ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಲದ ಹೊರೆ: ರೈತ ಆತ್ಮಹತ್ಯೆ

Published 7 ಅಕ್ಟೋಬರ್ 2023, 14:23 IST
Last Updated 7 ಅಕ್ಟೋಬರ್ 2023, 14:23 IST
ಅಕ್ಷರ ಗಾತ್ರ

ಚಿನ್ನಿಕಟ್ಟೆ (ನ್ಯಾಮತಿ): ಗ್ರಾಮದ ರೈತ ಎನ್.ಎಸ್.ನಾಗರಾಜ (42) ಸಾಲದ ಹೊರೆಯಿಂದಾಗಿ ಶನಿವಾರ ಮನೆಯಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಾಗರಾಜ ಅವರು ನ್ಯಾಮತಿ ಕರ್ಣಾಟಕ ಬ್ಯಾಂಕ್‌ನಲ್ಲಿ ₹ 40 ಸಾವಿರ, ಕೆನರಾ ಬ್ಯಾಂಕ್‌ನಲ್ಲಿ ₹ 3 ಲಕ್ಷ ಹಾಗೂ ಸವಳಂಗ ಎಸ್‌ಬಿಐ ಬ್ಯಾಂಕ್‌ನಲ್ಲಿ ಬಂಗಾರ ಅಡವಿಟ್ಟು ಸಾಲ ಪಡೆದುಕೊಂಡಿದ್ದರು. ಖಾಸಗಿಯವರಿಂದಲೂ ಕೈಗಡ ಸಾಲ ಪಡೆದುಕೊಂಡಿದ್ದರು. ಈ ಬಾರಿ ಅನಾವೃಷ್ಟಿಯ ಕಾರಣ ಬೆಳೆ ಬಂದಿಲ್ಲ. ಸಾಲ ತೀರಿಸುವುದು ಹೇಗೆ ಎಂದು ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪತ್ನಿ ನಳಿನಾ ನ್ಯಾಮತಿ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಪಿಐ ಎನ್.ಎಸ್.ರವಿ ತನಿಖೆ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT