<p><strong>ದಾವಣಗೆರೆ</strong>: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚು ಉದ್ಯಾನಗಳನ್ನು ನಿರ್ಮಿಸಬೇಕು ಎಂದು ಶಾಸಕ ಸಮರ್ಥ್ ಶಾಮನೂರು ಸೂಚಿಸಿದರು.</p>.<p>ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಸೋಮವಾರ ಅಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಪ್ರಗತಿಯಲ್ಲಿರುವ ಎಲ್ಲಾ ಕಾಮಗಾರಿಗಳ ವಿವರಗಳನ್ನು ಸಾರ್ವಜನಿಕರಿಗೆ ಅರ್ಥವಾಗುವ ರೀತಿಯಲ್ಲಿ ನೀಡಬೇಕು’ ಎಂದರು.</p>.<p>‘ಜಲಸಿರಿ ಕಾಮಗಾರಿಯಡಿ ಸಂಪರ್ಕ ಅಳವಡಿಸಿದ ಕೆಲವು ಮನೆಗಳಿಗೆ ದುಬಾರಿ ಮೊತ್ತದ ನೀರಿನ ಬಿಲ್ ಬರುತ್ತಿರುವುದರಿಂದ ನಾಗರಿಕರು ತೊಂದರೆ ಅನುಭವಿಸುತ್ತಿದ್ದಾರೆ. ಶಿವನಗರದಲ್ಲಿ ಜಲಸಿರಿ ಸಂಪರ್ಕ ಕಲ್ಪಿಸಲಾಗಿಲ್ಲ. ಜಲಸಿರಿ ಯೋಜನೆಯಲ್ಲಿನ ಸಮಸ್ಯೆ ಮತ್ತು ವಿಳಂಬದ ಕುರಿತು ಸಂಬಂಧಪಟ್ಟ ಅಧಿಕಾರಿಗಳು ವಿವರಣೆ ನೀಡಬೇಕು’ ಎಂದರು.</p>.<p>‘ಕುಡಿಯುವ ನೀರು, ಸ್ವಚ್ಛತೆ ಮತ್ತು ರಸ್ತೆಗಳಂತಹ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸಲು ಆದ್ಯತೆ ನೀಡಬೇಕು. ನಗರದಲ್ಲಿ ಪ್ರಗತಿಯಲ್ಲಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ತ್ವರಿತವಾಗಿ ಮತ್ತು ಗುಣಮಟ್ಟದಿಂದ ಪೂರ್ಣಗೊಳಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>‘ಗಣೇಶ ಚತುರ್ಥಿ ವೇಳೆಗೆ ರಸ್ತೆಗಳಲ್ಲಿರುವ ವಿದ್ಯುತ್ ಕಂಬ, ತಂತಿಗಳನ್ನು ಸರಿಪಡಿಸಬೇಕು. ನಗರದಲ್ಲಿ ಏಕಕಾಲಕ್ಕೆ ವಿದ್ಯುತ್ ಕಡಿತಗೊಳಿಸಬಾರದು. ವಿದ್ಯುತ್ ತಂತಿಗಳನ್ನು ಸರಿಪಡಿಸಿಕೊಳ್ಳುವಾಗ ಮರಗಳನ್ನು ಕಡಿದು ಅಲ್ಲಿಯೇ ಬಿಡಬಾರದು, ವಿಲೇವಾರಿ ಮಾಡಬೇಕು’ ಎಂದು ಬೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಪೌರಕಾರ್ಮಿಕರ ಕೊರತೆ ಇರುವುದರಿಂದ ಕಸವಿಲೇವಾರಿ ಮಾಡಲು ಅನಾನುಕೂಲವಾಗುತ್ತಿದೆ’ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದರು.</p>.<p>ಯೋಜನಾ ನಿರ್ದೇಶಕ ಕುಂದಗೋಳ, ಪಾಲಿಕೆ ಆಯುಕ್ತ ಮಹಾಂತೇಶ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-43-848629956</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚು ಉದ್ಯಾನಗಳನ್ನು ನಿರ್ಮಿಸಬೇಕು ಎಂದು ಶಾಸಕ ಸಮರ್ಥ್ ಶಾಮನೂರು ಸೂಚಿಸಿದರು.</p>.<p>ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಸೋಮವಾರ ಅಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಪ್ರಗತಿಯಲ್ಲಿರುವ ಎಲ್ಲಾ ಕಾಮಗಾರಿಗಳ ವಿವರಗಳನ್ನು ಸಾರ್ವಜನಿಕರಿಗೆ ಅರ್ಥವಾಗುವ ರೀತಿಯಲ್ಲಿ ನೀಡಬೇಕು’ ಎಂದರು.</p>.<p>‘ಜಲಸಿರಿ ಕಾಮಗಾರಿಯಡಿ ಸಂಪರ್ಕ ಅಳವಡಿಸಿದ ಕೆಲವು ಮನೆಗಳಿಗೆ ದುಬಾರಿ ಮೊತ್ತದ ನೀರಿನ ಬಿಲ್ ಬರುತ್ತಿರುವುದರಿಂದ ನಾಗರಿಕರು ತೊಂದರೆ ಅನುಭವಿಸುತ್ತಿದ್ದಾರೆ. ಶಿವನಗರದಲ್ಲಿ ಜಲಸಿರಿ ಸಂಪರ್ಕ ಕಲ್ಪಿಸಲಾಗಿಲ್ಲ. ಜಲಸಿರಿ ಯೋಜನೆಯಲ್ಲಿನ ಸಮಸ್ಯೆ ಮತ್ತು ವಿಳಂಬದ ಕುರಿತು ಸಂಬಂಧಪಟ್ಟ ಅಧಿಕಾರಿಗಳು ವಿವರಣೆ ನೀಡಬೇಕು’ ಎಂದರು.</p>.<p>‘ಕುಡಿಯುವ ನೀರು, ಸ್ವಚ್ಛತೆ ಮತ್ತು ರಸ್ತೆಗಳಂತಹ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸಲು ಆದ್ಯತೆ ನೀಡಬೇಕು. ನಗರದಲ್ಲಿ ಪ್ರಗತಿಯಲ್ಲಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ತ್ವರಿತವಾಗಿ ಮತ್ತು ಗುಣಮಟ್ಟದಿಂದ ಪೂರ್ಣಗೊಳಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>‘ಗಣೇಶ ಚತುರ್ಥಿ ವೇಳೆಗೆ ರಸ್ತೆಗಳಲ್ಲಿರುವ ವಿದ್ಯುತ್ ಕಂಬ, ತಂತಿಗಳನ್ನು ಸರಿಪಡಿಸಬೇಕು. ನಗರದಲ್ಲಿ ಏಕಕಾಲಕ್ಕೆ ವಿದ್ಯುತ್ ಕಡಿತಗೊಳಿಸಬಾರದು. ವಿದ್ಯುತ್ ತಂತಿಗಳನ್ನು ಸರಿಪಡಿಸಿಕೊಳ್ಳುವಾಗ ಮರಗಳನ್ನು ಕಡಿದು ಅಲ್ಲಿಯೇ ಬಿಡಬಾರದು, ವಿಲೇವಾರಿ ಮಾಡಬೇಕು’ ಎಂದು ಬೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಪೌರಕಾರ್ಮಿಕರ ಕೊರತೆ ಇರುವುದರಿಂದ ಕಸವಿಲೇವಾರಿ ಮಾಡಲು ಅನಾನುಕೂಲವಾಗುತ್ತಿದೆ’ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದರು.</p>.<p>ಯೋಜನಾ ನಿರ್ದೇಶಕ ಕುಂದಗೋಳ, ಪಾಲಿಕೆ ಆಯುಕ್ತ ಮಹಾಂತೇಶ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-43-848629956</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>