<p><strong>ಸಾಸ್ವೆಹಳ್ಳಿ</strong>: ‘ಬೈರನಹಳ್ಳಿ ಸೇರಿ ಸಾಸ್ವೆಹಳ್ಳಿಯ ಸುತ್ತಮುತ್ತಲ ಗ್ರಾಮಗಳಲ್ಲಿ ಬಿತ್ತನೆ ಕಾರ್ಯ ಚುರುಕುಗೊಂಡಿದೆ. ಎರಡು ಮೂರು ದಿನಗಳ ಕಾಲ ಮಳೆ ಬಿಡುವು ನೀಡಿದ್ದು, ರೈತರು ಬಿತ್ತನೆಯಲ್ಲಿ ತೊಡಗಿದ್ದಾರೆ’ ಎಂದು ಕೃಷಿ ಅಧಿಕಾರಿ ಶಶಿಧರ್ ಸಿ.ಯು. ತಿಳಿಸಿದ್ದಾರೆ.</p>.<p>ಸಾಸ್ವೆಹಳ್ಳಿ ಸಮೀಪದ ಬೈರನಹಳ್ಳಿ ಗ್ರಾಮದಲ್ಲಿ ರೈತರಿಗೆ ಬೀಜೋಪಚಾರದೊಂದಿಗೆ ಬಿತ್ತನೆ ಬಗ್ಗೆ ಅವರು ಮಾಹಿತಿ ನೀಡಿದರು.</p>.<p>‘ಹೋಬಳಿ ವ್ಯಾಪ್ತಿಯಲ್ಲಿ ಈಗಾಗಲೇ ಶೇ 60ರಷ್ಟು ಬಿತ್ತನೆ ಕಾರ್ಯ ಪೂರ್ಣಗೊಂಡಿದೆ. ಈ ರೈತರು ಅಕ್ಕಡಿ ಬೆಳೆಯಾಗಿ ತೊಗರಿ ಬಿತ್ತುವುದು ಸೂಕ್ತ. ರೈತರು ಈ ಪದ್ಧತಿ ಅಳವಡಿಸಿಕೊಂಡರೆ ಉತ್ತಮ ಇಳುವರಿ ಪಡೆಯಬಹುದು’ ಎಂದರು.</p>.<p>‘ಪೊಟ್ಯಾಷ್ ಯುಕ್ತ ಸಂಯುಕ್ತ ಗೊಬ್ಬರ ಬಳಕೆಯಿಂದ ಬೆಳೆಗಳ ಸಮತೋಲಿತ ಬೆಳವಣಿಗೆ ಸಾಧ್ಯವಾಗುತ್ತದೆ. ಬೆಳೆಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಹಾಗೂ ರೈತರು ಹೆಚ್ಚಿನ ಆದಾಯ ಗಳಿಸಬಹುದು’ ಎಂದು ರೈತರಿಗೆ ಸಲಹೆ ನೀಡಿದರು.</p>.<p>‘ಉಳಿದ ಶೇ 40ರಷ್ಟು ಭಾಗದಲ್ಲಿ ಬಿತ್ತನೆ ವಿಳಂಬವಾಗಿದ್ದು, ಇದಕ್ಕೆ ಬಿಡುವಿಲ್ಲದೆ ಸುರಿಯುತ್ತಿರುವ ಮಳೆಯೇ ಕಾರಣವಾಗಿದೆ. ಮಣ್ಣಿನಲ್ಲಿ ತೇವಾಂಶ ಹೆಚ್ಚಾಗಿರುವುದರಿಂದ ರೈತರು ಬಿತ್ತನೆಗೆ ಹಿಂದೇಟು ಹಾಕುತ್ತಿದ್ದಾರೆ’ ಎಂದರು.</p>.<p>ಕೃಷಿ ಅಧಿಕಾರಿಗಳು ಬೀಜೋಪಚಾರದ ಮಹತ್ವವನ್ನು ರೈತರಿಗೆ ಮನವರಿಕೆ ಮಾಡಿದರು. ಬಿಜೋಪಾಚಾರದಿಂದ ಕೀಟಬಾಧೆಯನ್ನು ತಡೆಯಬಹುದು’ ಎಂದರು.</p>.<p>ಕೃಷಿ ತಾಂತ್ರಿಕ ಉತ್ತೇಜಕ ಕುಮಾರ್ ನಾಯ್ಕ, ರೈತರಾದ ಸೋಮ್ಲಬಾಯಿ, ವಸಂತ ನಾಯ್ಕ, ಶೇಖರ್ ನಾಯ್ಕ ಹಾಗೂ ರೈತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಸ್ವೆಹಳ್ಳಿ</strong>: ‘ಬೈರನಹಳ್ಳಿ ಸೇರಿ ಸಾಸ್ವೆಹಳ್ಳಿಯ ಸುತ್ತಮುತ್ತಲ ಗ್ರಾಮಗಳಲ್ಲಿ ಬಿತ್ತನೆ ಕಾರ್ಯ ಚುರುಕುಗೊಂಡಿದೆ. ಎರಡು ಮೂರು ದಿನಗಳ ಕಾಲ ಮಳೆ ಬಿಡುವು ನೀಡಿದ್ದು, ರೈತರು ಬಿತ್ತನೆಯಲ್ಲಿ ತೊಡಗಿದ್ದಾರೆ’ ಎಂದು ಕೃಷಿ ಅಧಿಕಾರಿ ಶಶಿಧರ್ ಸಿ.ಯು. ತಿಳಿಸಿದ್ದಾರೆ.</p>.<p>ಸಾಸ್ವೆಹಳ್ಳಿ ಸಮೀಪದ ಬೈರನಹಳ್ಳಿ ಗ್ರಾಮದಲ್ಲಿ ರೈತರಿಗೆ ಬೀಜೋಪಚಾರದೊಂದಿಗೆ ಬಿತ್ತನೆ ಬಗ್ಗೆ ಅವರು ಮಾಹಿತಿ ನೀಡಿದರು.</p>.<p>‘ಹೋಬಳಿ ವ್ಯಾಪ್ತಿಯಲ್ಲಿ ಈಗಾಗಲೇ ಶೇ 60ರಷ್ಟು ಬಿತ್ತನೆ ಕಾರ್ಯ ಪೂರ್ಣಗೊಂಡಿದೆ. ಈ ರೈತರು ಅಕ್ಕಡಿ ಬೆಳೆಯಾಗಿ ತೊಗರಿ ಬಿತ್ತುವುದು ಸೂಕ್ತ. ರೈತರು ಈ ಪದ್ಧತಿ ಅಳವಡಿಸಿಕೊಂಡರೆ ಉತ್ತಮ ಇಳುವರಿ ಪಡೆಯಬಹುದು’ ಎಂದರು.</p>.<p>‘ಪೊಟ್ಯಾಷ್ ಯುಕ್ತ ಸಂಯುಕ್ತ ಗೊಬ್ಬರ ಬಳಕೆಯಿಂದ ಬೆಳೆಗಳ ಸಮತೋಲಿತ ಬೆಳವಣಿಗೆ ಸಾಧ್ಯವಾಗುತ್ತದೆ. ಬೆಳೆಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಹಾಗೂ ರೈತರು ಹೆಚ್ಚಿನ ಆದಾಯ ಗಳಿಸಬಹುದು’ ಎಂದು ರೈತರಿಗೆ ಸಲಹೆ ನೀಡಿದರು.</p>.<p>‘ಉಳಿದ ಶೇ 40ರಷ್ಟು ಭಾಗದಲ್ಲಿ ಬಿತ್ತನೆ ವಿಳಂಬವಾಗಿದ್ದು, ಇದಕ್ಕೆ ಬಿಡುವಿಲ್ಲದೆ ಸುರಿಯುತ್ತಿರುವ ಮಳೆಯೇ ಕಾರಣವಾಗಿದೆ. ಮಣ್ಣಿನಲ್ಲಿ ತೇವಾಂಶ ಹೆಚ್ಚಾಗಿರುವುದರಿಂದ ರೈತರು ಬಿತ್ತನೆಗೆ ಹಿಂದೇಟು ಹಾಕುತ್ತಿದ್ದಾರೆ’ ಎಂದರು.</p>.<p>ಕೃಷಿ ಅಧಿಕಾರಿಗಳು ಬೀಜೋಪಚಾರದ ಮಹತ್ವವನ್ನು ರೈತರಿಗೆ ಮನವರಿಕೆ ಮಾಡಿದರು. ಬಿಜೋಪಾಚಾರದಿಂದ ಕೀಟಬಾಧೆಯನ್ನು ತಡೆಯಬಹುದು’ ಎಂದರು.</p>.<p>ಕೃಷಿ ತಾಂತ್ರಿಕ ಉತ್ತೇಜಕ ಕುಮಾರ್ ನಾಯ್ಕ, ರೈತರಾದ ಸೋಮ್ಲಬಾಯಿ, ವಸಂತ ನಾಯ್ಕ, ಶೇಖರ್ ನಾಯ್ಕ ಹಾಗೂ ರೈತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>