊರಡಿಸಿದ್ದು, ಅದನ್ನು ಪಾಲಿಸುತ್ತೇವೆ’ ಎಂದರು.</p>.<p>ಪರಿಷತ್ ಮುಖಂಡರಾದ ಅಲ್ಲಾಬಕ್ಷಿ, ನೂರುಲ್ಲಾ, ಶೇಕ್ ಅಹಮ್ಮದ್, ಫರ್ವೇಜ್ ಹಾಗೂ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-43-1728938130</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>