<p><strong>ಮಲೇಬೆನ್ನೂರು: </strong>ಹೋಬಳಿ ವ್ಯಾಪ್ತಿಯ ಮಳೆಹಾನಿಗೊಳಗಾದ ಪ್ರಾಥಮಿಕ ವರದಿ ತುರ್ತಾಗಿ ತಯಾರಿಸಿ ಈ ದಿನವೇ ಕಳುಹಿಸುವಂತೆ ತಹಶೀಲ್ದಾರ್ ಡಾ. ಅಶ್ವತ್ಥ ಎಂ.ಬಿ. ಅವರಿಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಗುರುವಾರ ತಾಕೀತು ಮಾಡಿದರು.</p>.<p>ಕುಂಬಳೂರು, ಕೊಕ್ಕನೂರು, ಭಾಸ್ಕರ್ ರಾವ್ ಕ್ಯಾಂಪಿನ ಪ್ರದೇಶಗಳಿಗೆ ಭೇಟಿ ನೀಡಿ ಬೆಳೆಹಾನಿ ಪರಿಶೀಲನೆ ನಡೆಸಿದರು. 2-3 ದಿನಗಳ ಕೃಷಿ, ತೋಟಗಾರಿಕೆ ಅಧಿಕಾರಿಗ<br />ಳೊಂದಿಗೆ ಬೆಳೆ ಹಾನಿ ಸಂಪೂರ್ಣ ವರದಿ ನೀಡುವಂತೆ ಸೂಚಿಸಿದರು. ಕಳೆದೆರಡು ದಿನಗಳಿಂದ ಸುರಿದ ಬಿರುಗಾಳಿ ಮಳೆಗೆ ಈಗಾಗಲೇ ಒಂದೂವರೆ ಸಾವಿರ ಎಕರೆಗೂ ಹೆಚ್ಚು ಪ್ರದೇಶದ ಕಟಾವಿಗೆ ಸಿದ್ಧವಾಗುತ್ತಿದ್ದ ಭತ್ತದ ಬೆಳೆ, ಅಡಿಕೆ, ತೆಂಗು, ಬಾಳೆ ಬೆಳೆ ಹಾಳಾಗಿದೆ.</p>.<p>‘ಹವಾಮಾನ ಇಲಾಖೆ ವರದಿಯಂತೆ ಇನ್ನೂ 2-3 ದಿನ ಮಳೆ ಸುರಿಯುವ ಸಾಧ್ಯ ಇದೆ. ಜನತೆ ಜಾಗ್ರತೆಯಿಂದಿರಿ. ಅನಗತ್ಯವಾಗಿ ಮನೆಯಿಂದ ಸುತ್ತಾಡಬೇಡಿ. ತುಂಗಭದ್ರಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು ನದಿಪಾತ್ರದ ಜನತೆ ಜನಜಾನುವಾರು ಬಿಡಬೇಡಿ’ ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.</p>.<p>ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ ರೈತರು ಬೆಳೆ ನಷ್ಟಕ್ಕೆ ಹೆಚ್ಚಿನ ಪರಿಹಾರ ಕೊಡಿಸಲು ಕೋರಿದಾಗ, ‘ಬೆಳೆಹಾನಿ ವರದಿ ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು. ಮಾರ್ಗಸೂಚಿಯಂತೆ ಹಾಗೂ ಬೆಳೆ ವಿಮೆ ಮಾಡಿಸಿದವರಿಗೂ ಕೂಡ ನಿಯಮಗಳಂತೆ ಪರಿಹಾರ ನೀಡಲಾಗುವುದು’ ಎಂದು ಆಶ್ವಾಸನೆ ನೀಡಿದರು.</p>.<p>ಮಲೇಬೆನ್ನೂರು ಸಮೀಪದ ಭಾನುವಳ್ಳಿ ಗ್ರಾಮದ ಹೊರವಲಯದಲ್ಲಿ ನಿರ್ಮಿಸುತ್ತಿರುವ ಸೇತುವೆ ಪಕ್ಕದ ತಾತ್ಕಾಲಿಕ ರಸ್ತೆ ಮಳೆ ನೀರಿನ ರಭಸಕ್ಕೆ ಕೊಚ್ಚಿಹೋಗಿದ್ದು, ಉಕ್ಕಡಗಾತ್ರಿ- ನಂದಿಗುಡಿ ಸಂಪರ್ಕ ಕಡಿತವಾಗಿದೆ. ಈ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಭಾನುವಳ್ಳಿ ಸಂಪರ್ಕಿಸಲು ರಾಮತೀರ್ಥದ ಮೂಲಕ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಪೊಲೀಸ್ ಹಾಗೂ ಲೋಕೋಪಯೋಗಿ ಇಲಾಖೆಗೆ ಸೂಚಿಸಿದರು.</p>.<p>ಉಪತಹಶೀಲ್ದಾರ್ ಆರ್. ರವಿ, ಕಂದಾಯ ನಿರೀಕ್ಷಕ ಆನಂದ್, ಸಮೀರ್ ಅಹ್ಮದ್, ಹೇಮಂತ್, ಗ್ರಾಮ ಲೆಕ್ಕಾಧಿಕಾರಿಗಳಾದ ಸುಭಾನಿ, ಶ್ರೀಧರಮೂರ್ತಿ, ದೇವರಾಜ್, ಕೊಟ್ರೇಶ್, ಬೋರಯ್ಯ, ಗ್ರಾಮ ಸಹಾಯಕರಾದ ಮಾರುತಿ, ದೇವರಾಜ್, ರೈತರು<br />ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಲೇಬೆನ್ನೂರು: </strong>ಹೋಬಳಿ ವ್ಯಾಪ್ತಿಯ ಮಳೆಹಾನಿಗೊಳಗಾದ ಪ್ರಾಥಮಿಕ ವರದಿ ತುರ್ತಾಗಿ ತಯಾರಿಸಿ ಈ ದಿನವೇ ಕಳುಹಿಸುವಂತೆ ತಹಶೀಲ್ದಾರ್ ಡಾ. ಅಶ್ವತ್ಥ ಎಂ.ಬಿ. ಅವರಿಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಗುರುವಾರ ತಾಕೀತು ಮಾಡಿದರು.</p>.<p>ಕುಂಬಳೂರು, ಕೊಕ್ಕನೂರು, ಭಾಸ್ಕರ್ ರಾವ್ ಕ್ಯಾಂಪಿನ ಪ್ರದೇಶಗಳಿಗೆ ಭೇಟಿ ನೀಡಿ ಬೆಳೆಹಾನಿ ಪರಿಶೀಲನೆ ನಡೆಸಿದರು. 2-3 ದಿನಗಳ ಕೃಷಿ, ತೋಟಗಾರಿಕೆ ಅಧಿಕಾರಿಗ<br />ಳೊಂದಿಗೆ ಬೆಳೆ ಹಾನಿ ಸಂಪೂರ್ಣ ವರದಿ ನೀಡುವಂತೆ ಸೂಚಿಸಿದರು. ಕಳೆದೆರಡು ದಿನಗಳಿಂದ ಸುರಿದ ಬಿರುಗಾಳಿ ಮಳೆಗೆ ಈಗಾಗಲೇ ಒಂದೂವರೆ ಸಾವಿರ ಎಕರೆಗೂ ಹೆಚ್ಚು ಪ್ರದೇಶದ ಕಟಾವಿಗೆ ಸಿದ್ಧವಾಗುತ್ತಿದ್ದ ಭತ್ತದ ಬೆಳೆ, ಅಡಿಕೆ, ತೆಂಗು, ಬಾಳೆ ಬೆಳೆ ಹಾಳಾಗಿದೆ.</p>.<p>‘ಹವಾಮಾನ ಇಲಾಖೆ ವರದಿಯಂತೆ ಇನ್ನೂ 2-3 ದಿನ ಮಳೆ ಸುರಿಯುವ ಸಾಧ್ಯ ಇದೆ. ಜನತೆ ಜಾಗ್ರತೆಯಿಂದಿರಿ. ಅನಗತ್ಯವಾಗಿ ಮನೆಯಿಂದ ಸುತ್ತಾಡಬೇಡಿ. ತುಂಗಭದ್ರಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು ನದಿಪಾತ್ರದ ಜನತೆ ಜನಜಾನುವಾರು ಬಿಡಬೇಡಿ’ ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.</p>.<p>ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ ರೈತರು ಬೆಳೆ ನಷ್ಟಕ್ಕೆ ಹೆಚ್ಚಿನ ಪರಿಹಾರ ಕೊಡಿಸಲು ಕೋರಿದಾಗ, ‘ಬೆಳೆಹಾನಿ ವರದಿ ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು. ಮಾರ್ಗಸೂಚಿಯಂತೆ ಹಾಗೂ ಬೆಳೆ ವಿಮೆ ಮಾಡಿಸಿದವರಿಗೂ ಕೂಡ ನಿಯಮಗಳಂತೆ ಪರಿಹಾರ ನೀಡಲಾಗುವುದು’ ಎಂದು ಆಶ್ವಾಸನೆ ನೀಡಿದರು.</p>.<p>ಮಲೇಬೆನ್ನೂರು ಸಮೀಪದ ಭಾನುವಳ್ಳಿ ಗ್ರಾಮದ ಹೊರವಲಯದಲ್ಲಿ ನಿರ್ಮಿಸುತ್ತಿರುವ ಸೇತುವೆ ಪಕ್ಕದ ತಾತ್ಕಾಲಿಕ ರಸ್ತೆ ಮಳೆ ನೀರಿನ ರಭಸಕ್ಕೆ ಕೊಚ್ಚಿಹೋಗಿದ್ದು, ಉಕ್ಕಡಗಾತ್ರಿ- ನಂದಿಗುಡಿ ಸಂಪರ್ಕ ಕಡಿತವಾಗಿದೆ. ಈ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಭಾನುವಳ್ಳಿ ಸಂಪರ್ಕಿಸಲು ರಾಮತೀರ್ಥದ ಮೂಲಕ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಪೊಲೀಸ್ ಹಾಗೂ ಲೋಕೋಪಯೋಗಿ ಇಲಾಖೆಗೆ ಸೂಚಿಸಿದರು.</p>.<p>ಉಪತಹಶೀಲ್ದಾರ್ ಆರ್. ರವಿ, ಕಂದಾಯ ನಿರೀಕ್ಷಕ ಆನಂದ್, ಸಮೀರ್ ಅಹ್ಮದ್, ಹೇಮಂತ್, ಗ್ರಾಮ ಲೆಕ್ಕಾಧಿಕಾರಿಗಳಾದ ಸುಭಾನಿ, ಶ್ರೀಧರಮೂರ್ತಿ, ದೇವರಾಜ್, ಕೊಟ್ರೇಶ್, ಬೋರಯ್ಯ, ಗ್ರಾಮ ಸಹಾಯಕರಾದ ಮಾರುತಿ, ದೇವರಾಜ್, ರೈತರು<br />ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>