<p><strong>ದಾವಣಗೆರೆ</strong>: ‘ರೈತರ ಆತ್ಮಹತ್ಯೆ ಪ್ರಕರಣಗಳನ್ನು ತಡೆಗಟ್ಟಿ, ಕೃಷಿ ಕ್ಷೇತ್ರದ ಬಿಕ್ಕಟ್ಟುಗಳನ್ನು ಪರಿಹರಿಸಲು ಶಾಶ್ವತ ಯೋಜನೆಗಳನ್ನು ಜಾರಿಗೆ ತರಬೇಕು’ ಎಂದು ಒತ್ತಾಯಿಸಿ ರಾಷ್ಟ್ರೀಯ ಕಿಸಾನ್ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.</p>.<p>ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೊಂಚೆ ಶಿವರುದ್ರಪ್ಪ ಮಾತನಾಡಿ, ‘ರಾಷ್ಟ್ರೀಯ ಅಪರಾಧಗಳ ದಾಖಲೆಗಳ ಬ್ಯೂರೋದ 2024ರ ವರದಿಯ ಪ್ರಕಾರ ದೇಶದಲ್ಲಿ ರೈತರ ಆತ್ಮಹತ್ಯೆ ಪ್ರಮಾಣ ಸ್ಪಲ್ಪಮಟ್ಟಿಗೆ ತಗ್ಗಿವೆ. ಆದರೆ, ಕರ್ನಾಟಕದಲ್ಲಿ 2023ಕ್ಕೆ ಹೋಲಿಸಿದರೆ 2024ರಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಶೇ 22.61ರಷ್ಟು ಹೆಚ್ಚಾಗಿರುವುದು ಆತಂಕ ಮೂಡಿಸಿದೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>‘ಒಣಬೇಸಾಯ ನಂಬಿದ ರೈತರಿಗೆ ಸೂಕ್ತ ಆದಾಯ ಸಿಗದಿರುವುದು, ಕಳಪೆ ಬೀಜಗಳ ಬಳಕೆ, ರಸಗೊಬ್ಬರಗಳ ಬೆಲೆ ಏರಿಕೆ, ಅನಿಶ್ಚಿತ ಮಳೆ ಮತ್ತು ಕೀಟಬಾಧೆಯಿಂದ ಬೆಳೆ ಹಾನಿಯಾಗುತ್ತಿರುವುದು ರೈತರ ಸ್ಥಿತಿಯನ್ನು ಚಿಂತಾ ಜನಕವಾಗಿಸಿದೆ. ಬೆಳೆದ ಬೆಳೆಯನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವ ಸೂಕ್ತ ವ್ಯವಸ್ಥೆ ಇಲ್ಲದೆ ಮಧ್ಯವರ್ತಿಗಳ ಹಾವಳಿಯಿಂದಾಗಿ ರೈತರು ತೀವ್ರ ನಷ್ಟ ಅನುಭವಿಸುತ್ತಿದ್ದಾರೆ’ ಎಂದು ಹೇಳಿದರು.</p>.<p>‘ರೈತರ ಬದುಕು ಹಸನಾಗಿಸಲು ಸರ್ಕಾರವು ತಕ್ಷಣವೇ ಕೆಲವು ಪ್ರಮುಖ ಕ್ರಮಗಳನ್ನು ಕೈಗೊಳ್ಳಬೇಕು. ಕೃಷಿಗೆ ಅಗತ್ಯವಿರುವ ಬಿತ್ತನೆ ಬೀಜ, ಗೊಬ್ಬರ, ಔಷಧಿ ಮತ್ತು ಕೃಷಿ ಯಂತ್ರೋಪಕರಣಗಳನ್ನು ಎಲ್ಲಾ ವರ್ಗದ ರೈತರಿಗೂ ಕನಿಷ್ಠ ಶೇ 75ರಷ್ಟು ರಿಯಾಯಿತಿ ದರದಲ್ಲಿ ಸಕಾಲದಲ್ಲಿ ಒದಗಿಸಬೇಕು’ ಎಂದು ಆಗ್ರಹಿಸಿದರು.</p>.<p>ಸಂಘದ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ್, ಜಿಲ್ಲಾ ಘಟಕದ ಅಧ್ಯಕ್ಷ ಜಿ.ಎಸ್.ತಿಪ್ಪೇಸ್ವಾಮಿ, ಪ್ರಮುಖರಾದ ಬಿ.ಎನ್. ವಿಜಯಕುಮಾರ್, ಜಿ.ಎಚ್. ಜಯಪ್ರಕಾಶ್, ಕೆ.ಎಸ್.ಶಿವಕುಮಾರ್, ಎಸ್.ಆರ್.ಬಸವರಾಜಪ್ಪ ಹಾಗೂ ಡಿ.ಕೆ.ಪರಮೇಶ್, ರುದ್ರೇಶ್ ಮತ್ತಿತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-43-1198062829</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ‘ರೈತರ ಆತ್ಮಹತ್ಯೆ ಪ್ರಕರಣಗಳನ್ನು ತಡೆಗಟ್ಟಿ, ಕೃಷಿ ಕ್ಷೇತ್ರದ ಬಿಕ್ಕಟ್ಟುಗಳನ್ನು ಪರಿಹರಿಸಲು ಶಾಶ್ವತ ಯೋಜನೆಗಳನ್ನು ಜಾರಿಗೆ ತರಬೇಕು’ ಎಂದು ಒತ್ತಾಯಿಸಿ ರಾಷ್ಟ್ರೀಯ ಕಿಸಾನ್ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.</p>.<p>ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೊಂಚೆ ಶಿವರುದ್ರಪ್ಪ ಮಾತನಾಡಿ, ‘ರಾಷ್ಟ್ರೀಯ ಅಪರಾಧಗಳ ದಾಖಲೆಗಳ ಬ್ಯೂರೋದ 2024ರ ವರದಿಯ ಪ್ರಕಾರ ದೇಶದಲ್ಲಿ ರೈತರ ಆತ್ಮಹತ್ಯೆ ಪ್ರಮಾಣ ಸ್ಪಲ್ಪಮಟ್ಟಿಗೆ ತಗ್ಗಿವೆ. ಆದರೆ, ಕರ್ನಾಟಕದಲ್ಲಿ 2023ಕ್ಕೆ ಹೋಲಿಸಿದರೆ 2024ರಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಶೇ 22.61ರಷ್ಟು ಹೆಚ್ಚಾಗಿರುವುದು ಆತಂಕ ಮೂಡಿಸಿದೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>‘ಒಣಬೇಸಾಯ ನಂಬಿದ ರೈತರಿಗೆ ಸೂಕ್ತ ಆದಾಯ ಸಿಗದಿರುವುದು, ಕಳಪೆ ಬೀಜಗಳ ಬಳಕೆ, ರಸಗೊಬ್ಬರಗಳ ಬೆಲೆ ಏರಿಕೆ, ಅನಿಶ್ಚಿತ ಮಳೆ ಮತ್ತು ಕೀಟಬಾಧೆಯಿಂದ ಬೆಳೆ ಹಾನಿಯಾಗುತ್ತಿರುವುದು ರೈತರ ಸ್ಥಿತಿಯನ್ನು ಚಿಂತಾ ಜನಕವಾಗಿಸಿದೆ. ಬೆಳೆದ ಬೆಳೆಯನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವ ಸೂಕ್ತ ವ್ಯವಸ್ಥೆ ಇಲ್ಲದೆ ಮಧ್ಯವರ್ತಿಗಳ ಹಾವಳಿಯಿಂದಾಗಿ ರೈತರು ತೀವ್ರ ನಷ್ಟ ಅನುಭವಿಸುತ್ತಿದ್ದಾರೆ’ ಎಂದು ಹೇಳಿದರು.</p>.<p>‘ರೈತರ ಬದುಕು ಹಸನಾಗಿಸಲು ಸರ್ಕಾರವು ತಕ್ಷಣವೇ ಕೆಲವು ಪ್ರಮುಖ ಕ್ರಮಗಳನ್ನು ಕೈಗೊಳ್ಳಬೇಕು. ಕೃಷಿಗೆ ಅಗತ್ಯವಿರುವ ಬಿತ್ತನೆ ಬೀಜ, ಗೊಬ್ಬರ, ಔಷಧಿ ಮತ್ತು ಕೃಷಿ ಯಂತ್ರೋಪಕರಣಗಳನ್ನು ಎಲ್ಲಾ ವರ್ಗದ ರೈತರಿಗೂ ಕನಿಷ್ಠ ಶೇ 75ರಷ್ಟು ರಿಯಾಯಿತಿ ದರದಲ್ಲಿ ಸಕಾಲದಲ್ಲಿ ಒದಗಿಸಬೇಕು’ ಎಂದು ಆಗ್ರಹಿಸಿದರು.</p>.<p>ಸಂಘದ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ್, ಜಿಲ್ಲಾ ಘಟಕದ ಅಧ್ಯಕ್ಷ ಜಿ.ಎಸ್.ತಿಪ್ಪೇಸ್ವಾಮಿ, ಪ್ರಮುಖರಾದ ಬಿ.ಎನ್. ವಿಜಯಕುಮಾರ್, ಜಿ.ಎಚ್. ಜಯಪ್ರಕಾಶ್, ಕೆ.ಎಸ್.ಶಿವಕುಮಾರ್, ಎಸ್.ಆರ್.ಬಸವರಾಜಪ್ಪ ಹಾಗೂ ಡಿ.ಕೆ.ಪರಮೇಶ್, ರುದ್ರೇಶ್ ಮತ್ತಿತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-43-1198062829</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>