<p>ಮಲೇಬೆನ್ನೂರು: ರೈತರು ಪಡೆದ ಕೃಷಿ ಹಾಗೂ ನಿಗದಿತ ಅವಧಿಯ ಸಾಲ ವಸೂಲಾತಿಗೆ ಬ್ಯಾಂಕ್ ತೆಗೆದುಕೊಂಡ ಕ್ರಮವನ್ನು ವಿರೋಧಿಸಿ ಸಮೀಪದ ನಂದಿತಾವರೆ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಎದುರು ಸೋಮವಾರ ರೈತರು ಪ್ರತಿಭಟನೆ ನಡೆಸಿದರು.</p>.<p>ರೈತರ ಬೆಳೆಸಾಲ ವಸೂಲು ಮಾಡಲು ಕಾನೂನಿನಲ್ಲಿ ಅವಕಾಶ ಇಲ್ಲ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಹಾಳೂರು ನಾಗರಾಜ್ ಕಿಡಿಕಾರಿದರು.</p>.<p>ಸಾಲ ನೀಡಿದ ಬ್ಯಾಂಕ್ ನ್ಯಾಯಾಧೀಕರಣದ ಆದೇಶದಂತೆ ಹೊಲ ಹರಾಜು ಹಾಕಿ ಬಲವಂತವಾಗಿ ವಸೂಲಾತಿ ಮಾಡಲು ಮುಂದಾಗಿರುವ ಕ್ರಮವನ್ನು ಪ್ರತಿಭಟನಕಾರರು ಖಂಡಿಸಿದರು. ಬೆಳೆಸಾಲ ವಸೂಲು ಕಾನೂನು ಕುರಿತು ಲಿಖಿತ ದಾಖಲೆ ನೀಡುವಂತೆ ಆಗ್ರಹಿಸಿದರು.</p>.<p>ಸ್ಥಳಕ್ಕೆ ರೈತ ಮುಖಂಡ ತೇಜಸ್ವಿ ಪಟೇಲ್ ಭೇಟಿ ನೀಡಿದ್ದರು. ಬ್ಯಾಂಕ್ ಅಧಿಕಾರಿಗಳೊಂದಿಗೆ ಚರ್ಚಿಸಿ ಸಾಲ ವಸೂಲಾತಿ ಕ್ರಮಗಳ ಬಗ್ಗೆ ಮಾಹಿತಿ ಪಡೆದರು. ಬಲವಂತವಾಗಿ ಸಾಲ ವಸೂಲಿ ಮಾಡಿ ರೈತರನ್ನು ಸಂಕಷ್ಟಕ್ಕೆ ದೂಡಬೇಡಿ ಎಂದು ಮನವಿ ಮಾಡಿದರು.</p>.<p>‘ರೈತರು ಪಡೆದ ಸಾಲ ₹ 20 ಲಕ್ಷ ಮೀರಿದ ನಂತರ ಕಾನೂನು ಕ್ರಮ ಜರುಗಿಸುವುದು ಅನಿವಾರ್ಯ’ ಎಂದು ಪ್ರಾದೇಶಿಕ ವ್ಯವಸ್ಥಾಪಕ ಕೆ.ವಿ.ಕಾಮತ್ ಹೇಳಿದರು.</p>.<p>ಪ್ರಾದೇಶಿಕ ಕಚೇರಿಯಲ್ಲಿ ಬುಧವಾರ ಚರ್ಚಿಸಿ ಪರಿಹಾರ ಕಂಡುಕೊಳ್ಳುವ ಕುರಿತು ತೀರ್ಮಾನಿಸಿದ ನಂತರ ರೈತರು ಧರಣಿ ಅಂತ್ಯಗೊಳಿಸಿದರು.</p>.<p>ಶಾಖಾ ವ್ಯವಸ್ಥಾಪಕ ಮಹಾಂತೇಶ್, ರೈತ ಮುಖಂಡರಾದ ಶಂಭಣ್ಣ, ತಿಪ್ಪೇಸ್ವಾಮಿ, ನಂದೀಶಪ್ಪ, ನಾಗಪ್ಪ, ಪರಮೇಶ್ವರಪ್ಪ, ಚಂದ್ರಣ್ಣ, ಬಸವರಾಜ್, ನಾರಾಯಣಪ್ಪ, ಸೋಮಶೇಖರಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-43-1689761109</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಲೇಬೆನ್ನೂರು: ರೈತರು ಪಡೆದ ಕೃಷಿ ಹಾಗೂ ನಿಗದಿತ ಅವಧಿಯ ಸಾಲ ವಸೂಲಾತಿಗೆ ಬ್ಯಾಂಕ್ ತೆಗೆದುಕೊಂಡ ಕ್ರಮವನ್ನು ವಿರೋಧಿಸಿ ಸಮೀಪದ ನಂದಿತಾವರೆ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಎದುರು ಸೋಮವಾರ ರೈತರು ಪ್ರತಿಭಟನೆ ನಡೆಸಿದರು.</p>.<p>ರೈತರ ಬೆಳೆಸಾಲ ವಸೂಲು ಮಾಡಲು ಕಾನೂನಿನಲ್ಲಿ ಅವಕಾಶ ಇಲ್ಲ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಹಾಳೂರು ನಾಗರಾಜ್ ಕಿಡಿಕಾರಿದರು.</p>.<p>ಸಾಲ ನೀಡಿದ ಬ್ಯಾಂಕ್ ನ್ಯಾಯಾಧೀಕರಣದ ಆದೇಶದಂತೆ ಹೊಲ ಹರಾಜು ಹಾಕಿ ಬಲವಂತವಾಗಿ ವಸೂಲಾತಿ ಮಾಡಲು ಮುಂದಾಗಿರುವ ಕ್ರಮವನ್ನು ಪ್ರತಿಭಟನಕಾರರು ಖಂಡಿಸಿದರು. ಬೆಳೆಸಾಲ ವಸೂಲು ಕಾನೂನು ಕುರಿತು ಲಿಖಿತ ದಾಖಲೆ ನೀಡುವಂತೆ ಆಗ್ರಹಿಸಿದರು.</p>.<p>ಸ್ಥಳಕ್ಕೆ ರೈತ ಮುಖಂಡ ತೇಜಸ್ವಿ ಪಟೇಲ್ ಭೇಟಿ ನೀಡಿದ್ದರು. ಬ್ಯಾಂಕ್ ಅಧಿಕಾರಿಗಳೊಂದಿಗೆ ಚರ್ಚಿಸಿ ಸಾಲ ವಸೂಲಾತಿ ಕ್ರಮಗಳ ಬಗ್ಗೆ ಮಾಹಿತಿ ಪಡೆದರು. ಬಲವಂತವಾಗಿ ಸಾಲ ವಸೂಲಿ ಮಾಡಿ ರೈತರನ್ನು ಸಂಕಷ್ಟಕ್ಕೆ ದೂಡಬೇಡಿ ಎಂದು ಮನವಿ ಮಾಡಿದರು.</p>.<p>‘ರೈತರು ಪಡೆದ ಸಾಲ ₹ 20 ಲಕ್ಷ ಮೀರಿದ ನಂತರ ಕಾನೂನು ಕ್ರಮ ಜರುಗಿಸುವುದು ಅನಿವಾರ್ಯ’ ಎಂದು ಪ್ರಾದೇಶಿಕ ವ್ಯವಸ್ಥಾಪಕ ಕೆ.ವಿ.ಕಾಮತ್ ಹೇಳಿದರು.</p>.<p>ಪ್ರಾದೇಶಿಕ ಕಚೇರಿಯಲ್ಲಿ ಬುಧವಾರ ಚರ್ಚಿಸಿ ಪರಿಹಾರ ಕಂಡುಕೊಳ್ಳುವ ಕುರಿತು ತೀರ್ಮಾನಿಸಿದ ನಂತರ ರೈತರು ಧರಣಿ ಅಂತ್ಯಗೊಳಿಸಿದರು.</p>.<p>ಶಾಖಾ ವ್ಯವಸ್ಥಾಪಕ ಮಹಾಂತೇಶ್, ರೈತ ಮುಖಂಡರಾದ ಶಂಭಣ್ಣ, ತಿಪ್ಪೇಸ್ವಾಮಿ, ನಂದೀಶಪ್ಪ, ನಾಗಪ್ಪ, ಪರಮೇಶ್ವರಪ್ಪ, ಚಂದ್ರಣ್ಣ, ಬಸವರಾಜ್, ನಾರಾಯಣಪ್ಪ, ಸೋಮಶೇಖರಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-43-1689761109</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>