<p><strong>ದಾವಣಗೆರೆ:</strong> ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಂಡ ಕ್ಷೇತ್ರ ಅತ್ಯುತ್ತಮವಾಗಿದ್ದರೆ ಮಾತ್ರ ಯಶಸ್ಸನ್ನು ನಿರೀಕ್ಷಿಸಬಹುದು ಎಂದು ಸ್ಪರ್ಧಾತ್ಮಕ ಪರೀಕ್ಷೆಗಳ ಮಾರ್ಗದರ್ಶಕ ಆರ್. ಸುರೇಶ್ ಶಾಸ್ತ್ರಿ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಬ್ರಾಹ್ಮಣ ವಿದ್ಯಾರ್ಥಿ ನಿಲಯದಲ್ಲಿ ಬ್ರಾಹ್ಮಣ ಸಮಾಜ ಸೇವಾ ಸಂಘದ ವತಿಯಿಂದ ಈಚೆಗೆ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳ ಅಭ್ಯಾಸ ಕ್ರಮ, ಗಟ್ಟಿ ಮತ್ತು ದೊಡ್ಡ ಕನಸುಗಳು ಅಗತ್ಯ. ಇಂತಹ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಸದಾ ಸಿದ್ಧ’ ಎಂದರು.</p>.<p>ಸಂಘದ ಅಧ್ಯಕ್ಷ ಎಂ.ಸಿ. ಶಶಿಕಾಂತ್ ‘ಸಾಮಾಜಿಕ ಜಾಲತಾಣದಲ್ಲಿ ಸಮಯ ವ್ಯರ್ಥ ಮಾಡದೆ ಓದಿನ ಕಡೆ ಹೆಚ್ಚಿನ ಗಮನ ಹರಿಸಿ’ ಎಂದು ಸಲಹೆ ನೀಡಿದರು.</p>.<p>ಎಸ್ಎಸ್ಎಲ್ಸಿಯಲ್ಲಿ ಶೇ 90 ಮತ್ತು ಪಿಯುಸಿಯಲ್ಲಿ ಶೇ 85 ಹಾಗೂ ಪದವಿ ಪರೀಕ್ಷೆಗಳಲ್ಲಿ ಶೇ 70 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ 42 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.</p>.<p>ಗೌರವ ಕಾರ್ಯದರ್ಶಿ ಎಸ್. ಗೋಪಾಲದಾಸ್, ಮುಖಂಡರಾದ ಎಲ್. ರಾಮಚಂದ್ರರಾವ್, ಭಾಸ್ಕರ್ ಭಟ್, ಎಸ್.ಪಿ. ಸತ್ಯನಾರಾಯಣರಾವ್, ಗಿರೀಶ್ ನಾಡಿಗ್, ಶೇಷಾಚಲ, ಉಮೇಶ್ ಕುಲಕರ್ಣಿ, ಎಚ್.ಎಸ್. ನಾಗರಾಜ್, ಭೀಮಾಶಂಕರ್ ಜೋಶಿ, ವಿಜಯ್ ಕುಮಾರ್ ಜೋಶಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-43-122474814</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಂಡ ಕ್ಷೇತ್ರ ಅತ್ಯುತ್ತಮವಾಗಿದ್ದರೆ ಮಾತ್ರ ಯಶಸ್ಸನ್ನು ನಿರೀಕ್ಷಿಸಬಹುದು ಎಂದು ಸ್ಪರ್ಧಾತ್ಮಕ ಪರೀಕ್ಷೆಗಳ ಮಾರ್ಗದರ್ಶಕ ಆರ್. ಸುರೇಶ್ ಶಾಸ್ತ್ರಿ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಬ್ರಾಹ್ಮಣ ವಿದ್ಯಾರ್ಥಿ ನಿಲಯದಲ್ಲಿ ಬ್ರಾಹ್ಮಣ ಸಮಾಜ ಸೇವಾ ಸಂಘದ ವತಿಯಿಂದ ಈಚೆಗೆ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳ ಅಭ್ಯಾಸ ಕ್ರಮ, ಗಟ್ಟಿ ಮತ್ತು ದೊಡ್ಡ ಕನಸುಗಳು ಅಗತ್ಯ. ಇಂತಹ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಸದಾ ಸಿದ್ಧ’ ಎಂದರು.</p>.<p>ಸಂಘದ ಅಧ್ಯಕ್ಷ ಎಂ.ಸಿ. ಶಶಿಕಾಂತ್ ‘ಸಾಮಾಜಿಕ ಜಾಲತಾಣದಲ್ಲಿ ಸಮಯ ವ್ಯರ್ಥ ಮಾಡದೆ ಓದಿನ ಕಡೆ ಹೆಚ್ಚಿನ ಗಮನ ಹರಿಸಿ’ ಎಂದು ಸಲಹೆ ನೀಡಿದರು.</p>.<p>ಎಸ್ಎಸ್ಎಲ್ಸಿಯಲ್ಲಿ ಶೇ 90 ಮತ್ತು ಪಿಯುಸಿಯಲ್ಲಿ ಶೇ 85 ಹಾಗೂ ಪದವಿ ಪರೀಕ್ಷೆಗಳಲ್ಲಿ ಶೇ 70 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ 42 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.</p>.<p>ಗೌರವ ಕಾರ್ಯದರ್ಶಿ ಎಸ್. ಗೋಪಾಲದಾಸ್, ಮುಖಂಡರಾದ ಎಲ್. ರಾಮಚಂದ್ರರಾವ್, ಭಾಸ್ಕರ್ ಭಟ್, ಎಸ್.ಪಿ. ಸತ್ಯನಾರಾಯಣರಾವ್, ಗಿರೀಶ್ ನಾಡಿಗ್, ಶೇಷಾಚಲ, ಉಮೇಶ್ ಕುಲಕರ್ಣಿ, ಎಚ್.ಎಸ್. ನಾಗರಾಜ್, ಭೀಮಾಶಂಕರ್ ಜೋಶಿ, ವಿಜಯ್ ಕುಮಾರ್ ಜೋಶಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-43-122474814</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>