<p><strong>ದಾವಣಗೆರೆ</strong>: ತಾಲ್ಲೂಕಿನ ಆನಗೋಡು ಗ್ರಾಮದ ಈದ್ಗಾ ಮೈದಾನದಲ್ಲಿ ಈದ್ ಉಲ್ ಫಿತ್ರ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿದ್ದ ಮುಸ್ಲಿಂ ಸಮುದಾಯದವರ ಮೇಲೆ ಹೆಜ್ಜೇನು ದಾಳಿ ನಡೆಸಿವೆ. </p><p>ಘಟನೆಯಲ್ಲಿ ಮಕ್ಕಳೂ ಸೇರಿದಂತೆ 50 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. </p><p>ಗಂಭೀರವಾಗಿ ಗಾಯಗೊಂಡಿದ್ದ 11 ಜನರನ್ನು ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. </p><p>ಮಾಯಕೊಂಡ ಶಾಸಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.</p>.ಬೀದರ್ ಜಿಲ್ಲೆಯಾದ್ಯಂತ ಸಂಭ್ರಮದಿಂದ ಈದ್–ಉಲ್–ಫಿತ್ರ್ ಆಚರಣೆ.ಕಲಬುರಗಿ ಜಿಲ್ಲೆಯಾದ್ಯಂತ ಈದ್ ಉಲ್ ಫಿತ್ರ್ ಹಬ್ಬದ ಸಂಭ್ರಮ. <p>ಈದ್ಗಾ ಮೈದಾನದಲ್ಲಿ ಭದ್ರತೆಗೆ ನಿಯೋಜಿಸಿದ್ದ ಎಎಸ್ ಐ ನಾರಪ್ಪ, ಮೂವರು ಸಿಬ್ಬಂದಿ ಹಾಗೂ ಸಾರ್ವಜನಿಕರೂ ಗಾಯಗೊಂಡಿದ್ದಾರೆ.</p><p>ಜಿಲ್ಲಾ ಆಸ್ಪತ್ರೆಗೆ ದಾಖಲಾಗಿರುವ ಮೂವರು ಮಕ್ಕಳು ಸೇರಿದಂತೆ 11 ಜನರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೃದಯ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರಿಗೆ ಮಾತ್ರ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರ ಆರೋಗ್ಯವೂ ಸ್ಥಿರವಾಗಿದೆ ಎಂದು ಜಿಲ್ಲಾ ಆಸ್ಪತ್ರೆಯ ಅಧೀಕ್ಷಕ ಎಂ.ಬಿ.ನಾಗೇಂದ್ರಪ್ಪ 'ಪ್ರಜಾವಾಣಿ'ಗೆ ತಿಳಿಸಿದರು.</p>.ಗುರುದೇವ ರವಿಶಂಕರ್ ಬರಹ: ನವರಾತ್ರಿ ಮತ್ತು ನಮ್ಮೊಳಗಿರುವ ಸಪ್ತಮಾತೃಕಾ ಶಕ್ತಿಗಳು.ಎಡೆದೊರೆ ನಾಡಿನಲ್ಲಿ ಈದ್ ಉಲ್ ಫಿತ್ರ್ ಸಂಭ್ರಮ: ಬಿಸಿಲಲ್ಲೇ ಸಾಮೂಹಿಕ ಪ್ರಾರ್ಥನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ತಾಲ್ಲೂಕಿನ ಆನಗೋಡು ಗ್ರಾಮದ ಈದ್ಗಾ ಮೈದಾನದಲ್ಲಿ ಈದ್ ಉಲ್ ಫಿತ್ರ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿದ್ದ ಮುಸ್ಲಿಂ ಸಮುದಾಯದವರ ಮೇಲೆ ಹೆಜ್ಜೇನು ದಾಳಿ ನಡೆಸಿವೆ. </p><p>ಘಟನೆಯಲ್ಲಿ ಮಕ್ಕಳೂ ಸೇರಿದಂತೆ 50 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. </p><p>ಗಂಭೀರವಾಗಿ ಗಾಯಗೊಂಡಿದ್ದ 11 ಜನರನ್ನು ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. </p><p>ಮಾಯಕೊಂಡ ಶಾಸಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.</p>.ಬೀದರ್ ಜಿಲ್ಲೆಯಾದ್ಯಂತ ಸಂಭ್ರಮದಿಂದ ಈದ್–ಉಲ್–ಫಿತ್ರ್ ಆಚರಣೆ.ಕಲಬುರಗಿ ಜಿಲ್ಲೆಯಾದ್ಯಂತ ಈದ್ ಉಲ್ ಫಿತ್ರ್ ಹಬ್ಬದ ಸಂಭ್ರಮ. <p>ಈದ್ಗಾ ಮೈದಾನದಲ್ಲಿ ಭದ್ರತೆಗೆ ನಿಯೋಜಿಸಿದ್ದ ಎಎಸ್ ಐ ನಾರಪ್ಪ, ಮೂವರು ಸಿಬ್ಬಂದಿ ಹಾಗೂ ಸಾರ್ವಜನಿಕರೂ ಗಾಯಗೊಂಡಿದ್ದಾರೆ.</p><p>ಜಿಲ್ಲಾ ಆಸ್ಪತ್ರೆಗೆ ದಾಖಲಾಗಿರುವ ಮೂವರು ಮಕ್ಕಳು ಸೇರಿದಂತೆ 11 ಜನರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೃದಯ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರಿಗೆ ಮಾತ್ರ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರ ಆರೋಗ್ಯವೂ ಸ್ಥಿರವಾಗಿದೆ ಎಂದು ಜಿಲ್ಲಾ ಆಸ್ಪತ್ರೆಯ ಅಧೀಕ್ಷಕ ಎಂ.ಬಿ.ನಾಗೇಂದ್ರಪ್ಪ 'ಪ್ರಜಾವಾಣಿ'ಗೆ ತಿಳಿಸಿದರು.</p>.ಗುರುದೇವ ರವಿಶಂಕರ್ ಬರಹ: ನವರಾತ್ರಿ ಮತ್ತು ನಮ್ಮೊಳಗಿರುವ ಸಪ್ತಮಾತೃಕಾ ಶಕ್ತಿಗಳು.ಎಡೆದೊರೆ ನಾಡಿನಲ್ಲಿ ಈದ್ ಉಲ್ ಫಿತ್ರ್ ಸಂಭ್ರಮ: ಬಿಸಿಲಲ್ಲೇ ಸಾಮೂಹಿಕ ಪ್ರಾರ್ಥನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>