<p>ದಾವಣಗೆರೆ: ‘ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಜೀವನಶೈಲಿ ಅಳವಡಿಸಿಕೊಂಡಿರುವ ನಾಗರಿಕರಿಗೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಉತ್ತೇಜನ ನೀಡಲಿದೆ’ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.</p>.<p>ಇಲ್ಲಿನ ಶಿವಕುಮಾರಸ್ವಾಮಿ ಬಡಾವಣೆಯಲ್ಲಿರುವ ಮಹಾನಗರ ಪಾಲಿಕೆಯ ಎಂಜಿನಿಯರ್ ಉದಯ್ಕುಮಾರ್ ಮನೆಗೆ ಬುಧವಾರ ಭೇಟಿ ನೀಡಿ ಪರಿಸರ ಸ್ನೇಹಿ ಚಟುವಟಿಕೆಗಳನ್ನು ವೀಕ್ಷಿಸಿ ಮಾತನಾಡಿದರು.</p>.<p>‘ಮಳೆ ನೀರು ಸಂಗ್ರಹ, ಸೌರಶಕ್ತಿ ಅಳವಡಿಕೆ ಹಾಗೂ ತ್ಯಾಜ್ಯ ವಿಂಗಡಣೆ ಯಂತಹ ಮಾದರಿ ಕಾರ್ಯಗಳನ್ನು ಮಾಡುತ್ತಿರುವ ನಾಗರಿಕರ ಮನೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಲಾಗುವುದು. ಇಂತಹ ಮೂರು ಮನೆಗಳಿಗೆ ಈಗಾಗಲೇ ಭೇಟಿ ನೀಡಲಾಗಿದೆ’ ಎಂದರು.</p>.<p>‘ಉದಯ್ ಕುಮಾರ್ ಅವರು ಮನೆಯಲ್ಲಿ ಹಣ್ಣು ಮತ್ತು ತರಕಾರಿ ತೋಟ ವನ್ನು ಬೆಳೆಸಿದ್ದಾರೆ. ಈ ತೋಟದಲ್ಲಿ ಕರಿಬೇವು, ಮಾವಿನಕಾಯಿ, ಡ್ರ್ಯಾಗನ್ ಫ್ರೂಟ್, ಸೀಬೆಕಾಯಿ, ಸ್ಟಾರ್ ಫ್ರೂಟ್, ನುಗ್ಗೆಕಾಯಿ ಹಾಗೂ ಸೇಬು ಮತ್ತು ದ್ರಾಕ್ಷಿ ಗಿಡಗಳಿವೆ. ಮಳೆ ನೀರು ಸಂಗ್ರಹ ಹಾಗೂ ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ನೆಲ-ಜಲ ಸಂರಕ್ಷಣಾ ಸಮಿತಿಯ ಬಲ್ಲೂರು ರವಿಕುಮಾರ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-43-773696171</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ‘ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಜೀವನಶೈಲಿ ಅಳವಡಿಸಿಕೊಂಡಿರುವ ನಾಗರಿಕರಿಗೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಉತ್ತೇಜನ ನೀಡಲಿದೆ’ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.</p>.<p>ಇಲ್ಲಿನ ಶಿವಕುಮಾರಸ್ವಾಮಿ ಬಡಾವಣೆಯಲ್ಲಿರುವ ಮಹಾನಗರ ಪಾಲಿಕೆಯ ಎಂಜಿನಿಯರ್ ಉದಯ್ಕುಮಾರ್ ಮನೆಗೆ ಬುಧವಾರ ಭೇಟಿ ನೀಡಿ ಪರಿಸರ ಸ್ನೇಹಿ ಚಟುವಟಿಕೆಗಳನ್ನು ವೀಕ್ಷಿಸಿ ಮಾತನಾಡಿದರು.</p>.<p>‘ಮಳೆ ನೀರು ಸಂಗ್ರಹ, ಸೌರಶಕ್ತಿ ಅಳವಡಿಕೆ ಹಾಗೂ ತ್ಯಾಜ್ಯ ವಿಂಗಡಣೆ ಯಂತಹ ಮಾದರಿ ಕಾರ್ಯಗಳನ್ನು ಮಾಡುತ್ತಿರುವ ನಾಗರಿಕರ ಮನೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಲಾಗುವುದು. ಇಂತಹ ಮೂರು ಮನೆಗಳಿಗೆ ಈಗಾಗಲೇ ಭೇಟಿ ನೀಡಲಾಗಿದೆ’ ಎಂದರು.</p>.<p>‘ಉದಯ್ ಕುಮಾರ್ ಅವರು ಮನೆಯಲ್ಲಿ ಹಣ್ಣು ಮತ್ತು ತರಕಾರಿ ತೋಟ ವನ್ನು ಬೆಳೆಸಿದ್ದಾರೆ. ಈ ತೋಟದಲ್ಲಿ ಕರಿಬೇವು, ಮಾವಿನಕಾಯಿ, ಡ್ರ್ಯಾಗನ್ ಫ್ರೂಟ್, ಸೀಬೆಕಾಯಿ, ಸ್ಟಾರ್ ಫ್ರೂಟ್, ನುಗ್ಗೆಕಾಯಿ ಹಾಗೂ ಸೇಬು ಮತ್ತು ದ್ರಾಕ್ಷಿ ಗಿಡಗಳಿವೆ. ಮಳೆ ನೀರು ಸಂಗ್ರಹ ಹಾಗೂ ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ನೆಲ-ಜಲ ಸಂರಕ್ಷಣಾ ಸಮಿತಿಯ ಬಲ್ಲೂರು ರವಿಕುಮಾರ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-43-773696171</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>