<p><strong>ನ್ಯಾಮತಿ</strong>: ದ ರೂಲರ್ಸ್ ಚಲನಚಿತ್ರದ ಪ್ರಮೋಷನ್ ಕಾರ್ಯಕ್ರಮವನ್ನು ಆಗಸ್ಟ್ 25ರಂದು ಬೆಳಿಗ್ಗೆ 10 ಗಂಟೆಗೆ ದಾವಣಗೆರೆ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಂಬೇಡ್ಕರ್ ಸೇವಾ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಎ.ಕೆ.ರಂಗನಾಥ ಬೆಳಗುತ್ತಿ ತಿಳಿಸಿದರು.</p>.<p>ಪಟ್ಟಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಅಧ್ಯಕ್ಷ ಕೆ.ಎಂ.ಸಂದೇಶ ಅವರು ನಾಯಕ ನಟರಾಗಿ ನಟಿಸಿರುವ, ಶೋಷಿತರು, ಹಿಂದುಳಿದ ವರ್ಗದವರ ಪರವಾಗಿ ಮಾಡಿರುವ ಚಲನಚಿತ್ರ ಇದಾಗಿದ್ದು, ನೈಜ ಘಟನೆಗಳನ್ನು ಆಧರಿಸಿದೆ ಎಂದರು.</p>.<p>ಚಿತ್ರ ಇದೇ 30ರಂದು ಬಿಡುಗಡೆಯಾಗಲಿದೆ. ಈ ಸಂಬಂಧ ದಾವಣಗೆರೆಯಲ್ಲಿ ಆಯೋಜಿಸಿರುವ ಪ್ರಚಾರ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅಭಿಮಾನಿಗಳು, ಸಂದೇಶ ಅವರ ಅಭಿಮಾನಿಗಳು, ದಲಿತಪರ, ಪ್ರಗತಿಪರ ಸಂಘಟನೆಯವರು, ರೈತ, ಕೂಲಿ ಕಾರ್ಮಿಕರ ಸಂಘಟನೆಯ ಪದಾಧಿಕಾರಿಗಳು ಹಾಗೂ ನ್ಯಾಮತಿ-ಹೊನ್ನಾಳಿ ತಾಲ್ಲೂಕಿನ ದಲಿತ ಸಂಘಟನೆಗಳ ಸದಸ್ಯರು ಭಾಗವಹಿಸುವಂತೆ ಮನವಿ ಮಾಡಿದರು.</p>.<p>ಜಿಲ್ಲಾ ಸಂಘಟನಾ ಸಂಚಾಲಕ ಚೀಲೂರು ಎ.ಕೆ.ಕುಮಾರ, ನ್ಯಾಮತಿ ತಾಲ್ಲೂಕು ಘಟಕದ ಅಧ್ಯಕ್ಷ ಜೀನಹಳ್ಳಿ ಟಿ.ಅಶೋಕ, ತಾಲ್ಲೂಕು ಸಂಘಟನಾ ಸಂಚಾಲಕ ಚೀಲೂರು ಬಿ.ಸೋಮಶೇಖರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನ್ಯಾಮತಿ</strong>: ದ ರೂಲರ್ಸ್ ಚಲನಚಿತ್ರದ ಪ್ರಮೋಷನ್ ಕಾರ್ಯಕ್ರಮವನ್ನು ಆಗಸ್ಟ್ 25ರಂದು ಬೆಳಿಗ್ಗೆ 10 ಗಂಟೆಗೆ ದಾವಣಗೆರೆ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಂಬೇಡ್ಕರ್ ಸೇವಾ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಎ.ಕೆ.ರಂಗನಾಥ ಬೆಳಗುತ್ತಿ ತಿಳಿಸಿದರು.</p>.<p>ಪಟ್ಟಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಅಧ್ಯಕ್ಷ ಕೆ.ಎಂ.ಸಂದೇಶ ಅವರು ನಾಯಕ ನಟರಾಗಿ ನಟಿಸಿರುವ, ಶೋಷಿತರು, ಹಿಂದುಳಿದ ವರ್ಗದವರ ಪರವಾಗಿ ಮಾಡಿರುವ ಚಲನಚಿತ್ರ ಇದಾಗಿದ್ದು, ನೈಜ ಘಟನೆಗಳನ್ನು ಆಧರಿಸಿದೆ ಎಂದರು.</p>.<p>ಚಿತ್ರ ಇದೇ 30ರಂದು ಬಿಡುಗಡೆಯಾಗಲಿದೆ. ಈ ಸಂಬಂಧ ದಾವಣಗೆರೆಯಲ್ಲಿ ಆಯೋಜಿಸಿರುವ ಪ್ರಚಾರ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅಭಿಮಾನಿಗಳು, ಸಂದೇಶ ಅವರ ಅಭಿಮಾನಿಗಳು, ದಲಿತಪರ, ಪ್ರಗತಿಪರ ಸಂಘಟನೆಯವರು, ರೈತ, ಕೂಲಿ ಕಾರ್ಮಿಕರ ಸಂಘಟನೆಯ ಪದಾಧಿಕಾರಿಗಳು ಹಾಗೂ ನ್ಯಾಮತಿ-ಹೊನ್ನಾಳಿ ತಾಲ್ಲೂಕಿನ ದಲಿತ ಸಂಘಟನೆಗಳ ಸದಸ್ಯರು ಭಾಗವಹಿಸುವಂತೆ ಮನವಿ ಮಾಡಿದರು.</p>.<p>ಜಿಲ್ಲಾ ಸಂಘಟನಾ ಸಂಚಾಲಕ ಚೀಲೂರು ಎ.ಕೆ.ಕುಮಾರ, ನ್ಯಾಮತಿ ತಾಲ್ಲೂಕು ಘಟಕದ ಅಧ್ಯಕ್ಷ ಜೀನಹಳ್ಳಿ ಟಿ.ಅಶೋಕ, ತಾಲ್ಲೂಕು ಸಂಘಟನಾ ಸಂಚಾಲಕ ಚೀಲೂರು ಬಿ.ಸೋಮಶೇಖರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>