<p><strong>ದಾವಣಗೆರೆ:</strong> ಖೋಟಾ ನೋಟು ಮುದ್ರಿಸಿ, ಚಲಾವಣೆ ಮಾಡುತ್ತಿದ್ದ ಇಬ್ಬರು ಅಪರಾಧಿಗಳಿಗೆ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ ಹಾಗೂ ತಲಾ ₹ 40,000 ದಂಡ ವಿಧಿಸಿದೆ. </p>.<p>ದಾವಣಗೆರೆಯ ಯಲ್ಲಮ್ಮ ನಗರದ ನಿವಾಸಿ ಎಸ್. ಅಶೋಕ (40) ಹಾಗೂ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಹಲವಾಗಲು ಗ್ರಾಮದ ನಿವಾಸಿ ಹಾಲೇಶ ಶಿಕ್ಷೆಗೆ ಗುರಿಯಾದವರು. </p>.<p>2022ರಲ್ಲಿ ಯಲ್ಲಮ್ಮ ನಗರದಲ್ಲಿ ಅಪರಾಧಿಗಳು ಖೋಟಾ ನೋಟು ಚಲಾವಣೆಯಲ್ಲಿ ತೊಡಗಿದ್ದರು. ಪೊಲೀಸರು ದಾಳಿ ನಡೆಸಿ ಖೋಟಾ ನೋಟು ಹಾಗೂ ಅವುಗಳ ತಯಾರಿಕೆಗೆ ಬಳಸುತ್ತಿದ್ದ ಯಂತ್ರೋಪಕರಣಗಳನ್ನು ವಶಪಡಿಸಿಕೊಂಡಿದ್ದರು. </p>.<p>ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಪ್ರವೀಣಕುಮಾರ್ ಆರ್.ಎನ್. ಶಿಕ್ಷೆ ವಿಧಿಸಿ ತೀರ್ಪು ನೀಡಿದರು. ಅಪರಾಧಿಗಳು ಈಗಾಗಲೇ ನ್ಯಾಯಾಂಗ ಬಂಧನದಲ್ಲಿರುವುದರಿಂದ ಶಿಕ್ಷಾ ಅವಧಿಯನ್ನು ಸೆಟ್ಆಫ್ ಮಾಡಲಾಗಿದೆ. </p>.<p>ತನಿಖಾಧಿಕಾರಿ ಮಂಜುನಾಥ್ ಬಿ. ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಕೀಲ ಜಯಪ್ಪ ಕೆ. ವಾದ ಮಂಡಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಖೋಟಾ ನೋಟು ಮುದ್ರಿಸಿ, ಚಲಾವಣೆ ಮಾಡುತ್ತಿದ್ದ ಇಬ್ಬರು ಅಪರಾಧಿಗಳಿಗೆ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ ಹಾಗೂ ತಲಾ ₹ 40,000 ದಂಡ ವಿಧಿಸಿದೆ. </p>.<p>ದಾವಣಗೆರೆಯ ಯಲ್ಲಮ್ಮ ನಗರದ ನಿವಾಸಿ ಎಸ್. ಅಶೋಕ (40) ಹಾಗೂ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಹಲವಾಗಲು ಗ್ರಾಮದ ನಿವಾಸಿ ಹಾಲೇಶ ಶಿಕ್ಷೆಗೆ ಗುರಿಯಾದವರು. </p>.<p>2022ರಲ್ಲಿ ಯಲ್ಲಮ್ಮ ನಗರದಲ್ಲಿ ಅಪರಾಧಿಗಳು ಖೋಟಾ ನೋಟು ಚಲಾವಣೆಯಲ್ಲಿ ತೊಡಗಿದ್ದರು. ಪೊಲೀಸರು ದಾಳಿ ನಡೆಸಿ ಖೋಟಾ ನೋಟು ಹಾಗೂ ಅವುಗಳ ತಯಾರಿಕೆಗೆ ಬಳಸುತ್ತಿದ್ದ ಯಂತ್ರೋಪಕರಣಗಳನ್ನು ವಶಪಡಿಸಿಕೊಂಡಿದ್ದರು. </p>.<p>ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಪ್ರವೀಣಕುಮಾರ್ ಆರ್.ಎನ್. ಶಿಕ್ಷೆ ವಿಧಿಸಿ ತೀರ್ಪು ನೀಡಿದರು. ಅಪರಾಧಿಗಳು ಈಗಾಗಲೇ ನ್ಯಾಯಾಂಗ ಬಂಧನದಲ್ಲಿರುವುದರಿಂದ ಶಿಕ್ಷಾ ಅವಧಿಯನ್ನು ಸೆಟ್ಆಫ್ ಮಾಡಲಾಗಿದೆ. </p>.<p>ತನಿಖಾಧಿಕಾರಿ ಮಂಜುನಾಥ್ ಬಿ. ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಕೀಲ ಜಯಪ್ಪ ಕೆ. ವಾದ ಮಂಡಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>